Featured

ಉಡುಪಿ : ಜಿಲ್ಲೆಯ 20 ವಿದ್ಯಾಸಂಸ್ಥೆಗಳಲ್ಲಿ ಐಐಟಿ ಮದ್ರಾಸ್‌ನಿಂದ ಆನ್‌ಲೈನ್ ತರಬೇತಿ ಹಾಗೂ ಕೌನ್ಸಿಲಿಂಗ್ ಕೋರ್ಸ್‌ ಪ್ರಾರಂಭ – vishwanews24

ಉಡುಪಿ : ಜಿಲ್ಲೆಯ 20 ವಿದ್ಯಾಸಂಸ್ಥೆಗಳಲ್ಲಿ ಐಐಟಿ ಮದ್ರಾಸ್‌ನಿಂದ ಆನ್‌ಲೈನ್ ತರಬೇತಿ ಹಾಗೂ ಕೌನ್ಸಿಲಿಂಗ್ ಕೋರ್ಸ್‌ ಪ್ರಾರಂಭ

ಆ.15ರ ಗುರುವಾರ  ಉಚ್ಚಿಲದ ಮಹಾಲಕ್ಷ್ಮೀ ಸಭಾಭವನದಲ್ಲಿಉದ್ಘಾಟನೆ

ಉಡುಪಿ: ಉಡುಪಿ ಜಿಲ್ಲೆಯ 20 ಸರಕಾರಿ ವಿದ್ಯಾಸಂಸ್ಥೆಗಳ ಪ್ರೌಢ ಶಾಲೆ ಹಾಗೂ ಪದವಿ ಪೂರ್ವ ವಿಭಾಗದ ವಿದ್ಯಾರ್ಥಿ ಗಳಿಗೆ ಐಐಟಿ ಮದರಾಸು ಇವರಿಂದ ಆನ್‌ಲೈನ್ ತರಬೇತಿ ಹಾಗೂ ಕೌನ್ಸಿಲಿಂಗ್ ಕೋರ್ಸ್‌ಗಳು ಪ್ರಾರಂಭಗೊಳ್ಳಲಿದ್ದು, ಇದರ ಉದ್ಘಾಟನೆ ಆ.15ರ ಗುರುವಾರ ಅಪರಾಹ್ನ 2:00ಗಂಟೆಗೆ ಉಚ್ಚಿಲದ ಮಹಾಲಕ್ಷ್ಮೀ ಸಭಾಭವನದಲ್ಲಿ ನಡೆಯಲಿದೆ ಎಂದು ಬೆಂಗಳೂರಿನ ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಟ್ರಸ್ಟ್‌ನ ಅಧ್ಯಕ್ಷ ಡಾ.ಎಚ್.ಎಸ್.ಶೆಟ್ಟಿ ತಿಳಿಸಿದ್ದಾರೆ.

ಉಡುಪಿಯಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಾ.ಎಚ್. ಎಸ್.ಶೆಟ್ಟಿ, ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ಉಡುಪಿ ಜಿಲ್ಲಾ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಕಾಪು ಶಾಸಕರ ಸಹಯೋಗ ದೊಂದಿಗೆ ಈ ಆನ್‌ಲೈನ್ ವ್ಯಾಸಂಗ ಹಾಗೂ ಸಮಾಲೋಚನಾ ಕೋರ್ಸ್‌ಗಳನ್ನು ಆಯೋಜಿಸುತ್ತಿದೆ ಎಂದರು.

ಮುಂದೆ ಇದನ್ನು ಇನ್ನಷ್ಟು ಶಾಲೆಗಳಿಗೆ ವಿಸ್ತರಿಸಲಾಗುವುದು. ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡದ ತಲಾ 50 ಶಾಲೆಗಳಲ್ಲಿ ಈ ಕೋರ್ಸ್‌ನ್ನು ಪ್ರಾರಂಭಿಸಲು ಉದ್ದೇಶಿಸಲಾಗಿದೆ ಎಂದರು.

ದೇಶದ ನಂ.2 ವಿದ್ಯಾಸಂಸ್ಥೆ ಎನಿಸಿರುವ ಐಐಟಿ ಮದ್ರಾಸ್ (ಚೆನ್ನೈ)ನ ಸಮಾಜ ಸೇವಾ ವಿಭಾಗವಾಗಿರುವ ಐಐಟಿ ಮದ್ರಾಸ್ ಪ್ರವರ್ತಕ್ ಗ್ರಾಮೀಣ ಭಾಗದ ಮಕ್ಕಳನ್ನು ಕೇಂದ್ರೀಕರಿಸಿಕೊಂಡು ಈಗಾಗಲೇ ದೇಶದ ವಿವಿಧ ರಾಜ್ಯಗಳ 350 ಶಾಲೆಗಳಲ್ಲಿ ಈ ಕೋರ್ಸ್‌ನ್ನು ಕಳೆದ ನಾಲ್ಕೈದು ವರ್ಷಗಳಿಂದ ನಡೆಸಿಕೊಂಡು ಬರುತ್ತಿದೆ ಎಂದರು.

