Featured

ಉಡುಪಿ : ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳ ಅಂತಿಮ ಮತದಾರರ ಪಟ್ಟಿ ಪ್ರಕಟ: ಜಿಲ್ಲಾಧಿಕಾರಿ  – Vishwanews24

ಉಡುಪಿ : ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳ ಅಂತಿಮ ಮತದಾರರ ಪಟ್ಟಿ ಪ್ರಕಟ: ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ

ಉಡುಪಿ: ಚುನಾವಣಾ ಆಯೋಗದ ನಿರ್ದೇಶನ ಅನ್ವಯ ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳ ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ತಿಳಿಸಿದರು. ಅವರು ಇಂದು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ವಿವಿಧ ರಾಜಕೀಯ ಪಕ್ಷಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.

2023 ಜನವರಿ 1 ರ ಅರ್ಹತಾ ದಿನಾಂಕವನ್ನಾಗಿಟ್ಟುಕೊಂಡು ಐದು ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿಯನ್ನು ಜನವರಿ 5 ರಂದು ಎಲ್ಲಾ ಮತಗಟ್ಟೆಗಳಲ್ಲಿ, ಉಪ ವಿಭಾಗೀಯ, ತಾಲೂಕು ಕಚೇರಿ ಸೇರಿದಂತೆ ಜಿಲ್ಲಾಧಿಕಾರಿಯ ಕಚೇರಿ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ ಎಂದರು.

ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ 1,12,126 ಗಂಡಸರು, 1,17,421 ಮಹಿಳೆಯರು, 3 ಅಲ್ಪಸಂಖ್ಯಾತರು ಸೇರಿದಂತೆ ಒಟ್ಟು 2,29,550 ಮತದಾರರಿದ್ದಾರೆ. ಕುಂದಾಪುರ ವಿಧಾನಸಭಾ ಕ್ಷೇತ್ರದಲ್ಲಿ 98,224 ಗಂಡಸರು, 1,06,298 ಮಹಿಳೆಯರು, 3 ಅಲ್ಪಸಂಖ್ಯಾತರು ಸೇರಿದಂತೆ ಒಟ್ಟು 2,04,525 ಮತದಾರರಿದ್ದಾರೆ. ಉಡುಪಿ ವಿಧಾನಸಭಾ ಕ್ಷೇತ್ರದಲ್ಲಿ 1,02,192 ಗಂಡಸರು, 1,09,439 ಮಹಿಳೆಯರು ಸೇರಿದಂತೆ ಒಟ್ಟು 2,11,631 ಮತದಾರರಿದ್ದು, ಅಲ್ಪಸಂಖ್ಯಾತ ಮತದಾರರಿರುವುದಿಲ್ಲ. ಕಾಪು ವಿಧಾನಸಭಾ ಕ್ಷೇತ್ರದಲ್ಲಿ 88,114 ಗಂಡಸರು, 95,968 ಮಹಿಳೆಯರು, 6 ಅಲ್ಪಸಂಖ್ಯಾತರು ಸೇರಿದಂತೆ ಒಟ್ಟು 1,84,088 ಮತದಾರರಿದ್ದಾರೆ. ಕಾರ್ಕಳ ವಿಧಾನಸಭಾ ಕ್ಷೇತ್ರದಲ್ಲಿ 89,404 ಗಂಡಸರು, 97,047 ಮಹಿಳೆಯರು, ಸೇರಿದಂತೆ ಒಟ್ಟು 1,86,451 ಮತದಾರರಿದ್ದಾರೆ.

ಜಿಲ್ಲೆಯ ಒಟ್ಟು 5 ವಿಧಾನಸಭಾ ಕ್ಷೇತ್ರಗಳಿಂದ 4,90,060 ಗಂಡಸರು, 5,26173 ಮಹಿಳೆಯರು, 12 ಅಲ್ಪಸಂಖ್ಯಾತರು ಸೇರಿದಂತೆ ಒಟ್ಟು 10,16,245 ಮತದಾರರಿದ್ದಾರೆ ಎಂದರು. ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಅವಧಿಯಲ್ಲಿ ಹೊಸದಾಗಿ 16,827 ಮತದಾರರು ಸೇರ್ಪಡೆಯಾದರೆ, 5783 ಮತದಾರರನ್ನು ತೆಗೆದುಹಾಕಲಾಗಿದೆ. 13,321 ತಿದ್ದುಪಡಿ ಹಾಗೂ ವರ್ಗಾವಣೆಗೊಳಿಸಲಾಗಿದೆ. ಈ ಬಾರಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆಯ ಸಂದರ್ಭದಲ್ಲಿ 13,816 ಯುವ ಮತದಾರರು ಹಾಗೂ 11,331 ವಿಶೇಷ ಚೇತನರು ನೋಂದಣಿಯಾಗಿರುತ್ತಾರೆ ಎಂದರು. ಮತದಾರರ ಪಟ್ಟಿಗೆ ಸಂಬAದಿಸಿದ ಮಾಹಿತಿಗಳನ್ನು ಸಾರ್ವಜನಿಕರು ಪಡೆಯುವ ಸಲುವಾಗಿ , ಉಡುಪಿ ಜಿಲ್ಲಾ ಮಟ್ಟದಲ್ಲಿ ಜಿಲ್ಲಾ ಮಟ್ಟದ ಮತದಾರರ ಸಹಾಯವಾಣಿ ಕೇಂದ್ರ ತೆರೆದು ಸಾರ್ವಜನಿಕರು ಮಾಹಿತಿಗಳನ್ನು ಉಚಿತವಾಗಿ ಕರೆಗಳ ಮೂಲಕ ಪಡೆಯಲು ಟೋಲ್ ಪ್ರೀ ಸಂಖ್ಯೆ 1950 ಅಳವಡಿಸಲಾಗಿದೆ ಸಾರ್ವಜನಿಕರು ಇದರ ಪ್ರಯೋಜನ ಪಡೆಯುವಂತೆ ತಿಳಿಸಿದರು. ಜನವರಿ 25 ರಂದು ರಾಷ್ಟ್ರೀಯ ಮತದಾರರ ದಿನಾಚರಣ ಕಾರ್ಯಕ್ರಮವನ್ನು ಅಜ್ಜರಕಾಡು ಪುರಭವನದಲ್ಲಿ ನಡೆಯುತ್ತಿದ್ದು, ಅದೇ ರೀತಿಯಲ್ಲಿ ತಾಲೂಕು ಮತ್ತು ಕತಗಟ್ಟೆಗಳ ವ್ಯಪ್ತಿಯಲ್ಲಿ ನಡೆಯಲಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೆಕು ಎಂದರು.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

1 day ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

1 day ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago