ಉಡುಪಿ: ಉಡುಪಿ ಜಿಲ್ಲೆಯ ಹಿರಿಯ ಬಿಜೆಪಿ ಮುಖಂಡರು ಮಾಜಿ ಜಿಲ್ಲಾಧ್ಯಕ್ಷರುಗಳು ಕಾರ್ಕಳ ಬ್ರಹ್ಮಾವರ ಭಾಗದ ಮಾಜಿ ತಾಲೂಕು ಪಂಚಾಯತ್ ಹಾಗೂ ಜಿಲ್ಲಾ ಪಂಚಾಯತ್ ಸದಸ್ಯರು ಮತ್ತು ಉಡುಪಿ ಭಾಗದ ಒಂದಿಷ್ಟು ಬಿಲ್ಲವ,ಬಂಟ ಸಮಾಜದ ಮುಖಂಡರು ಸೇರಿದಂತೆ ಅನೇಕರು ಕಾಂಗ್ರೆಸ್ ಸೇರ್ಪಡೆಯ ವಿಚಾರ ಚಾಲ್ತಿಯಲ್ಲಿರುವಾಗಲೇ ಮಾಜಿ ಶಾಸಕ ಬಿ ಎಂ ಸುಕುಮಾರ್ ಶೆಟ್ಟಿಯ ಮನೆಗೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಬಂದು ಹೋದ ನಂತರ ಈ ವಿಚಾರ ಮತ್ತಷ್ಟು ಕುತೂಹಲಕ್ಕೆ ಎಡೆ ಮಾಡಿಕೊಟ್ಟಿದೆ.
ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು ಬೈಂದೂರಿನ ಮಾಜಿ ಶಾಸಕ ಬಿಎಂ ಕುಮಾರ್ ಶೆಟ್ಟಿಯ ಜೊತೆ ಸಮಾಲೋಚನೆ ನಡೆಸಿದ್ದು ಮುಂದಿನ ದಿನದಲ್ಲಿ ಉಡುಪಿ ಸೇರಿದಂತೆ ವಿವಿಧ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರಸ್ ಪಕ್ಷವನ್ನ ಹೆಚ್ಚು ರೀತಿಯಲ್ಲಿ ಸಂಘಟಿಸುವ ಬಗ್ಗೆ ಮಾತುಕತೆ ನಡೆದಿರಬಹುದಾಗಿದೆ ಎನ್ನಲಾಗುತ್ತಿದೆ.
ಸದ್ಯ ಉಡುಪಿ ಜಿಲ್ಲಾ ಬಿಜೆಪಿಯಲ್ಲಿ ಕಡೆಗಣಿಸಲ್ಪಟ್ಟ ಹಿರಿಯ ಬಿಜೆಪಿ ಮುಖಂಡರು ಮಾಜಿ ಜಿಲ್ಲಾಧ್ಯಕ್ಷರುಗಳು ಮಾಜಿ ತಾಲೂಕು ಪಂಚಾಯತ್ ಹಾಗೂ ಜಿಲ್ಲಾ ಪಂಚಾಯತಿ ಸೇರಿದಂತೆ ವಿವಿಧ ಸಮಾಜದ ಮುಖಂಡರುಗಳು ಅತ್ಯಂತ ಬೇಸರಗೊಂಡಿದ್ದು ಇವರೆಲ್ಲರೂ ಒಂದುಗೂಡಿ ಉಡುಪಿಯಲ್ಲಿ ಬುಧವಾರ ರಹಸ್ಯ ಜಾಗದಲ್ಲಿ ಸಭೆ ನಡೆಸಿರುವ ಬಗ್ಗೆ ಮಾಹಿತಿ ಈಗಷ್ಟೇ ಹೊರ ಬಿದ್ದಿದೆ.
ಉಡುಪಿ ಜಿಲ್ಲಾ ಬಿಜೆಪಿಯಲ್ಲಿ ಕಡೆಗಣಿಸಲ್ಪಟ್ಟಿರುವ ಇವರುಗಳು ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಾರ್ಟಿ ಸೇರುವರೇ ಎಂಬುದು ಯಕ್ಷಪ್ರಶ್ನೆಯಾದರೂ ನಿನ್ನೇ ನಡೆದ ಸಭೆಯಲ್ಲಿ ಎಲ್ಲಾ ವಿಚಾರಗಳು ಪ್ರಸ್ತಾಪಗೊಂಡಿದೆ ಎನ್ನಲಾಗುತ್ತಿದೆ.
ಮುಂದಿನ ಲೋಕಸಭಾ ಚುನಾವಣೆಗೆ ಈ ಕಾರ್ಯತಂತ್ರ ನಡೆಯುತ್ತಿದೆ ಎನ್ನುವ ಮಾಹಿತಿ ಇದ್ದು ಸದ್ಯ ಈ ಬೆಳವಣಿಗೆ ಹೇಗೆ ಮುಂದುವರೆಯುತ್ತೆ ಎಂಬುದು ಕಾದು ನೋಡಬೇಕಾಗಿದೆ.
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…
ಪರಪ್ಪನ ಅಗ್ರಹಾರ ಕಾರಾಗೃಹದ ಮೇಲೆ ಸಿಸಿಬಿ ದಾಳಿ ಮಾಡಿಸಿದ್ದು ನಾನೇ .. ಜೈಲಿನಲ್ಲಿನ ಕೆಲವು ಅಧಿಕಾರಿಗಳು ತಮ್ಮ ಹಳೆಯ ಚಾಳಿ…