ಉಡುಪಿ ಜಿಲ್ಲೆಯ ಟೋಲ್ ಗೇಟ್ ಗಳಲ್ಲಿ ಹಿಂದಿ ಭಾಷಿಕರಿಂದ ದೌರ್ಜನ್ಯ ಹೆಚ್ಚಾಗುತ್ತಿದ್ದು, ಕನ್ನಡಿಗರ ಮೇಲೆ ದರ್ಪ ತೋರಿಸುತ್ತಿದ್ದಾರೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ಗೌರವಾಧ್ಯಕ್ಷ ಅನ್ಸಾರ್ ಅಹಮ್ಮದ್ ಹೇಳಿದರು. ಉಡುಪಿಯಲ್ಲಿ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಕೆಲ ದಿನಗಳ ಹಿಂದೆ ಸಾಸ್ತಾನ ಟೋಲ್ ಗೇಟ್ ನಲ್ಲಿ ಮಾಜಿ ಸೈನಿಕರೊಬ್ಬರನ್ನು ಅವಮಾನಿಸಲಾಯಿತು. ಅಲ್ಲದೇ ಕನ್ನಡಪರ ಸಂಘಟನೆ ವಾಹನವನ್ನು ಹೆಜಮಾಡಿ ಟೋಲ್ ಗೇಟ್ ನಲ್ಲಿ ಅವಮಾನಿಸಿದ್ದಾರೆ. ಹಿಂದಿ ಭಾಷಿಕರಿಂದ ಕನ್ನಡಿಗರ ಮೇಲೆ ಪದೇ ಪದೇ ದೌರ್ಜನ್ಯ ನಡೆಯುತ್ತಿದೆ. ಈ ಘಟನೆ ಪುನರಾವರ್ತನೆ ಆದರೆ ಟೋಲ್ ಗೇಟ್ ಗೆ ಮುತ್ತಿಗೆ ಹಾಕುವುದಾಗಿ ಎಚ್ಚರಿಸಿದರು. ಅಲ್ಲದೇ ಟೋಲ್ ಗೇಟ್ ಗಳಲ್ಲಿ ಅನ್ಯ ರಾಜ್ಯದವರನ್ನು ತೆಗೆದು ಹಾಕಿ ಎಂದು ಒತ್ತಾಯಿಸಿದರು. ಕನ್ನಡಿಗರ ಮೇಲೆ ದೌರ್ಜನ್ಯ ತೋರಿಸುವುದಕ್ಕಾಗಿಯೇ ಅನ್ಯ ಭಾಷಿಕರನ್ನು ಟೋಲ್ ಗೇಟ್ ಗಳಲ್ಲಿ ನೇಮಿಸಿದ್ದಾರೆಯೇ ಎನ್ನುವ ಸಂಶಯ ವ್ಯಕ್ತವಾಗುತ್ತಿದೆ ಎಂದರು. ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ಪುಮುಖರಾದ ಸುಜಯ್ ಪೂಜಾರಿ,ಜ್ಯೋತಿ ಶೇರಿಗಾರ್ತಿ, ಸಯ್ಯದ್ ಇಝಾಜ್, ಸುಧೀರ್ ಪೂಜಾರಿ, ದೇವಕಿ ಬಾರ್ಕೂರು ಉಪಸ್ಥಿತರಿದ್ದರು.
ಇದನ್ನೂ ಓದಿ:
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…
ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…
ಟೈಮಿಂಗ್ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್ಪ್ರೆಸ್ ಬಸ್ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…
ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…
ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…