Featured

ಉಡುಪಿ ಜಿಲ್ಲೆಯ ಪ್ರಗತಿ ಪರಿಶೀಲನಾ ಸಭೆ –  ಮುಖ್ಯಮಂತ್ರಿಗಳ ಆರಂಭಿಕ ಮಾತುಗಳ ಹೈಲೈಟ್ಸ್  – Vishwanews24

ಉಡುಪಿ ಜಿಲ್ಲೆಯ ಪ್ರಗತಿ ಪರಿಶೀಲನಾ ಸಭೆ –  ಮುಖ್ಯಮಂತ್ರಿಗಳ ಆರಂಭಿಕ ಮಾತುಗಳ ಹೈಲೈಟ್ಸ್

ಜನರ ಕೆಲಸ ಮಾಡುವ ವಿಚಾರದಲ್ಲಿ ರಾಜಕೀಯ ಮಾಡಬಾರದು

ಜನ ಸ್ಪಂದನೆಗೆ ಸಿದ್ದರಿಲ್ಲದವರು ಅಧಿಕಾರಿ ಸ್ಥಾನ ತ್ಯಾಗ ಮಾಡಿ.

ಪೂರ್ಣ ಮನೆ ಬಿದ್ದರೆ 5 ಲಕ್ಷ

ಮಳೆ ಹಾನಿ ಸಮೀಕ್ಷೆ ನಡೆಸಿ ಪರಿಹಾರ ನೀಡಿ

2 ವರ್ಷಗಳಲ್ಲಿ ಕಾಲು ಸಂಕ ನಿರ್ಮಾಣಕ್ಕೆ ಸೂಚನೆ

• ಜನರ ಕೆಲಸ ಮಾಡುವ ವಿಚಾರದಲ್ಲಿ ರಾಜಕೀಯ ಮಾಡಬಾರದು. ಪಕ್ಷ ರಾಜಕಾರಣ ಚುನಾವಣೆ ವೇಳೆ ಮಾತ್ರ.
• ಅಧಿಕಾರಿಗಳು ನಿಲಕ್ಷ್ಯ, ಉದಾಸೀನ ತೋರಿಸಿದರೆ ಜನರಿಗೆ ಸ್ಪಂದಿಸದಿದ್ದರೆ ಎಷ್ಟೇ ದೊಡ್ಡ ಅಧಿಕಾರಿಯಾಗಿದ್ದರೂ ಸಹಿಸಲು ಸಾಧ್ಯವಿಲ್ಲ. ಜನ ಸ್ಪಂದನೆಗೆ ಸಿದ್ದರಿಲ್ಲದವರು ಸ್ಥಾನ ತ್ಯಾಗ ಮಾಡಿ. ಜನಸ್ಪಂದನೆಗೆ ಸಾಕಷ್ಟು ಅಧಿಕಾರಿಗಳು ಇದ್ದಾರೆ.
• ಅಧಿಕಾರಿಗಳಿಗೆ ಸ್ಥಾನ ಮಾನ ಸಂಬಳ ಸವಲತ್ತುಗಳು ಸಿಗುವುದು ಜನರ ತೆರಿಗೆ ಹಣದಿಂದ.
• ಜಿಲ್ಲಾ ಮಟ್ಟದ ಅಧಿಕಾರಿಗಳು ಕಚೇರಿಯಲ್ಲಿ ಕುಳಿತು ಕೆಲಸ ಮಾಡಬಾರದು. ಸ್ಥಳಕ್ಕೆ ಬೇಟಿ ನೀಡುವುದು ಕಡ್ಡಾಯ.
• ಜಿಲ್ಲಾ ರಕ್ಷಣಾಧಿಕಾರಿಗಳು ಠಾಣೆಗಳಿಗೆ ಭೇಟಿ ನೀಡಬೇಕು. ದೂರುಗಳು ಬಂದಾಗ ಮೊದಲು ಎಫ್ಐಆರ್ ದಾಖಲಿಸಿಕೊಳ್ಳಿ.
ಪೂರ್ಣ ಮನೆ ಬಿದ್ದರೆ ೫ ಲಕ್ಷ
ಮಳೆ ಅನಾಹುತಗಳಲ್ಲಿ ಪೂರ್ಣ ಮನೆ ಹಾನಿ ಆಗಿದ್ದರೆ ೫ ಲಕ್ಷ ರೂ ಪರಿಹಾರ ನೀಡಬೇಕು. ಇದು ಸರ್ಕಾರದ ನಿರ್ಧಾರ. ಮನೆ ಸ್ವಂತ ಜಾಗದಲ್ಲಿ ಕಟ್ಟಿದ್ದಾರೋ-ಇಲ್ಲವೋ, ಹಕ್ಕು ಪತ್ರ ಇದೆಯೋ-ಇಲ್ಲವೋ ಎನ್ನುವುದನ್ನು ನೋಡದೆ ಮಳೆಯಿಂದ ಬಿದ್ದ ಮನೆಗೆ ಪರಿಹಾರ ನೀಡಿ. ಮೊದಲು ಮನೆ ಆಗಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಮಳೆ ಹಾನಿ ಸಮೀಕ್ಷೆ ನಡೆಸಿ ಪರಿಹಾರ ನೀಡಿ
ಮಳೆ ಹಾನಿಗೆ ಸಂಬಂಧಪಟ್ಟಂತೆ ಸಂಪೂರ್ಣ ಸಮೀಕ್ಷೆ ನಡೆಸಿ. ಬೆಳೆ ಹಾನಿಗೊಳಗಾದವರಿಗೆ ತಪ್ಪದೆ ಪರಿಹಾರ ಸಿಗಬೇಕು. ಸ್ಥಳಕ್ಕೆ ಭೇಟಿ ನೀಡಿ ಸಮೀಕ್ಷೆ ನಡೆಸಿ. ಬೆಳೆ ಹಾನಿ ಆದವರಿಗೆ ಪರ್ಯಾಯ ಬೆಳೆ ಬೆಳೆಯಲು ಪ್ರೋತ್ಸಾಹಿಸಬೇಕು. ಒಮ್ಮೆ ಬೆಳೆ ಪರಿಹಾರ ಕೊಟ್ಟ ಬಳಿಕ ಪರ್ಯಾಯ ಬೆಳೆ ಬೆಳೆ ಬೆಳೆಯಲು ಅಗತ್ಯವಾದ ಬೀಜ, ಗೊಬ್ಬರ ಸೇರಿದಂತೆ ಎಲ್ಲಾ ಸವಲತ್ತುಗಳನ್ನು ಒದಗಿಸಿ. ಅಡಕೆ ಬೆಳೆಗೆ ಬಂದಿರುವ ಎಲೆಚುಕ್ಕೆ ರೋಗದ ಬಗ್ಗೆ ಕೃಷಿ ವಿಜ್ಞಾನಿಗಳ ನೆರವು ಪಡೆದು ಪರಿಹಾರ ಕಂಡುಕೊಳ್ಳಬೇಕು ಎಂದು ಸೂಚಿಸಿದರು.
೨ ವರ್ಷಗಳಲ್ಲಿ ಕಾಲು ಸಂಕ ನಿರ್ಮಾಣಕ್ಕೆ ಸೂಚನೆ
ಗ್ರಾಮೀಣ ಭಾಗದ ಜನರಿಗೆ ಸಮಸ್ಯೆ ಆಗಿರುವ ಕಾಲು ಸಂಕದಿಂದ ಆಗಿರುವ ಅನಾಹುತಗಳನ್ನು ತಪ್ಪಿಸಲು ಸೇತುವೆಗಳನ್ನು ನಿರ್ಮಿಸಬೇಕು. ನರೇಗಾ ಮತ್ತು ಲೋಕೋಪಯೋಗಿ ಜಂಟಿಯಾಗಿ ಸೇತುವೆಗಳನ್ನು ನಿಮಿಸಲು ಯೋಜನೆ ಸಿದ್ದಪಡಿಸಿ ಮತ್ತು ಎರಡು ವರ್ಷಗಳಲ್ಲಿ ಸೇತುವೆ ನಿರ್ಮಾಣ ಕೆಲಸಗಳು ಮುಗಿಯುವ ರೀತಿಯಲ್ಲಿ ಕೆಲಸ ಮಾಡಿ ಎಂದು ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ತಿಳಿಸಿದರು.
Vishwa News 24

Recent Posts

ನಾಗುರಿ ದುರಂತ – ಕಳಪೆ ಕಾಮಗಾರಿಯ ಶಂಕೆ : ತಪ್ಪಿತಸ್ಥರ ವಿರುದ್ಧ ಪ್ರಕರಣ ದಾಖಲಿಸಲು ಆದೇಶ – vishwanews24

ನಾಗುರಿ ದುರಂತ - ಕಳಪೆ ಕಾಮಗಾರಿಯ ಶಂಕೆ : ತಪ್ಪಿತಸ್ಥರ ವಿರುದ್ಧ ಪ್ರಕರಣ ದಾಖಲಿಸಲು ಆದೇಶ ಮಂಗಳೂರು: ನಾಗುರಿಯಲ್ಲಿ ಮನೆ…

