Featured

ಉಡುಪಿ : ಜಿ.ಪಂ., ತಾ.ಪಂ. ಚುನಾವಣೆಗೆ ಸನ್ನದ್ಧರಾಗಿ : ಸಚಿವ ವಿ.ಸುನೀಲ್ ಕುಮಾರ್  -Vishwanews24

ಉಡುಪಿ : ಜಿ.ಪಂ., ತಾ.ಪಂ. ಚುನಾವಣೆಗೆ ಸನ್ನದ್ಧರಾಗಿ : ಸಚಿವ ವಿ.ಸುನೀಲ್ ಕುಮಾರ್  -Vishwanews24

ಉಡುಪಿ : ಸದ್ಯದಲ್ಲೇ ಬರಲಿರುವ ಜಿ.ಪಂ. ಮತ್ತು ತಾ.ಪಂ. ಚುನಾವಣಾ ದೃಷ್ಠಿಯಿಂದ ಪ್ರತೀ ಮಹಾ ಶಕ್ತಿಕೇಂದ್ರ ಶಹ ಬೂತ್ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು ಮತ್ತು ಗ್ರಾಮ ಪಂಚಾಯತ್ ಸದಸ್ಯರ ಸಮಾವೇಶ ನಡೆಸುವ ಮೂಲಕ ಪಕ್ಷ ಸಂಘಟನೆಗೆ ಒತ್ತು ನೀಡಿ ಚುನಾವಣೆಯನ್ನು ಸಮರ್ಪಕವಾಗಿ ಎದುರಿಸಲು ಸನ್ನದ್ಧರಾಗಿ ಎಂದು ಕರ್ನಾಟಕ ಸರಕಾರದ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನೀಲ್ ಕುಮಾರ್ ಕರೆ ನೀಡಿದರು.

ಅವರು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಅಧ್ಯಕ್ಷತೆಯಲ್ಲಿ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರು ಮತ್ತು ಬಿಜೆಪಿ ಮಹಾ ಶಕ್ತಿಕೇಂದ್ರಗಳ ಅಧ್ಯಕ್ಷರ ಉಪಸ್ಥಿತಿಯಲ್ಲಿ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಜಿ.ಪಂ., ತಾ.ಪಂ. ಚುನಾವಣಾ ಪೂರ್ವಭಾವಿ ಸಭೆಯನ್ನುದ್ದೇಶಿಸಿ ಮಾತನಾಡಿದರು.

ಮಹಾ ಶಕ್ತಿಕೇಂದ್ರದ ಜೊತೆ ಜಿ.ಪಂ. ಮತ್ತು ತಾ.ಪಂ. ಸದಸ್ಯರ ಹೊಂದಾಣಿಕೆ ಅಗತ್ಯ. ಮಹಾ ಶಕ್ತಿಕೇಂದ್ರಗಳ ಅಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿಗಳು ವಿಧಾನಸಭಾ ಕ್ಷೇತ್ರವಾರು ಚುನಾವಣಾ ಪೂರ್ವಸಿದ್ಧತಾ ಕಾರ್ಯಗಳ ಪ್ರಯುಕ್ತ ನಿರಂತರವಾಗಿ ಸೇರಬೇಕು. ಬೂತ್ ಅಧ್ಯಕ್ಷ, ಪ್ರಧಾನ ಕಾರ್ಯದರ್ಶಿ ಮತ್ತು ಗ್ರಾಮ ಪಂಚಾಯತ್ ಸದಸ್ಯರನ್ನು ಸಕ್ರಿಯಗೊಳಿಸುವ ನಿಟ್ಟಿನಲ್ಲಿ ಸೆ.30ರೊಳಗೆ ಎಲ್ಲಾ ಕ್ಷೇತ್ರಗಳಲ್ಲಿ ಸಮಾವೇಶವನ್ನು ಆಯೋಜಿಸಬೇಕು. ಪಕ್ಷ ಸಂಘಟನೆಯ ಜೊತೆಗೆ ಪರಿಣಾಮಕಾರಿ ಚುನಾವಣಾ ಕಾರ್ಯತಂತ್ರಗಳ ಮೂಲಕ ಮುಂಬರಲಿರುವ ಎಲ್ಲಾ ಚುನಾವಣೆಗಳಲ್ಲಿ ಪ್ರಚಂಡ ವಿಜಯ ದಾಖಲಿಸಲು ಎಲ್ಲರೂ ಸಂಘಟಿತ ಶ್ರಮ ವಹಿಸಬೇಕು ಎಂದರು.

ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರ್ ರತ್ನಾಕರ ಹೆಗ್ಡೆ ಮಾತನಾಡಿ ಇಂದು ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ನೇತೃತ್ವದ ಸರಕಾರಗಳ ಅಭಿವೃದ್ಧಿ ಪರ ಆಡಳಿತವಿದೆ. ಬಿಜೆಪಿ ಮಗದೊಮ್ಮೆ ಅಧಿಕಾರದ ಚುಕ್ಕಾಣಿ ಹಿಡಿಯಬೇಕು. ಈ ಬಾರಿ ಕೇಂದ್ರ ಹಾಗೂ ರಾಜ್ಯದ ಮೂವರು ಸಚಿವರು ಇದ್ದಾರೆ. ಸಂಘಟನೆಯ ಮುಖಾಂತರ ಎಲ್ಲಾ ಚುನಾವಣೆಗಳನ್ನು ಎದುರಿಸಿ ಯಶಸ್ಸನ್ನು ಗಳಿಸಿದ ಅನುಭವವಿದೆ. ಸಂಘಟಿತ ಪ್ರಯತ್ನದಿಂದ ಮುಂದಿನ ಜಿ.ಪಂ., ತಾ.ಪಂ. ಚುನಾವಣೆಯಲ್ಲಿ ವಿಕ್ರಮ ವಿಜಯದ ಸಾಧನೆಗೈಯುವ ಮೂಲಕ ಪಕ್ಷವನ್ನು ಇನ್ನಷ್ಟು ಸದೃಢಗೊಳಿಸುವ ಗುರಿಯೊಂದಿಗೆ ತೊಡಗಿಸಿಕೊಳ್ಳೋಣ ಎಂದರು.

ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕುತ್ಯಾರು ನವೀನ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

Vishwa News 24

Recent Posts

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

7 hours ago

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

7 hours ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

8 hours ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

8 hours ago

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ -vishwanews24

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…

8 hours ago

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ -vishwanews24

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…

8 hours ago