ಉಡುಪಿ: ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ 56ನೇ ಜಿ ಎಸ್ ಟಿ ಕೌನ್ಸಿಲ್ ಸಭೆಯಲ್ಲಿ ಅಗತ್ಯ ವಸ್ತುಗಳ ಮೇಲಿನ ಸುಂಕವನ್ನು ಕಡಿತಗೊಳಿಸಿ, ಸರಳೀಕರಣ ಮಾಡುವ ಮೂಲಕ ದೇಶದ ಆರ್ಥಿಕ ಪ್ರಗತಿಗೆ ಮುನ್ನಡಿ ಬರೆದಿದೆ ಎಂದು ಉಡುಪಿ ಶಾಸಕರಾದ ಯಶ್ ಸುವರ್ಣ ಹರ್ಷ ವ್ಯಕ್ತಪಡಿಸಿದ್ದಾರೆ.
ಸ್ವಾತಂತ್ರ್ಯ ದಿನಾಚರಣೆ ಸಂದರ್ಬದಲ್ಲಿ ಪ್ರಧಾನಿ ನರೇಂದ್ರ ಮೋದಿ ಹೇಳಿದಂತೆ ದೇಶದ ಜನ ಸಾಮಾನ್ಯರು, ರೈತರಿಗೆ ಸಹಕಾರ ನೀಡುವ ನಿಟ್ಟಿನಲ್ಲಿ ಜಿ ಎಸ್ ಟಿ ಕಡಿತ ಮಾಡುವ ಭರವಸೆಯನ್ನು ಕೇಂದ್ರ ಸರ್ಕಾರ ಈಡೇರಿಸಿದೆ.
ಜಿ ಎಸ್ ಟಿ ಸರಳೀಕರಣ ಗೊಳಿಸುವ ನಿಟ್ಟಿನಲಿಪ್ರಸ್ತುತ ಇರುವ ಶೇ. 12 ಮತ್ತು ಶೇ. 28ರ ತೆರಿಗೆ ಸ್ಲ್ಯಾಬ್ಗಳನ್ನು ತೆಗೆದುಹಾಕಿ, ಕೇವಲ ಶೇ. 5 ಮತ್ತು ಶೇ. 18ರ ಎರಡು ಹಂತದ ತೆರಿಗೆ ರಚನೆಯನ್ನು ಜಾರಿಗೆ ತರಲು ಜಿ ಎಸ್ ಟಿ ಕೌನ್ಸಿಲ್ ಸಭೆ ಒಪ್ಪಿಗೆ ಸೂಚಿಸಿದೆ.
ಈ ಹಿಂದೆ ಜಿ ಎಸ್ ಟಿ ಜನಸಾಮಾನ್ಯರಿಗೆ ಹೊರೆ, ದರ ಏರಿಕೆ ಬಗ್ಗೆ ವ್ಯಾಪಕವಾಗಿ ಅಧಾರ ರಹಿತ ಟೀಕೆ ಮಾಡುತ್ತಿದ್ದ ಕಾಂಗ್ರೆಸ್ ಸಹಿತ ವಿರೋಧ ಪಕ್ಷಗಳು ಇದೀಗ ಕೇಂದ್ರ ಸರ್ಕಾರ ಜನಸಾಮಾನ್ಯರ ಪರವಾಗಿ ಜಿ ಎಸ್ ಟಿ ತೆರಿಗೆ ಕಡಿತ ಮಾಡಿದ ಬಳಿಕ ನೀರಿನಿಂದ ಹೊರತೆಗೆದ ಮೀನಿನನಂತೆ ಚಡಪಡಿಸುತ್ತಿದೆ.
ಜಿ ಎಸ್ ಟಿ ಕೌನ್ಸಿಲ್ ಸಭೆಯಲ್ಲಿ ರಾಜ್ಯದ ಪ್ರತಿನಿಧಿಯಾಗಿರುವ ಕಂದಾಯ ಸಚಿವರು ಜಿ ಎಸ್ ಟಿ ತೆರಿಗೆ ಕಡಿತದಿಂದ ರಾಜ್ಯಕ್ಕೆ 15 ಸಾವಿರ ಕೋಟಿ ಆದಾಯ ನಷ್ಟವಾಗುತ್ತದೆ ಅದನ್ನು ಕೇಂದ್ರ ಸರ್ಕಾರ ರಾಜ್ಯಕ್ಕೆ ಭರಿಸುವಂತೆ ಹೇಳಿಕೆ ನೀಡುವ ಮೂಲಕ ಪರೋಕ್ಷವಾಗಿ ಜಿ ಎಸ್ ಟಿ ತೆರಿಗೆ ಕಡಿತವನ್ನು ವಿರೋಧಿಸುತ್ತಿರುವುದು ದುರದೃಷ್ಟಕರ. ರಾಜ್ಯ ಕಾಂಗ್ರೆಸ್ ಸರಕಾರ ತಕ್ಷಣ ಜಿ ಎಸ್ ಟಿ ತೆರಿಗೆ ಕಡಿತದ ಬಗ್ಗೆ ತಮ್ಮ ನಿಲುವನ್ನು ಕೂಡಲೇ ಸ್ಪಷ್ಟ ಪಡಿಸಬೇಕು ಎಂದು ಯಶ್ ಪಾಲ್ ಸುವರ್ಣ ಆಗ್ರಹಿಸಿದ್ದಾರೆ.
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…