Featured

ಉಡುಪಿ ಜಿಲ್ಲೆಯ ಪ್ರಗತಿ ಪರಿಶೀಲನಾ ಸಭೆ –  ಮುಖ್ಯಮಂತ್ರಿಗಳ ಆರಂಭಿಕ ಮಾತುಗಳ ಹೈಲೈಟ್ಸ್  – Vishwanews24

ಉಡುಪಿ ಜಿಲ್ಲೆಯ ಪ್ರಗತಿ ಪರಿಶೀಲನಾ ಸಭೆ –  ಮುಖ್ಯಮಂತ್ರಿಗಳ ಆರಂಭಿಕ ಮಾತುಗಳ ಹೈಲೈಟ್ಸ್

ಜನರ ಕೆಲಸ ಮಾಡುವ ವಿಚಾರದಲ್ಲಿ ರಾಜಕೀಯ ಮಾಡಬಾರದು

ಜನ ಸ್ಪಂದನೆಗೆ ಸಿದ್ದರಿಲ್ಲದವರು ಅಧಿಕಾರಿ ಸ್ಥಾನ ತ್ಯಾಗ ಮಾಡಿ.

ಪೂರ್ಣ ಮನೆ ಬಿದ್ದರೆ 5 ಲಕ್ಷ

ಮಳೆ ಹಾನಿ ಸಮೀಕ್ಷೆ ನಡೆಸಿ ಪರಿಹಾರ ನೀಡಿ

2 ವರ್ಷಗಳಲ್ಲಿ ಕಾಲು ಸಂಕ ನಿರ್ಮಾಣಕ್ಕೆ ಸೂಚನೆ

• ಜನರ ಕೆಲಸ ಮಾಡುವ ವಿಚಾರದಲ್ಲಿ ರಾಜಕೀಯ ಮಾಡಬಾರದು. ಪಕ್ಷ ರಾಜಕಾರಣ ಚುನಾವಣೆ ವೇಳೆ ಮಾತ್ರ.
• ಅಧಿಕಾರಿಗಳು ನಿಲಕ್ಷ್ಯ, ಉದಾಸೀನ ತೋರಿಸಿದರೆ ಜನರಿಗೆ ಸ್ಪಂದಿಸದಿದ್ದರೆ ಎಷ್ಟೇ ದೊಡ್ಡ ಅಧಿಕಾರಿಯಾಗಿದ್ದರೂ ಸಹಿಸಲು ಸಾಧ್ಯವಿಲ್ಲ. ಜನ ಸ್ಪಂದನೆಗೆ ಸಿದ್ದರಿಲ್ಲದವರು ಸ್ಥಾನ ತ್ಯಾಗ ಮಾಡಿ. ಜನಸ್ಪಂದನೆಗೆ ಸಾಕಷ್ಟು ಅಧಿಕಾರಿಗಳು ಇದ್ದಾರೆ.
• ಅಧಿಕಾರಿಗಳಿಗೆ ಸ್ಥಾನ ಮಾನ ಸಂಬಳ ಸವಲತ್ತುಗಳು ಸಿಗುವುದು ಜನರ ತೆರಿಗೆ ಹಣದಿಂದ.
• ಜಿಲ್ಲಾ ಮಟ್ಟದ ಅಧಿಕಾರಿಗಳು ಕಚೇರಿಯಲ್ಲಿ ಕುಳಿತು ಕೆಲಸ ಮಾಡಬಾರದು. ಸ್ಥಳಕ್ಕೆ ಬೇಟಿ ನೀಡುವುದು ಕಡ್ಡಾಯ.
• ಜಿಲ್ಲಾ ರಕ್ಷಣಾಧಿಕಾರಿಗಳು ಠಾಣೆಗಳಿಗೆ ಭೇಟಿ ನೀಡಬೇಕು. ದೂರುಗಳು ಬಂದಾಗ ಮೊದಲು ಎಫ್ಐಆರ್ ದಾಖಲಿಸಿಕೊಳ್ಳಿ.
ಪೂರ್ಣ ಮನೆ ಬಿದ್ದರೆ ೫ ಲಕ್ಷ
