ಉಡುಪಿ : ವಿದ್ಯಾವಂತರ ಜಿಲ್ಲೆಯಾಗಿ ಗುರುತಿಸಿಕೊಂಡಿರುವ ಉಡುಪಿಯ ಯುವ ಜನತೆಗೆ ಸ್ಥಳೀಯವಾಗಿಯೇ ಉದ್ಯೋಗಾವಕಾಶ ಸೃಷ್ಟಿಗೆ ಪ್ರಥಮ ಆದ್ಯತೆ ನೀಡುವುದಾಗಿ ಬಿಜೆಪಿ ಅಭ್ಯರ್ಥಿ ಯಶ್ಪಾಲ್ ಸುವರ್ಣ ಹೇಳಿದರು.
ಮಣಿಪಾಲ ಇಂಡಸ್ಟಿÅಯಲ್ ಏರಿಯಾದಲ್ಲಿ ವಿವಿಧ ಘಟಕಗಳಿಗೆ ಭೇಟಿ ನೀಡಿ ಸಿಬಂದಿಗಳಲ್ಲಿ ಮತ ಯಾಚನೆ ಮಾಡಿ ಮಾತನಾಡಿದರು.
ರಾಜ್ಯ ಮತ್ತು ಕೇಂದ್ರ ಸರಕಾರದ ಸಹಯೋಗದಿಂದ ಉಡುಪಿಯಲ್ಲಿ ಐ ಟಿ ಪಾರ್ಕ್ ಸ್ಥಾಪನೆಗೆ ವಿಶೇಷ ಕಾರ್ಯ ಯೋಜನೆ ರೂಪಿಸಿದ್ದು ಈ ಮೂಲಕ ಮುಂದಿನ ದಿನಗಳಲ್ಲಿ ಉಡುಪಿ ಜಿಲ್ಲೆ ರಾಜ್ಯದಲ್ಲಿಯೇ ಮುಂಚೂಣಿಯ ಐ ಟಿ ಹಬ್ ಆಗಿ ರೂಪಿಸಲಿದ್ದೇವೆ ಎಂದರು.
ಶಿಕ್ಷಣ, ವೈದ್ಯಕೀಯ ಹಾಗೂ ಕೈಗಾರಿಕಾ ವಲಯ, ರಿಯಲ್ ಎಸ್ಟೇಟ್ ಮತ್ತು ಕರಾವಳಿಯ ಆರ್ಥಿಕತೆಯಲ್ಲಿ ಬಹು ದೊಡ್ಡ ಪಾತ್ರವಹಿಸುವ ಮೀನುಗಾರಿಕೆಯ ಅಭಿವೃದ್ಧಿಗಾಗಿ ಪ್ರತ್ಯೇಕ ಮೀನುಗಾರಿಕಾ ಕೈಗಾರಿಕಾ ವಲಯ ಸ್ಥಾಪಿಸಿ ಉದ್ಯೋಗಾವಕಾಶ ಸೃಷ್ಟಿಗೆ ಪೂರಕ ವಾತಾವರಣ ನಿರ್ಮಾಣಕ್ಕೆ ಬದ್ದವಾಗಿದೆ ಎಂದರು.
ಉಡುಪಿ ಜಿಲ್ಲೆಯಲ್ಲಿ ಈಗಾಗಲೇ 100 ಕ್ಕೂ ಮಿಕ್ಕಿ ಐಟಿ ಕ್ಷೇತ್ರದ ಸ್ಟಾರ್ಟ್ ಅಪ್ ಕಂಪೆನಿಗಳು ಕಾರ್ಯಾಚರಿಸುತ್ತಿದ್ದು ಮುಂದಿನ ದಿನಗಳಲ್ಲಿ ಯುವ ಉದ್ಯಮಿಗಳಿಗೆ ಪ್ರೋತ್ಸಾಹ ನೀಡುವ ಜತೆ ಜತೆಗೆ ಪ್ರವಾಸೋದ್ಯಮದ ಮೂಲಕ ಸ್ವ ಉದ್ಯೋಗದ ಕಲ್ಪನೆಗೂ ಶಕ್ತಿ ತುಂಬಲು ಡಬಲ್ ಇಂಜಿನ್ ಸರ್ಕಾರದ ಮೂಲಕ ಯೋಜನೆ ರೂಪಿಸಲಾಗುವುದು ಎಂದರು.
ಈ ಸಂದರ್ಭದಲ್ಲಿ ನಗರ ಸಭಾ ಸದಸ್ಯೆ ಕಲ್ಪನಾ ಸುಧಾಮ, ಉಡುಪಿ ನಗರ ಬಿಜೆಪಿ ಪ್ರಧಾನ ಕಾರ್ಯದರ್ಶಿ ದಿನೇಶ್ ಅಮೀನ್, ಗ್ರಾಮಾಂತರ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಚಿನ್ ಪೂಜಾರಿ, ಪಕ್ಷದ ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…