ಉಡುಪಿ,:ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ರಾಮಚಂದ್ರ ನಾಯಕ್ ಮತ್ತು ಉಡುಪಿ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಎಎಚ್ಸಿ ಶಂಕರ್, 2020ನೆ ಸಾಲಿನ ಮುಖ್ಯಮಂತ್ರಿ ಪದಕಕ್ಕೆ ಆಯ್ಕೆಯಾಗಿದ್ದಾರೆ.
ಬಾರಕೂರು ಮೂಲದ ರಾಮಚಂದ್ರ ನಾಯಕ್, 2003ರಲ್ಲಿ ಎಸ್ಸೈಯಾಗಿ ಪೊಲೀಸ್ ಇಲಾಖೆಗೆ ಸೇರ್ಪಡೆಗೊಂಡಿದ್ದು, ಗದಗ, ಬೆಂಗಳೂರು, ಬಳ್ಳಾರಿ, ಉಡುಪಿ, ಮಂಗಳೂರಿನಲ್ಲಿ ಎಸ್ಸೈಯಾಗಿ ಕರ್ತವ್ಯ ನಿರ್ವಹಿಸಿದ್ದರು. 2011ರಲ್ಲಿ ಪೊಲೀಸ್ ನಿರೀಕ್ಷಕರಾಗಿ ಭಡ್ತಿ ಹೊಂದಿದ್ದ ಇವರು, ಕಾರ್ಕಳ ಎಎನ್ಎಫ್, ಹೊಸನಗರ, ಮುಲ್ಕಿ ಮೂಡಬಿದ್ರೆಯಲ್ಲಿ ವೃತ್ತ ನಿರೀಕ್ಷಕರಾಗಿ ಮತ್ತು ಕಾರವಾರ ಸೈಬರ್ ಕ್ರೈಮ್ ಆಗಿ ಕರ್ತವ್ಯ ನಿರ್ವಹಿಸಿದ್ದರು.
ಅದೇ ರೀತಿ ಬೈಂದೂರು ಮೂಲದ ಪ್ರಸ್ತುತ ಎಸ್ಐಟಿ ಲೋಕಾಯುಕ್ತ ಬೆಂಗಳೂರಿನಲ್ಲಿ ಪೊಲೀಸ್ ನಿರೀಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ರಾಘವೇಂದ್ರ ಬೈಂದೂರು ಕೂಡ 2020ನೆ ಸಾಲಿನ ಮುಖ್ಯಮಂತ್ರಿ ಪದಕಕ್ಕೆ ಆಯ್ಕೆಯಾಗಿದ್ದಾರೆ.
ಅದೇ ರೀತಿ ಬೈಂದೂರು ಮೂಲದ ಪ್ರಸ್ತುತ ಎಸ್ಐಟಿ ಲೋಕಾಯುಕ್ತ ಬೆಂಗಳೂರಿನಲ್ಲಿ ಪೊಲೀಸ್ ನಿರೀಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ರಾಘವೇಂದ್ರ ಬೈಂದೂರು ಕೂಡ 2020ನೆ ಸಾಲಿನ ಮುಖ್ಯಮಂತ್ರಿ ಪದಕಕ್ಕೆ ಆಯ್ಕೆಯಾಗಿದ್ದಾರೆ.
ಉಡುಪಿ : ತೀರ್ಥಹಳ್ಳಿ – ಮಲ್ಪೆ ರಾ.ಹೆ ಅಭಿವೃದ್ದಿಗೆ ನಿತಿನ್ ಗಡ್ಕರಿ ಸೂಚನೆ : ಸಂಸದೆ ಶೋಭಾ ಕರಂದ್ಲಾಜೆ-Vishwanews24
ಮಂಗಳೂರು: ಪೊಲೀಸ್ ಇಲಾಖೆಯಲ್ಲಿ ಉತ್ತಮ ಸೇವೆ ಸಲ್ಲಿಸಿದ ಪೊಲೀಸ್ ಅಧಿಕಾರಿಗಳು, ಸಿಬಂದಿ ಸಹಿತ 2020 ನೇ ಸಾಲಿನಲ್ಲಿ ರಾಜ್ಯದ 115 ಮಂದಿಗೆ ಮುಖ್ಯಮಂತ್ರಿಯ ಪದಕ ಘೋಷಿಸಲಾಗಿದ್ದು ಆ ಪೈಕಿ ದಕ ಜಿಲ್ಲೆಯ ಐವರಿಗೆ ಪದಕ ಲಭಿಸಿದೆ.
