Featured

ಉಡುಪಿ: ಜಿಲ್ಲೆಯ ಪ್ರವಾಸಿ ಸ್ಥಳಗಳಿಗೆ ಹಾಗೂ ಕಡಲ ತೀರಗಳಿಗೆ ಭೇಟಿ ನೀಡುವ ಪ್ರವಾಸಿಗರ ಜೀವ ರಕ್ಷಣೆ ಕುರಿತು – vishwanews24

ಉಡುಪಿ: ಜಿಲ್ಲೆಯ ಪ್ರವಾಸಿ ಸ್ಥಳಗಳಿಗೆ ಹಾಗೂ ಕಡಲ ತೀರಗಳಿಗೆ ಭೇಟಿ ನೀಡುವ ಪ್ರವಾಸಿಗರ ಜೀವ ರಕ್ಷಣೆ ಕುರಿತು

  ಉಡುಪಿ: ಜಿಲ್ಲೆಗೆ ವಿವಿಧ ರಾಜ್ಯಗಳಿಂದ, ಜಿಲ್ಲೆಗಳಿಂದ ಪ್ರವಾಸಿಗರು ಹಾಗೂ ಶಾಲಾ ಮಕ್ಕಳು ಶೈಕ್ಷಣಿಕ ಪ್ರವಾಸಕ್ಕೆಂದು ಆಗಮಿಸುತ್ತಿರುತ್ತಾರೆ. ಬರುವಂತ ಪ್ರವಾಸಿಗರು ಹಾಗೂ ಶಾಲಾ ಮಕ್ಕಳು ಸಮುದ್ರ ತೀರದಲ್ಲಿ ಬಂದು ನೀರಿಗೆ ಇಳಿದು ನೀರಿನಲ್ಲಿ ಆಟ ಆಡುವುದು, ಸ್ನಾನ ಮಾಡುವುದು ಸರ್ವೆ ಸಾಮಾನ್ಯವಾಗಿರುತ್ತದೆ. ಆದರೆ ಬರುವಂತ ಪ್ರವಾಸಿಗರಿಗೆ ನೀರಿನ ಅಬ್ಬರದ ಬಗ್ಗೆ ತಿಳುವಳಿಕೆ ಇಲ್ಲದೇ ಇದ್ದು ನೀರಿಗೆ ಈಜಲು ಹೋಗಿ ಪ್ರಾಣಾಪಾಯ ತಂದುಕೊಳ್ಳುತ್ತಾರೆ

