Featured

ಉಡುಪಿ ಜಿಲ್ಲೆಯ ರಜತ ಮಹೋತ್ಸವ-2023 : ಜ. 21ರಂದು ಕಾಪು ಕಡಲ ಕಿನಾರೆಯಲ್ಲಿ ಸಂಭ್ರಮಾಚರಣೆ – Vishwanews24

ಉಡುಪಿ ಜಿಲ್ಲೆಯ ರಜತ ಮಹೋತ್ಸವ-2023 : ಜ. 21ರಂದು ಕಾಪು ಕಡಲ ಕಿನಾರೆಯಲ್ಲಿ ವೈಭವದ ಸಂಭ್ರಮಾಚರಣೆ

ಕಾಪು ಪುರಸಭೆಯಿಂದ ಕಾಪು ಪೇಟೆಯಾಗಿ ಕಾಪು ಬೀಚ್‌ವರೆಗೆ ವೈಭವದ ಶೋಭಾಯಾತ್ರೆ

ಕಾಪು: ಉಡುಪಿ ಜಿಲ್ಲೆ ರಚನೆಗೊಂಡು ರಜತ ವರ್ಷಾಚರಣೆ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಕಾಪು ಕಡಲ ಕಿನಾರೆಯಲ್ಲಿ ಜನವರಿ 21ರಂದು ಉಡುಪಿ ಜಿಲ್ಲೆಯ ರಜತ ಮಹೋತ್ಸವ-2023 ಸಂಭ್ರಮಾಚರಣೆ ಕಾರ್ಯಕ್ರಮ ನಡೆಯಲಿದೆ ಎಂದು ಕಾಪು ಶಾಸಕ ಲಾಲಾಜಿ ಆರ್. ಮೆಂಡನ್ ಹೇಳಿದರು.

ಕಾಪು ತಾಲೂಕು ಕಛೇರಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಉಡುಪಿ ಜಿಲ್ಲೆಯು ರಚನೆಯಾಗಿ ಇಪ್ಪತ್ತೈದು ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ವೈಶಿಷ್ಟ್ಯ ಪೂರ್ಣವಾದ ರಜತ ವರ್ಷಾಚರಣೆ ಕಾರ್ಯಕ್ರಮ ಆಯೋಜಿಸಲು ಉಡುಪಿ ಜಿಲ್ಲಾಡಳಿತ, ಕೇಂದ್ರ, ರಾಜ್ಯ ಸಚಿವರು ಮತ್ತು ಶಾಸಕರೆಲ್ಲರೂ ಜೊತೆ ಸೇರಿ ತೀರ್ಮಾನಿಸಿದ್ದು ಅದರಂತೆ ಕಾಪು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕಾರ್ಯಕ್ರಮವು ಕಾಪುವಿನಲ್ಲಿ ವೈಭವದಿಂದ ನಡೆಯಲಿದೆ ಎಂದರು.

ಕಾಪು ತಾಲೂಕು ಆಡಳಿತ, ವಿವಿಧ ಇಲಾಖೆಗಳು, ಪುರಸಭೆಯೂ ಸೇರಿದಂತೆ ಕಾಪು ವಿಧಾನಸಭಾ ಕ್ಷೇತ್ರದ ಗ್ರಾಮ ಪಂಚಾಯತ್‌ಗಳು ಹಾಗೂ ವಿವಿಧ ಶಾಲಾ ಕಾಲೇಜುಗಳು, ಸಾರ್ವಜನಿಕ ಸಂಘ-ಸಂಸ್ಥೆಗಳ ಸಹಯೋಗದೊಂದಿಗೆ ಮಧ್ಯಾಹ್ನ 2 ಗಂಟೆಗೆ ವಿವಿಧ ಸಾಂಸ್ಕೃತಿಕ ತಂಡಗಳು, ಕಾಪು ಕ್ಷೇತ್ರದ ವೈಶಿಷ್ಟ್ಯತೆಯನ್ನು ಮೆರೆಯುವ ಟ್ಯಾಬ್ಲೊಗಳೊಂದಿಗೆ ಕಾಪು ಪುರಸಭೆಯಿಂದ ಕಾಪು ಪೇಟೆಯಾಗಿ ಕಾಪು ಬೀಚ್‌ವರೆಗೆ ವೈಭವದ ಶೋಭಾಯಾತ್ರೆ ನಡೆಯಲಿದೆ.

ಬಳಿಕ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಸಭಾ ಕಾರ್ಯಕ್ರಮ ಪ್ರಾರಂಭಗೊಳ್ಳಲಿದೆ. ಗ್ರಾಮ ಪಂಚಾಯತ್‌ಗಳ ಪ್ರಾಯೋಜಕತ್ವದಲ್ಲಿ ಮತ್ತು ಜನಪ್ರತಿನಿಧಿಗಳ ಪಾಲ್ಗೊಳ್ಳುವಿಕೆಯೊಂದಿಗೆ ಸಾಂಸ್ಕತಿಕ ಸಂಗಮ ಕಾರ್ಯಕ್ರಮ ನಡೆಯಲಿದೆ. ಬಳಿಕ ಖ್ಯಾತ ಸಂಗೀತ ನಿರ್ದೇಶಕ ಗುರುಕಿರಣ್ ನೇತೃತ್ವದಲ್ಲಿ ಮ್ಯೂಸಿಕಲ್ ನೈಟ್ ಸಂಗೀತ ರಸಮಂಜರಿ ಕಾರ್ಯಕ್ರಮ ನಡೆಯಲಿದೆ. ಸುದ್ದಿಗೋಷ್ಟಿಯಲ್ಲಿ ಕಾಪು ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಸುಧಾಮ ಶೆಟ್ಟಿ, ಕಂದಾಯ ನಿರೀಕ್ಷಕ ಸುಧೀರ್ ಕುಮಾರ್ ಶೆಟ್ಟಿ, ಪುರಸಭೆ ಮುಖ್ಯಾಧಿಕಾರಿ ವೆಂಕಟೇಶ ನಾವಡ  ಪ್ರವೀಣ್ ಕಾಪು ಉಪಸ್ಥಿತರಿದ್ದರು.

Join our Whatsapp group by clicking the below link 👇👇

https://chat.whatsapp.com/KfUmhXQKZb114i4QHNvqEK

Vishwa News 24

Recent Posts

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

19 hours ago

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

19 hours ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

20 hours ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

20 hours ago

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ -vishwanews24

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…

20 hours ago

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ -vishwanews24

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…

20 hours ago