ಉಡುಪಿ: ಉಡುಪಿ ಜಿಲ್ಲೆಯ ಹಿರಿಯ ಬಿಜೆಪಿ ಮುಖಂಡರು ಮಾಜಿ ಜಿಲ್ಲಾಧ್ಯಕ್ಷರುಗಳು ಕಾರ್ಕಳ ಬ್ರಹ್ಮಾವರ ಭಾಗದ ಮಾಜಿ ತಾಲೂಕು ಪಂಚಾಯತ್ ಹಾಗೂ ಜಿಲ್ಲಾ ಪಂಚಾಯತ್ ಸದಸ್ಯರು ಮತ್ತು ಉಡುಪಿ ಭಾಗದ ಒಂದಿಷ್ಟು ಬಿಲ್ಲವ,ಬಂಟ ಸಮಾಜದ ಮುಖಂಡರು ಸೇರಿದಂತೆ ಅನೇಕರು ಕಾಂಗ್ರೆಸ್ ಸೇರ್ಪಡೆಯ ವಿಚಾರ ಚಾಲ್ತಿಯಲ್ಲಿರುವಾಗಲೇ ಮಾಜಿ ಶಾಸಕ ಬಿ ಎಂ ಸುಕುಮಾರ್ ಶೆಟ್ಟಿಯ ಮನೆಗೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಬಂದು ಹೋದ ನಂತರ ಈ ವಿಚಾರ ಮತ್ತಷ್ಟು ಕುತೂಹಲಕ್ಕೆ ಎಡೆ ಮಾಡಿಕೊಟ್ಟಿದೆ.
ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು ಬೈಂದೂರಿನ ಮಾಜಿ ಶಾಸಕ ಬಿಎಂ ಕುಮಾರ್ ಶೆಟ್ಟಿಯ ಜೊತೆ ಸಮಾಲೋಚನೆ ನಡೆಸಿದ್ದು ಮುಂದಿನ ದಿನದಲ್ಲಿ ಉಡುಪಿ ಸೇರಿದಂತೆ ವಿವಿಧ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರಸ್ ಪಕ್ಷವನ್ನ ಹೆಚ್ಚು ರೀತಿಯಲ್ಲಿ ಸಂಘಟಿಸುವ ಬಗ್ಗೆ ಮಾತುಕತೆ ನಡೆದಿರಬಹುದಾಗಿದೆ ಎನ್ನಲಾಗುತ್ತಿದೆ.
ಸದ್ಯ ಉಡುಪಿ ಜಿಲ್ಲಾ ಬಿಜೆಪಿಯಲ್ಲಿ ಕಡೆಗಣಿಸಲ್ಪಟ್ಟ ಹಿರಿಯ ಬಿಜೆಪಿ ಮುಖಂಡರು ಮಾಜಿ ಜಿಲ್ಲಾಧ್ಯಕ್ಷರುಗಳು ಮಾಜಿ ತಾಲೂಕು ಪಂಚಾಯತ್ ಹಾಗೂ ಜಿಲ್ಲಾ ಪಂಚಾಯತಿ ಸೇರಿದಂತೆ ವಿವಿಧ ಸಮಾಜದ ಮುಖಂಡರುಗಳು ಅತ್ಯಂತ ಬೇಸರಗೊಂಡಿದ್ದು ಇವರೆಲ್ಲರೂ ಒಂದುಗೂಡಿ ಉಡುಪಿಯಲ್ಲಿ ಬುಧವಾರ ರಹಸ್ಯ ಜಾಗದಲ್ಲಿ ಸಭೆ ನಡೆಸಿರುವ ಬಗ್ಗೆ ಮಾಹಿತಿ ಈಗಷ್ಟೇ ಹೊರ ಬಿದ್ದಿದೆ.
ಉಡುಪಿ ಜಿಲ್ಲಾ ಬಿಜೆಪಿಯಲ್ಲಿ ಕಡೆಗಣಿಸಲ್ಪಟ್ಟಿರುವ ಇವರುಗಳು ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಾರ್ಟಿ ಸೇರುವರೇ ಎಂಬುದು ಯಕ್ಷಪ್ರಶ್ನೆಯಾದರೂ ನಿನ್ನೇ ನಡೆದ ಸಭೆಯಲ್ಲಿ ಎಲ್ಲಾ ವಿಚಾರಗಳು ಪ್ರಸ್ತಾಪಗೊಂಡಿದೆ ಎನ್ನಲಾಗುತ್ತಿದೆ.
ಮುಂದಿನ ಲೋಕಸಭಾ ಚುನಾವಣೆಗೆ ಈ ಕಾರ್ಯತಂತ್ರ ನಡೆಯುತ್ತಿದೆ ಎನ್ನುವ ಮಾಹಿತಿ ಇದ್ದು ಸದ್ಯ ಈ ಬೆಳವಣಿಗೆ ಹೇಗೆ ಮುಂದುವರೆಯುತ್ತೆ ಎಂಬುದು ಕಾದು ನೋಡಬೇಕಾಗಿದೆ.
ಲಂಡನ್ ಕೋರ್ಟ್ನಲ್ಲಿ ಬ್ಯಾಂಕ್ ಆಫ್ ಇಂಡಿಯಾಗೆ ಗೆಲುವು : ನೀರವ್ ಮೋದಿಗೆ 100 ಕೋಟಿ ರೂ. ಪಾವತಿಸಲು ಆದೇಶ ಲಂಡನ್…
ಮಂಗಳೂರು/ಉಡುಪಿ: ಐವನ್ ಡಿಸೋಜಾ ರಿಗೆ ಸಚಿವ ಸ್ಥಾನ ನೀಡುವಂತೆ ಬಿ ಕೆ ಹರಿಪ್ರಸಾದ್ ಗೆ ಕಥೊಲಿಕ್ ಸಭಾ ಮನವಿ ಮಂಗಳೂರು/ಉಡುಪಿ:…
ಉಡುಪಿ: ಮೀನುಗಾರಿಕೆ ಇಲಾಖೆಯ ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನ ಉಡುಪಿ: ಜಿಲ್ಲೆಯ ಅರ್ಹ ಮೀನುಗಾರರ ಆರ್ಥಿಕ ಮತ್ತು ಸಾಮಾಜಿಕ ಸಬಲೀಕರಣಕ್ಕಾಗಿ…
ಜೂ. 24ರಿಂದ 26ರ ವರೆಗೆ ಕರಾವಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಕಡೆಗಳಲ್ಲಿ ಮಂಗಳವಾರ…
ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ : ಎನ್ಐಎ ಅಧಿಕಾರಿಗಳಿಂದ ಮೂವರ ವಿಚಾರಣೆ ಮಂಗಳೂರು: ಬಜಪೆಯಲ್ಲಿ ನಡೆದ ಹಿಂದೂ ಸಂಘಟನೆಯ ಕಾರ್ಯಕರ್ತ…
ಪುತ್ತೂರು: ಸಾಕುನಾಯಿ ಪತ್ತೆ ಮಾಡಿದ ವ್ಯಕ್ತಿಗೆ 50 ಸಾ. ರೂ. ಹಸ್ತಾಂತರ ಪುತ್ತೂರು: ಇಲ್ಲಿನ ಕಬಕ ಸಮೀಪದ ಪೋಳ್ಯ ನಿವಾಸಿ,…