ಮಂಗಳೂರು ಸಿಸಿಬಿ ವಿಭಾಗದ ಹೆಡ್ ಕಾನ್ಸ್ ಟೇಬಲ್ ಅಬ್ದುಲ್ ಜಬ್ಬಾರ್, ಪಾಂಡೇಶ್ವರ ಠಾಣೆಯ ಹೆಡ್ ಕಾನ್ ಸ್ಟೇಬಲ್ ನಯನಾ, ಬಂದರು ಠಾಣೆಯ ಹೆಡ್ ಕಾನ್ಸ್ ಟೇಬಲ್ ಸುಜನ್ ಶೆಟ್ಟಿ, ದಕ ಜಿಲ್ಲಾ ಸಿಡಿಆರ್ ವಿಭಾಗದ ಪೊಲೀಸ್ ಕಾನ್ಸ್ ಟೇಬಲ್ ಸಂಪತ್ ಕುಮಾರ್, ಉಪ್ಪಿನಂಗಡಿ ಠಾಣೆಯ ಪೊಲೀಸ್ ಕಾನ್ಸ್ ಟೇಬಲ್ ಪ್ರವೀಣ್ ರೈ ಅವರು ಕರ್ತವ್ಯದ ವೇಳೆ ತೋರಿದ ಸಾಧನೆಗಾಗಿ ಮುಖ್ಯಮಂತ್ರಿ ಪದಕ ಘೋಷಿಸಲಾಗಿದೆ.
ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ : ಶೇಖ್ ಹಸೀನಾ ನವದೆಹಲಿ,:ನನ್ನನ್ನು ಬಂಧಿಸಬಹುದು ಅಥವಾ ಕೊಲ್ಲಬಹುದು, ಯಾವುದಕ್ಕೂ ನಾನು…
ಕೊಟೇಶ್ವರ ರಸ್ತೆ ಅಪಘಾತ : ಅತಿವೇಗ ಅಜಾಗರೂಕತೆಯ ಚಾಲನೆ ; ಬೈಕ್ ಸವಾರನ ಸಾವಿಗೆ ಕಾರಣನಾದ ಲಾರಿ ಚಾಲಕನ ಬಂಧನ ಉಡುಪಿ:…
ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆ ಬೆಂಗಳೂರು/ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಕೊನೆಗೂ ದಿನಾಂಕ…
ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್ಪಾಲ್ ಯಾದವ್ಗೆ 3 ತಿಂಗಳ ಜೈಲು ಶಿಕ್ಷೆ ನವದೆಹಲಿ: ಚೆಕ್ ಬೌನ್ಸ್…
ರೈಲಿನಲ್ಲಿ ಸಂಚರಿಸುವ ಮುನ್ನ ಹೊಸ ನಿಯಮ ತಿಳ್ಕೊಳ್ಳಿ : ಇನ್ಮುಂದೆ ಮೊಬೈಲ್ನಲ್ಲಿ ಟಿಕಟ್ ತೋರಿಸಿದರೆ ದಂಡ ಫಿಕ್ಸ್ ನವದೆಹಲಿ :ಡಿಜಿಟಲ್…
ಸುರತ್ಕಲ್ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ ಮಂಗಳೂರು: ನಗರದ ಸುರತ್ಕಲ್ ಪೊಲೀಸ್…