8 minutes ago

ನಕಲಿ ಪಾಸ್‌ಪೋರ್ಟ್‌ ಪ್ರಕರಣ: ಮಂಗಳೂರು ಟ್ರಾವೆಲ್‌ ಏಜೆಂಟ್‌ ವಿರುದ್ಧದ ಪ್ರಕರಣ ರದ್ದತಿಗೆ ಹೈಕೋರ್ಟ್ ನಕಾರ – vishwanews24

ನಕಲಿ ಪಾಸ್‌ಪೋರ್ಟ್‌ ಪ್ರಕರಣ: ಮಂಗಳೂರು ಟ್ರಾವೆಲ್‌ ಏಜೆಂಟ್‌ ವಿರುದ್ಧದ ಪ್ರಕರಣ ರದ್ದತಿಗೆ ಹೈಕೋರ್ಟ್ ನಕಾರ ಬೆಂಗಳೂರು: ಆಂಧ್ರಪ್ರದೇಶದ ಭಯೋತ್ಪಾದನಾ ನಿಗ್ರಹ…

15 minutes ago

ವಾಣಿಜ್ಯ LPG ಸಿಲಿಂಡರ್ ದರದಲ್ಲಿ ಭಾರೀ ಇಳಿಕೆ : ಇಂದಿನಿಂದಲೇ ಪರಿಷ್ಕೃತ ದರ ಜಾರಿ – vishwanews24

ವಾಣಿಜ್ಯ LPG ಸಿಲಿಂಡರ್ ದರದಲ್ಲಿ ಭಾರೀ ಇಳಿಕೆ : ಇಂದಿನಿಂದಲೇ ಪರಿಷ್ಕೃತ ದರ ಜಾರಿ ನವದೆಹಲಿ: ವಾಣಿಜ್ಯ ಬಳಕೆಯ ಎಲ್‌ಪಿಜಿ ಪೂರೈಕೆ…

2 hours ago

ಆಟೋ ಎಲ್‌ಪಿಜಿ ದರ 10 ರೂ. ಇಳಿಕೆ – vishwanews24

ಆಟೋ ಚಾಲಕರಿಗೆ ಸಿಹಿ ಸುದ್ದಿ: ಎಲ್‌ಪಿಜಿ ದರ 10 ರೂ. ಇಳಿಕೆ ಬೆಂಗಳೂರು: ನಿರಂತರ ಎಲ್‌ಪಿಜಿ  ದರ ಏರಿಕೆಯಿಂದ ಕಂಗಾಲಾಗಿದ್ದ ಆಟೋ…

2 hours ago

ರಾಮ ಮಂದಿರದ ದೇಣಿಗೆ ಹಣ ದುರುಪಯೋಗ ಆರೋಪ – ಸಿಎಂ ಯೋಗಿ ಯಾರ ತಪ್ಪನ್ನೂ ಸಹಿಸಲ್ಲ : ಸಿ.ಟಿ.ರವಿ – vishwanews24

ರಾಮ ಮಂದಿರದ ದೇಣಿಗೆ ಹಣ ದುರುಪಯೋಗ ಆರೋಪ - ಸಿಎಂ ಯೋಗಿ ಯಾರ ತಪ್ಪನ್ನೂ ಸಹಿಸಲ್ಲ : ಸಿ.ಟಿ.ರವಿ ಬೆಂಗಳೂರು:…

2 hours ago

ಮಂಗಳೂರು: ಬೈಕಂಪಾಡಿ ದರೋಡೆ ಪ್ರಕರಣಕ್ಕೆ ಟ್ವಿಸ್ಟ್ –  ವಾಹನವನ್ನು ಬಿಟ್ಟು ಪರಾರಿಯಾದ ಆರೋಪಿಗಳು ; ಕಾರು ಪತ್ತೆ – vishwanews24

ಮಂಗಳೂರು: ಬೈಕಂಪಾಡಿ ದರೋಡೆ ಪ್ರಕರಣಕ್ಕೆ ಟ್ವಿಸ್ಟ್ -  ವಾಹನವನ್ನು ಬಿಟ್ಟು ಪರಾರಿಯಾದ ಆರೋಪಿಗಳು ; ಕಾರು ಪತ್ತೆ ಮಂಗಳೂರು: ಬೈಕಂಪಾಡಿ…

3 hours ago