   ಜಿಲ್ಲೆಯ ಪ್ರವಾಸಿ ತಾಣಗಳಿಗೆ ಆಗಮಿಸುವ ಪ್ರವಾಸಿಗರು ನದಿ, ಜಲಪಾತಗಳು ಹಾಗೂ ಸಮುದ್ರದ ಅಲೆಗಳು ತುಂಬಾ ಅಪಾಯಕಾರಿಯಾಗಿರುವುದರಿಂದ ಸದರಿ ಸ್ಥಳಗಳಲ್ಲಿ ಪಾಲಕರು ತಮ್ಮ ಮಕ್ಕಳು ನೀರಿಗೆ ಇಳಿಯದಂತೆ ಹಾಗೂ ಶೈಕ್ಷಣಿಕ ಪ್ರವಾಸಕ್ಕೆ ಬರುವ ಶಾಲಾಕಾಲೇಜುಗಳ ವಿದ್ಯಾರ್ಥಿಗಳೊಂದಿಗೆ ಆಗಮಿಸುವ ಶಿಕ್ಷಕರು / ಉಪನ್ಯಾಸಕರು ಹಾಗೂ ಮುಖ್ಯೋಪಾದ್ಯಾಯರು ತಮ್ಮ ಶಾಲಾಕಾಲೇಜು ಮಕ್ಕಳಿಗೆ ಸೂಕ್ತ ತಿಳುವಳಿಕೆಯನ್ನು ನೀಡಿ ಹೆಚ್ಚಿನ ಜವಾಬ್ದಾರಿಯನ್ನು ವಹಿಸಿ, ನೀರಿಗೆ ಇಳಿಯದಂತೆ ನೋಡಿಕೊಳ್ಳಬೇಕುಪ್ರವಾಸದ ಸಂಧರ್ಭದಲ್ಲಿ ಮಕ್ಕಳನ್ನು ಯಾವುದೇ ಅಪಾಯಕಾರಿ ಸ್ಥಳಗಳಿಗೆ ಕರೆದುಕೊಂಡು ಹೋಗಬಾರದು ಹಾಗೂ ಎಲ್ಲಾ ಸ್ಥಳಗಳಲ್ಲಿ ಪ್ರವಾಸಿ ಉಸ್ತುವಾರಿ ವಹಿಸಿದ ಸಿಬ್ಬಂದಿಯವರು ವಿದ್ಯಾರ್ಥಿಗಳ ಜೊತೆ ಇದ್ದು ವಿದ್ಯಾರ್ಥಿಗಳ ಸುರಕ್ಷತೆಯ ಕುರಿತು ಎಲ್ಲಾ ಅವಶ್ಯ ಕ್ರಮಗಳನ್ನು ಕೈಗೊಳ್ಳಬೇಕು. ಪ್ರವಾಸದ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಸಂಬ0ಧಿಸಿದ0ತೆ ಉಂಟಾಗುವ ಯಾವುದೇ ಅವಘಡಕ್ಕೆ / ಹಾನಿಗೆ ಶಾಲಾ ಮುಖ್ಯಸ್ಥರು ಮತ್ತು ಪ್ರವಾಸದ ಉಸ್ತುವಾರಿ ವಹಿಸಿದ ಸಿಬ್ಬಂದಿಯವರೇ ಜವಾಬ್ದಾರರಾಗಿರುತ್ತಾರೆ.

  ಜಿಲ್ಲೆಯ ಪ್ರವಾಸೋದ್ಯಮ ಇಲಾಖೆಯಿಂದ ಗುರುತಿಸಿದ ಪ್ರಮುಖ ಬೀಚ್ಗಳಾದ ಮಲ್ಪೆ ಬೀಚ್, ಕಾಪು ಬೀಚ್, ಪಡುಬಿದ್ರಿ ಬ್ಲೂ ಫ್ಲಾö್ಯಗ್ ಬೀಚ್, ಪಡುಬಿದ್ರಿ ಮುಖ್ಯ ಬೀಚ್ ಹಾಗೂ ತ್ರಾಸಿ ಮರವಂತೆ ಬೀಚ್ಗಳಲ್ಲಿ “BATHING ZONE” ವ್ಯಾಪ್ತಿಯನ್ನು ಗುರುತಿಸಲಾಗಿದ್ದು, ಪ್ರವಾಸಿಗರು ಪ್ರವಾಸೋದ್ಯಮ ಇಲಾಖೆಯಿಂದ ಗುರುತಿಸಿದ ಬೀಚುಗಳಲ್ಲಿ “BATHING ZONE” ವ್ಯಾಪ್ತಿಯಲ್ಲಿ ನಿಯೋಜಿಸಿದ ಪೊಲೀಸ್, ಲೈಫ್ ಗಾರ್ಡ್, ಪ್ರವಾಸಿಮಿತ್ರ ಹಾಗೂ ಭದ್ರತಾ ಸಿಬ್ಬಂದಿಗಳೂ ನೀಡುವ ಎಚ್ಚರಿಕೆಯ ಸೂಚನೆಯನ್ನು ಪಾಲಿಸುವುದರ ಮೂಲಕ ಪ್ರವಾಸಿ ತಾಣಗಳನ್ನು ದೂರದಿಂದಲೇ ವೀಕ್ಷಿಸಿ ಸಂಭ್ರಮಿಸಿ ಅಲ್ಲಿಂದ ಸುರಕ್ಷಿತವಾಗಿ ತೆರಳುವಂತೆ ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

4 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

5 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

5 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

5 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

5 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

5 days ago