ಉಡುಪಿ: ನಾಡೋಜ ಡಾ. ಜಿ. ಶಂಕರ್ ಅವರ ಮನೆ ಹಾಗೂ ಸಂಸ್ಥೆಗಳ ಮೇಲೆ ನಡೆದಿರುವ ಆದಾಯ ತೆರಿಗೆ ಇಲಾಖೆಯ ದಾಳಿಯನ್ನು ಉಡುಪಿ ಬ್ಲಾಕ್ ಕಾಂಗ್ರೆಸ್ ಖಂಡಿಸಿದೆ.
ಈ ಬಗ್ಗೆ ಪತ್ರಿಕಾ ಪ್ರಕಟಣೆ ಮೂಲಕ ಮಾಹಿತಿ ಹಂಚಿಕೊಂಡಿರುವ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ರಮೇಶ್ ಕಾಂಚನ್ ಅವರು, ಮೊಗವೀರ ಸಮುದಾಯದ ಮುಖಂಡರಾದ ನಾಡೋಜ ಡಾ. ಜಿ ಶಂಕರ್ ಅವರ ಮನೆ ಹಾಗೂ ಸಂಸ್ಥೆಗಳ ಮೇಲೆ ನಡೆದಿರುವ ಆದಾಯ ತೆರಿಗೆ ಇಲಾಖೆ ದಾಳಿಯು ಮೊಗವೀರ ಸಮುದಾಯಕ್ಕೆ ಬಿಜೆಪಿ ನೇತೃತ್ವದ ಮೋದಿ ಸರಕಾರ ಮಾಡಿದ ಬಹುದೊಡ್ಡ ಅವಮಾನ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹಾಗೂ ಮೊಗವೀರ ಸಮುದಾಯವನ್ನು ತಳಮಟ್ಟದಿಂದ ಮೇಲೆತ್ತುವುದರೊಂದಿಗೆ, ಸರ್ವರನ್ನು ಒಗ್ಗೂಡಿಸುವ ಮೂಲಕ ಸಮಾಜದಲ್ಲಿ ಸಂಘಟನೆಯನ್ನು ಬಲ ಪಡಿಸುವ ಬಹುದೊಡ್ಡ ಕೆಲಸವನ್ನು ಡಾ. ಜಿ ಶಂಕರ್ ಕಳೆದ ಹಲವಾರು ವರ್ಷಗಳಿಂದ ಮಾಡಿಕೊಂಡು ಬಂದಿದ್ದಾರೆ. ಜಾತಿ, ಮತ, ಪಕ್ಷಬೇಧವನ್ನು ಲೆಕ್ಕಿಸದೆ ಕಷ್ಟದಲ್ಲಿರುವವರ ನೆರವಿಗೆ ಧಾವಿಸಿ ಬರುವ ಮಾನವೀಯ ಗುಣವನ್ನು ಹೊಂದಿರುವ ಜಿ ಶಂಕರ್ ಸಮುದಾಯದ ಹಾಗೂ ಇಡೀ ಸಮಾಜದ ಆಸ್ತಿಯಾಗಿದ್ದಾರೆ. ರಕ್ತದಾನ, ಆರೋಗ್ಯ ಚಿಕಿತ್ಸೆಗೆ ಸಹಾಯಧನ, ಉಚಿತ ಸಾಮೂಹಿಕ ವಿವಾಹ, ಗುರಿಕಾರರ ಸಮ್ಮಿಲನ, ಮಕ್ಕಳ ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹ, ಧಾರ್ಮಿಕ ಕಾರ್ಯಕ್ರಮ, ದೇವಸ್ಥಾನದ ಜೀರ್ಣೋದ್ಧಾರ ಸೇರಿದಂತೆ ಹಲವಾರು ಸಮಾಜ ಮುಖಿ ಕಾರ್ಯಕ್ರಮಗಳನ್ನು ಮಾಡಿಕೊಂಡು ಬಂದಿರುವ ಶಂಕರ್ ವಿರುದ್ದ ಕೇಂದ್ರದ ಬಿಜೆಪಿ ಸರಕಾರ ಕೆಂಗಣ್ಣು ಬೀರಿರುವುದು ನಿಜಕ್ಕೂ ಖಂಡನೀಯ. ಮೊಗವೀರ ಸಮುದಾಯ ಸಮಾಜದಲ್ಲಿ ತಲೆ ಎತ್ತಿ ನಿಂತರೆ ಬಿಜೆಪಿಗರಿಗೆ ಮುಂದೆ ಸಮಸ್ಯೆಯಾಗುತ್ತದೆ ಎಂಬ ಭ್ರಮೆಯಲ್ಲಿ ಡಾ. ಜಿ ಶಂಕರ್ ಅವರನ್ನು ಮಾನಸಿಕವಾಗಿ ಕುಗ್ಗಿಸಲು ಈ ದಾಳಿಯನ್ನು ನಡೆಸಿದ್ದು ಮೊಗವೀರ ಸಮುದಾಯ ಸೇರಿದಂತೆ ಎಲ್ಲರೂ ಕೂಡ ಬಿಜೆಪಿಯ ರಾಜಕೀಯ ಕುತಂತ್ರವನ್ನು ಅರ್ಥ ಮಾಡಿಕೊಂಡು ಚುನಾವಣೆಯಲ್ಲಿ ಸೂಕ್ತ ಉತ್ತರ ನೀಡಬೇಕು ಎಂದು ಅವರು ತಿಳಿಸಿದ್ದಾರೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…