ಮೊದಲು ತಮಿಳುನಾಡಿನ ವಿವಿಧ ಶಾಲೆಗಳಲ್ಲಿ ನೀಡುತಿದ್ದ ಕೋರ್ಸ್‌ನ್ನು ಪ್ರಧಾನಿಯವರ ಕೋರಿಕೆಯ ಮೇರೆಗೆ ವಾರಣಾಸಿಯಲ್ಲಿ ಪ್ರಾರಂಭಿಸಿದ್ದು, ಅದರ ಯಶಸ್ಸಿನಿಂದ ಇದೀಗ ದೇಶದ ಅನೇಕ ರಾಜ್ಯಗಳಿಗೆ ವಿಸ್ತರಿಸಲಾಗಿದೆ ಎಂದು ಡಾ.ಶೆಟ್ಟಿ ವಿವರಿಸಿದರು.

ಇದೀಗ ಕರ್ನಾಟಕದ ಶಾಲೆಗಳಲ್ಲಿ ಇದನ್ನು ವಿಸ್ತರಿಸಲು ನಮ್ಮ ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ಸಹಯೋಗ ನೀಡುತ್ತಿದೆ. ಬೆಂಗಳೂರಿನ ಮೆ.ಮೈಸೂರು ಮರ್ಕಂಟೈಲ್ ಕಂಪೆನಿ ಸಮಾಜ ಸೇವಾ ಕಾರ್ಯಗಳಿಗಾಗಿ 2008ರಲ್ಲಿ ನೊಂದಾಯಿಸಿದ ಸಂಸ್ಥೆ ಈ ಟ್ರಸ್ಟ್ ಆಗಿದ್ದು, ಈಗಾಗಲೇ ಉಡುಪಿ ಜಿಲ್ಲೆಯಲ್ಲಿ ಸಾಕಷ್ಟು ಸಮಾಜ ಸೇವಾ ಕಾರ್ಯಗಳನ್ನು ಮಾಡುತ್ತಿದೆ ಎಂದರು.

ಇತ್ತೀಚೆಗೆ ರಾಜ್ಯದಲ್ಲೇ ಪ್ರಥಮ ಬಾರಿಗೆ ಸರಕಾರಿ ಖಾಸಗಿ ಸಹಭಾಗಿತ್ವದಲ್ಲಿ ಬ್ರಹ್ಮಾವರದ ಕರ್ನಾಟಕ ಪಬ್ಲಿಕ್ ಸ್ಕೂಲ್ (ಕೆಪಿಎಸ್)ನ್ನು ಮೂರು ಕೋಟಿ ರೂ. ವೆಚ್ಚದಲ್ಲಿ ಮೂಲಭೂತ ಸೌಕರ್ಯದೊಂದಿಗೆ ಸರ್ವತೋಮುಖ ಅಭಿವೃದ್ಧಿ ಕಾರ್ಯ ದಲ್ಲಿ ತೊಡಗಿಸಿಕೊಂಡಿದೆ. ಅಲ್ಲದೇ ಪ್ರತಿವರ್ಷ ಸುಮಾರು 41,000 ವಿದ್ಯಾರ್ಥಿಗಳಿಗೆ ಶಾಲಾ ಸಮವಸ್ತ್ರ ಹಾಗೂ ವಿದ್ಯಾರ್ಥಿ ವೇತನಗಳನ್ನು ವಿತರಿಸಿಕೊಂಡು ಬಂದಿದೆ ಎಂದರು.

ಐಐಟಿ ಮದ್ರಾಸ್‌ನ ಕೋರ್ಸ್ ಎಂಟರಿಂದ 10ನೇ ತರಗತಿಯ ಹೈಸ್ಕೂಲ್ ವಿದ್ಯಾರ್ಥಿಗಳಿಗೆ ಹಾಗೂ ಪಿಯುಸಿ ವಿದ್ಯಾರ್ಥಿ ಗಳಿಗೆ ಪ್ರತ್ಯೇಕವಾಗಿರುತ್ತದೆ. ಮದ್ರಾಸ್ ಐಐಟಿ ನಿಯೋಜಿಸುವ ನುರಿತ ತಜ್ಞರು ವಿದ್ಯಾರ್ಥಿಗಳಿಗೆ ತರಬೇತಿ ಹಾಗೂ ಮಾರ್ಗದರ್ಶನ ನೀಡಲಿದ್ದಾರೆ ಎಂದು ತಿಳಿಸಿದರು.

ಆ.15ರಂದು ಕಾರ್ಯಕ್ರಮವನ್ನು ಐಐಟಿ ಮದ್ರಾಸ್‌ನ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ ಡಾ.ಎಂ.ಜೆ.ಶಂಕರಮಣ ಉದ್ಘಾಟಿಸಲಿದ್ದಾರೆ ಎಂದ ಡಾ.ಎಚ್.ಎಸ್.ಶೆಟ್ಟಿ, ಸಂಸದ ಕೋಟ ಶ್ರೀನಿವಾಸ ಪೂಜಾರಿ, ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮುಂತಾದವರು ಭಾಗವಹಿಸಲಿದ್ದಾರೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಟ್ರಸ್ಟ್‌ನ ಉಪಾಧ್ಯಕ್ಷ ಎಚ್.ನಾಗರಾಜ ಶೆಟ್ಟಿ, ಅಮಾಸೆಬೈಲು ಗ್ರಾಪಂ ಸದಸ್ಯಕೃಷ್ಣ ಪೂಜಾರಿ ಉಪಸ್ಥಿತರಿದ್ದರು.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

2 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

3 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

3 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

3 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

3 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

3 days ago