Featured

ಉಡುಪಿ : ಜಿಲ್ಲೆಯ ಶಾಲೆಗಳಲ್ಲಿ ಕೊರೊನಾ ಪ್ರಕರಣ ಪತ್ತೆಯಾದರೆ ಆಯಾ ತರಗತಿ ಐದು ದಿನ ಬಂದ್‌ : ಜಿಲ್ಲಾಧಿಕಾರಿ ಕೂರ್ಮಾರಾವ್‌ – Vishwanews24

ಉಡುಪಿ : ಜಿಲ್ಲೆಯ ಶಾಲೆಗಳಲ್ಲಿ ಕೊರೊನಾ ಪ್ರಕರಣ ಪತ್ತೆಯಾದರೆ ಆಯಾ ತರಗತಿ ಐದು ದಿನ ಬಂದ್‌ : ಜಿಲ್ಲಾಧಿಕಾರಿ ಕೂರ್ಮಾರಾವ್‌ – Vishwanews24

ಇಡೀ ಶಾಲೆಯನ್ನು ಬಂದ್‌ ಮಾಡುವ ನಿರ್ಧಾರ ತೆಗೆದುಕೊಂಡಿಲ್ಲ ..

ಉಡುಪಿ: ಜಿಲ್ಲೆಯ ಶಾಲೆಗಳಲ್ಲಿ ಕೊರೊನಾ ಪ್ರಕರಣ ಪತ್ತೆಯಾದರೆ ಆಯಾ ತರಗತಿಯನ್ನು ಐದು ದಿನ ಬಂದ್‌ ಮಾಡುವ ನಿರ್ಧಾರ ಮಾಡಿದ್ದೇವೆ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್‌ ಎಂ. ಮಾಹಿತಿ ನೀಡಿದ್ದಾರೆ.

ಕೊರೊನಾ ಪ್ರಕರಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಶಿಕ್ಷಣ ಸಚಿವ ಬಿ.ಸಿ.ನಾಗೇಶ್‌ ಸೂಚನೆಯಂತೆ ಮಕ್ಕಳಲ್ಲಿ ಕೊರೊನಾ  ಪತ್ತೆಯಾದರೆ ಆ ತರಗತಿ ಅಥವಾ ಆ ವಿಭಾಗವನ್ನು ಐದು ದಿನ ಬಂದ್‌ ಮಾಡಲಾಗುತ್ತದೆ. ಇಡೀ ಶಾಲೆಯನ್ನು ಬಂದ್‌ ಮಾಡುವ ನಿರ್ಧಾರವನ್ನು ತೆಗೆದುಕೊಂಡಿಲ್ಲ ಎಂದರು.

ಸರಕಾರದಿಂದ ಬಂದಿರುವ ನಿರ್ದೇಶನಗಳನ್ನು ಪಾಲನೆ ಮಾಡಲಾಗುತ್ತದೆ. ಜಿಲ್ಲೆಯ ತಜ್ಞರು ಮತ್ತು ಶಿಕ್ಷಣ ಇಲಾಖೆಯ ಅಧಿಕಾರಿ ಗಳ ಜತೆ ಮಾತುಕತೆ ನಡೆಸಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೂ ಕೆಲವು ನಿರ್ದೇಶನ ನೀಡಿದ್ದೇವೆ ಮತ್ತು ಅವರಿಂದ ವರದಿ ಪಡೆಯುತ್ತಿದ್ದೇವೆ ಎಂದರು.

 

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

5 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

6 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

6 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

6 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

6 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

6 days ago