ಮಳೆ ಅನಾಹುತಗಳಲ್ಲಿ ಪೂರ್ಣ ಮನೆ ಹಾನಿ ಆಗಿದ್ದರೆ ೫ ಲಕ್ಷ ರೂ ಪರಿಹಾರ ನೀಡಬೇಕು. ಇದು ಸರ್ಕಾರದ ನಿರ್ಧಾರ. ಮನೆ ಸ್ವಂತ ಜಾಗದಲ್ಲಿ ಕಟ್ಟಿದ್ದಾರೋ-ಇಲ್ಲವೋ, ಹಕ್ಕು ಪತ್ರ ಇದೆಯೋ-ಇಲ್ಲವೋ ಎನ್ನುವುದನ್ನು ನೋಡದೆ ಮಳೆಯಿಂದ ಬಿದ್ದ ಮನೆಗೆ ಪರಿಹಾರ ನೀಡಿ. ಮೊದಲು ಮನೆ ಆಗಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಮಳೆ ಹಾನಿ ಸಮೀಕ್ಷೆ ನಡೆಸಿ ಪರಿಹಾರ ನೀಡಿ
ಮಳೆ ಹಾನಿಗೆ ಸಂಬಂಧಪಟ್ಟಂತೆ ಸಂಪೂರ್ಣ ಸಮೀಕ್ಷೆ ನಡೆಸಿ. ಬೆಳೆ ಹಾನಿಗೊಳಗಾದವರಿಗೆ ತಪ್ಪದೆ ಪರಿಹಾರ ಸಿಗಬೇಕು. ಸ್ಥಳಕ್ಕೆ ಭೇಟಿ ನೀಡಿ ಸಮೀಕ್ಷೆ ನಡೆಸಿ. ಬೆಳೆ ಹಾನಿ ಆದವರಿಗೆ ಪರ್ಯಾಯ ಬೆಳೆ ಬೆಳೆಯಲು ಪ್ರೋತ್ಸಾಹಿಸಬೇಕು. ಒಮ್ಮೆ ಬೆಳೆ ಪರಿಹಾರ ಕೊಟ್ಟ ಬಳಿಕ ಪರ್ಯಾಯ ಬೆಳೆ ಬೆಳೆ ಬೆಳೆಯಲು ಅಗತ್ಯವಾದ ಬೀಜ, ಗೊಬ್ಬರ ಸೇರಿದಂತೆ ಎಲ್ಲಾ ಸವಲತ್ತುಗಳನ್ನು ಒದಗಿಸಿ. ಅಡಕೆ ಬೆಳೆಗೆ ಬಂದಿರುವ ಎಲೆಚುಕ್ಕೆ ರೋಗದ ಬಗ್ಗೆ ಕೃಷಿ ವಿಜ್ಞಾನಿಗಳ ನೆರವು ಪಡೆದು ಪರಿಹಾರ ಕಂಡುಕೊಳ್ಳಬೇಕು ಎಂದು ಸೂಚಿಸಿದರು.
೨ ವರ್ಷಗಳಲ್ಲಿ ಕಾಲು ಸಂಕ ನಿರ್ಮಾಣಕ್ಕೆ ಸೂಚನೆ
ಗ್ರಾಮೀಣ ಭಾಗದ ಜನರಿಗೆ ಸಮಸ್ಯೆ ಆಗಿರುವ ಕಾಲು ಸಂಕದಿಂದ ಆಗಿರುವ ಅನಾಹುತಗಳನ್ನು ತಪ್ಪಿಸಲು ಸೇತುವೆಗಳನ್ನು ನಿರ್ಮಿಸಬೇಕು. ನರೇಗಾ ಮತ್ತು ಲೋಕೋಪಯೋಗಿ ಜಂಟಿಯಾಗಿ ಸೇತುವೆಗಳನ್ನು ನಿಮಿಸಲು ಯೋಜನೆ ಸಿದ್ದಪಡಿಸಿ ಮತ್ತು ಎರಡು ವರ್ಷಗಳಲ್ಲಿ ಸೇತುವೆ ನಿರ್ಮಾಣ ಕೆಲಸಗಳು ಮುಗಿಯುವ ರೀತಿಯಲ್ಲಿ ಕೆಲಸ ಮಾಡಿ ಎಂದು ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ತಿಳಿಸಿದರು.
Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

2 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

2 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago