Featured

ಉಡುಪಿ :ಜಿಲ್ಲೆಯ ಶಾಸಕ, ಸಂಸದರ ವೈಫಲ್ಯವನ್ನು ಮಿಥುನ್ ರೈ ಎತ್ತಿ ತೋರಿಸಿದ್ದು ಬಿಜೆಪಿಗರಿಗೆ ಇರುವೆ ಬಿಟ್ಟಂತಾಗಿದೆ :  ದೀಪಕ್ ಕೋಟ್ಯಾನ್ – Vishwanews24

ಜಿಲ್ಲೆಯ ಶಾಸಕ, ಸಂಸದರ ವೈಫಲ್ಯವನ್ನು ಕಾಂಗ್ರೆಸ್ ನಾಯಕ ಮಿಥುನ್ ರೈ ಎತ್ತಿ ತೋರಿಸಿದ್ದು ಬಿಜೆಪಿಗರಿಗೆ ಇರುವೆ ಬಿಟ್ಟಂತಾಗಿದೆ :  ದೀಪಕ್ ಕೋಟ್ಯಾನ್

ಉಡುಪಿ: ಜಿಲ್ಲೆಯ ಶಾಸಕ, ಸಂಸದರ ವೈಫಲ್ಯವನ್ನು ಕಾಂಗ್ರೆಸ್ ನಾಯಕ ಮಿಥುನ್ ರೈ ಎತ್ತಿ ತೋರಿಸಿದ್ದು ಬಿಜೆಪಿಗರಿಗೆ ಇರುವೆ ಬಿಟ್ಟಂತಾಗಿದೆ ಎಂದು ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ದೀಪಕ್ ಕೋಟ್ಯಾನ್ ಹೇಳಿದ್ದಾರೆ.

ಜಿಲ್ಲೆಯಲ್ಲಿ ಹಲವಾರು ಸಮಸ್ಯೆಗಳಿದ್ದರೂ ಕೂಡ ಕ್ಷೇತ್ರದತ್ತ ತಲೆಹಾಕಿಯೂ ಬರದ ಸಂಸದೆ ಶೋಭಾಕರಂದ್ಲಾಜೆ ರಾಷ್ಟ್ರೀಯ ಹೆದ್ದಾರಿ ವಿಚಾರದಲ್ಲಿ ದಿವ್ಯ ನಿರ್ಲಕ್ಷ್ಯ ತೋರಿದ್ದರು. ರಸ್ತೆಯ ಎಲ್ಲಾ ರಸ್ತೆಗಳು ಹೊಂಡಳಿಂದ ಕೂಡಿ ಕೆಲವು ಜೀವಗಳು ಬಲಿಯಾದಾಗ ಬಿಜೆಪಿಗರಿಗೆ ಯಾವುದೇ ರೀತಿಯ ಕಾಳಜಿ ಇರಲಿಲ್ಲ. ಒಂದು ರಾಷ್ಟ್ರೀಯ ಪಕ್ಷವಾಗಿ ರಸ್ತೆಯ ಸಮಸ್ಯೆಯನ್ನು ಜನರ ಮುಂದಿಡಲು ಹೋದಾಗ ಸಂಸದೆಯ ಬಗ್ಗೆ ವಿಪರೀತ ಕಾಳಜಿ ತೋರಿಸುತ್ತಿದ್ದಾರೆ. ಅದೇ ಸಂಸದೆಯ ವಿರುದ್ದ ಬಿಜೆಪಿಗರು ಗೋಬ್ಯಾಕ್ ಅಭಿಯಾನ ಮಾಡಿರುವುದನ್ನು ಮಾತ್ರ ಮರೆತಂತೆ ಕಾಣುತ್ತಿದೆ.

ಇದನ್ನೂ ಓದಿ: ಮಂಗಳ ಕಾರ್ಯಗಳಿಂದ ಶುಭ..ನೋಡಿ ಇಂದಿನ ದಿನ ಭವಿಷ್ಯ..ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564

ಬಿಜೆಪಿಗರಿಗೆ ಅವರ ಆಡಳಿತದಲ್ಲಿ ನಡೆದ ವೈಫಲ್ಯಗಳನ್ನು ಜನಸಾಮಾನ್ಯರಿಗೆ ತಿಳಿಸುವ ಕೆಲಸವನ್ನು ಜವಾಬ್ದಾರಿಯುತ ಪ್ರತಿಪಕ್ಷವಾಗಿ ಮಾಡಿದಾಗ ಅಂತಹವರ ವಿರುದ್ದ ವೈಯುಕ್ತಿಕ ಟೀಕೆ ಮಾಡುವುದೇ ಬಿಜೆಪಿಗರ ಚಾಳಿಯಾಗಿದೆ. ಜನರ ಸಮಸ್ಯೆಗೆ ಸ್ಪಂದಿಸುವುದನ್ನು ಬಿಟ್ಟು ಬರೇ ಕಮೀಷನ್ ದಂಧೆಯಲ್ಲಿ ಮುಳುಗಿರುವ ಬಿಜೆಪಿಗರಿಗೆ ಯಾವುದೇ ರೀತಿಯ ಅಭಿವೃದ್ಧಿ ಬೇಕಾಗಿಲ್ಲ. ಚುನಾವಣೆಯಲ್ಲಿ ಸೋತರೂ ಕೂಡ ಮಿಥುನ್ ರೈ ಜನರೊಂದಿಗೆ ಇದ್ದು ಅವರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡುತ್ತಿದ್ದರೆ ಬಿಜೆಪಿಗರು ಬರೀ ವೈಯುಕ್ತಿಕ ಪ್ರಚಾರವನ್ನು ಪಡೆದುಕೊಂಡು ತಮ್ಮ ಕಿಸೆಗಳನ್ನು ತುಂಬಿಸುವ ಕೆಲಸವನ್ನು ಮಾಡುತ್ತಿದ್ದಾರೆ.

ಸಂಸದೆಯಾಗಿ ಆಯ್ಕೆಯಾದ ಶೋಭಾ ಕರಂದ್ಲಾಜೆ ಎಷ್ಟು ಬಾರಿ ತನ್ನ ಕ್ಷೇತ್ರಕ್ಕೆ ಬಂದು ತನ್ನ ಮತದಾರರ ಸಮಸ್ಯೆಗೆ ಸ್ಪಂದಿಸುವ ಕೆಲಸವನ್ನು ಬಿಜೆಪಿಗರು ಮೊದಲು ಮಾಡಲಿ ಬಳಿಕ ಮಿಥುನ್ ರೈ ವಿರುದ್ದ ಅವಹೇಳನ ಮಾಡಲುವ ಕೆಲಸ ನಡೆಸಲಿ. ಹೀಗೆಯೇ ಸಂಸದೆ ತಮ್ಮ ನಿರ್ಲಕ್ಷ್ಯ ಧೋರಣೆ ಮುಂದುವರೆಸಿದಲ್ಲಿ ಯುವ ಕಾಂಗ್ರೆಸ್ ತನ್ನ ಪ್ರತಿಭಟನೆ ಮುಂದುವರೆಸಲಿದೆ ಎಂದು ಅವರು ಹೇಳಿದ್ದಾರೆ.

PFI ಸೇರಿದಂತೆ ವಿವಿಧ ರಾಷ್ಟ್ರ ದ್ರೋಹಿ ಸಂಘಟನೆ ನಿಷೇಧಸಿದ್ದು ಹರ್ಷ ತಂದಿದೆ: ನಯಾನ ಗಣೇಶ್ – Vishwanews24

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

2 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

3 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

3 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

3 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

3 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

3 days ago