Featured

ಉಡುಪಿ : ಜೀವರಕ್ಷಕರಿಂದ ಕಡಲತೀರದಲ್ಲಿ ಸಂಭವಿಸುವ ಅಹಿತಕರ ಘಟನೆ ತಡೆಯಲು ಸಾಧ್ಯ: ಶಾಸಕ ಯಶ್‌ಪಾಲ್ ಎ ಸುವರ್ಣ – vishwanews24

ಉಡುಪಿ : ಜೀವರಕ್ಷಕರಿಂದ ಕಡಲತೀರದಲ್ಲಿ ಸಂಭವಿಸುವ ಅಹಿತಕರ ಘಟನೆ ತಡೆಯಲು ಸಾಧ್ಯ: ಶಾಸಕ ಯಶ್‌ಪಾಲ್ ಎ ಸುವರ್ಣ

ಉಡುಪಿ  : ಕಡಲ ತೀರದ ವಲಯಗಳಲ್ಲಿ ಪ್ರವಾಸಿಗರ ಸುರಕ್ಷತೆಯ ಕಾರ್ಯವನ್ನು ಜೀವರಕ್ಷಕ ತಂಡದವರು ಮಾಡಲಿದ್ದು, ಇದರಿಂದ ಭವಿಷ್ಯದಲ್ಲಾಗುವ ಅಹಿತಕರ ಘಟನೆಯನ್ನು ತಡೆಯಲು ಸಾಧ್ಯವಾಗಲಿದೆ ಎಂದು ಶಾಸಕ ಯಶ್‌ಪಾಲ್ ಎ ಸುವರ್ಣ ಹೇಳಿದರು.

ಅವರು ಇಂದು ಮಲ್ಪೆಯ ಕಡಲತೀರದಲ್ಲಿ ಜೀವ ರಕ್ಷಕ ಸಿಬ್ಬಂದಿಗಳಿಗೆ ತರಬೇತಿ ಹಾಗೂ ಪ್ರಮಾಣ ಪತ್ರ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸಿ, ಮಾತನಾಡುತ್ತಿದ್ದರು.

ಕಡಲ ಸೊಬಗನ್ನು ಸವಿಯಲು ಹೊರಗಿನಿಂದ ಬರುವ ಜನರಿಗೆ ಸಮುದ್ರ ಪ್ರದೇಶದ ಆಳ, ಅಲೆಗಳ ಹೊಡೆತಗಳನ್ನು ತಪ್ಪಿಸಿಕೊಳ್ಳುವ ಬಗ್ಗೆ ಅರಿವಿಲ್ಲದೇ ಅನಾಹುತಗಳು ಆಗುವ ಸಾಧ್ಯತೆಗಳಿದ್ದು, ಇವುಗಳನ್ನು ತಡೆಯುವ ಉದ್ದೇಶದಿಂದ ಜಿಲ್ಲಾಡಳಿತ ನುರಿತ ಹಾಗೂ ಪರಿಣಿತ ಜೀವ ರಕ್ಷಕ ಸಿಬ್ಬಂದಿಗಳನ್ನು ನಿಯೋಜನೆ ಮಾಡಿರುವುದು ಒಂದು ಅಭಿನಂದನೀಯ ಕಾರ್ಯ ಎಂದರು.

ದೇಶದಲ್ಲಿಯೇ ಮಲ್ಪೆ ಬೀಚ್ ಅತ್ಯಾಕರ್ಷಣೀಯವಾಗಿದ್ದು, ಪ್ರವಾಸಿಗರನ್ನು ಆಕರ್ಷಿಸುತ್ತಿದೆ. ದಿನೇ ದಿನೇ ಇಲ್ಲಿಗೆ ಬರುವವರ ಸಂಖ್ಯೆ ಹೆಚ್ಚುತ್ತಿದೆ. ಇಲ್ಲಿಗೆ ಆಗಮಿಸುವ ಪ್ರವಾಸಿಗರಿಗೆ ಅಗತ್ಯ ಮೂಲಭೂತ ಸೌಕರ್ಯಗಳನ್ನೊಳಗೊಂಡ ಬೀಚ್‌ನ ಸಮಗ್ರ ಅಭಿವೃದ್ಧಿಗೆ ಮಾಸ್ಟರ್ ಪ್ಲಾನ್ ರೂಪಿಸುವ ಕಾರ್ಯವನ್ನು ಮಾಡಲಾಗುತ್ತಿದೆ ಎಂದರು.

ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಮಾತನಾಡಿ, ಪ್ರವಾಸಿಗರ ಸುರಕ್ಷತೆಯ ಹಿತದೃಷ್ಠಿಯಿಂದ ಜೀವರಕ್ಷಕರನ್ನು ಮಲ್ಪೆ, ಮರವಂತೆ, ಕಾಪು, ತ್ರಾಸಿ, ಬೀಚ್‌ಗಳಲ್ಲಿ ನೇಮಿಸಲಾಗುತ್ತಿದೆ ಎಂದ ಅವರು, ಈಗಾಗಲೇ ಮೊದಲ ಹಂತದಲ್ಲಿ 17 ಜನ ಜೀವರಕ್ಷಕರಿಗೆ ತರಬೇತಿಯನ್ನು ನೀಡಲಾಗಿದ್ದು, ತಮ್ಮ ಕಾರ್ಯಕ್ಕೆ ಶೀಘ್ರದಲ್ಲಿಯೇ ನಿಯೋಜನೆಗೊಳ್ಳಲಿದ್ದಾರೆ ಎಂದರು.

ಜಿಲ್ಲೆಗೆ ಆಗಮಿಸುವ ಪ್ರವಾಸಿಗರಿಗೆ ಯಾವುದೇ ರೀತಿಯ ತೊಂದರೆಯಾಗದoತೆ ನೋಡಿಕೊಳ್ಳುವ ಜವಾಬ್ದಾರಿ ನಮ್ಮದಾಗಿದೆ ಎಂದ ಅವರು, ಪ್ರವಾಸಿ ತಾಣಗಳ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಲಾಗುವುದು ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್, ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ, ನಗರಸಭೆ ಪೌರಾಯುಕ್ತ ರಾಯಪ್ಪ, ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ್ ಸಿ.ಯು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ರಾಷ್ಟಿçÃಯ ಲೈಫ್ ಸೇವಿಂಗ್ಸ್ ಸೊಸೈಟಿಯಿಂದ ಮಾನ್ಯತೆ ಪಡೆದ ಪುತ್ತೂರಿನ ವಾರಾಣಾಸಿ ಡೆವಲಪ್‌ಮೆಂಟ್ ಅಂಡ್ ರಿಸರ್ಚ್ ಫೌಂಡೇಶನ್ ಸಂಸ್ಥೆಯ ವತಿಯಿಂದ ಜೀವ ರಕ್ಷಕ ತಂಡದವರಿಗೆ ಉತ್ತಮ ಈಜುಗಾರಿಕೆ, ಕೃತಕ ಉಸಿರಾಟ ನೀಡುವುದು, ಪ್ರಥಮಚಿಕಿತ್ಸೆ ನೀಡುವುದು, ಪ್ರಜ್ಞಾಹೀನರಿಗೆ ಸಾಗಿಸುವುದು ಸೇರಿದಂತೆ ಮತ್ತಿತರ ತರಬೇತಿಯನ್ನು ನೀಡುವುದರೊಂದಿಗೆ ಪ್ರಮಾಣ ಪತ್ರವನ್ನು ವಿತರಿಸಲಾಯಿತು.

 

Vishwa News 24

Recent Posts

ಪ್ರವಾಸಿ ಬೋಟ್ ದುರಂತ: ಮೃತರ ಸಂಖ್ಯೆ 9ಕ್ಕೆ ಏರಿಕೆ – vishwanews24

ಪ್ರವಾಸಿ ಬೋಟ್ ದುರಂತ: ಮೃತರ ಸಂಖ್ಯೆ 9ಕ್ಕೆ ಏರಿಕೆ ಜಬಲ್ಪುರ : ಮಧ್ಯಪ್ರದೇಶದ ಜಬಲ್ಪುರದಲ್ಲಿನ ಬಾರ್ಗಿ ಅಣೆಕಟ್ಟು ಬಳಿ ದುರಂತಕ್ಕೀಡಾದ…

9 hours ago

ಖರ್ಗೆ ಅವರು ರಾಜ್ಯದ ಮುಖ್ಯಮಂತ್ರಿಯಾದರೆ ಪಕ್ಷದ ಎಲ್ಲರೂ ಸ್ವಾಗತಿಸುತ್ತಾರೆ : ಗೃಹ ಸಚಿವ ಪರಮೇಶ್ವರ್ – vishwanews24

ಖರ್ಗೆ ಅವರು  ರಾಜ್ಯದ ಮುಖ್ಯಮಂತ್ರಿಯಾದರೆ ಪಕ್ಷದ ಎಲ್ಲರೂ ಸ್ವಾಗತಿಸುತ್ತಾರೆ : ಗೃಹ ಸಚಿವ ಪರಮೇಶ್ವರ್ ಬೆಂಗಳೂರು: ಅನುಭವ ಹೊಂದಿರುವ ಎಐಸಿಸಿ…

10 hours ago

ಪವನ್ ಖೇರಾಗೆ ಕಾನೂನು ಹೋರಾಟದಲ್ಲಿ ಗೆಲುವು : ಸುಪ್ರೀಂ ಕೋರ್ಟ್‌ನ ಮಹತ್ವದ ಆದೇಶ – vishwanews24

ಪವನ್ ಖೇರಾಗೆ ಕಾನೂನು ಹೋರಾಟದಲ್ಲಿ ಗೆಲುವು - ಸುಪ್ರೀಂ ಕೋರ್ಟ್‌ನ ಮಹತ್ವದ ಆದೇಶ ನವದೆಹಲಿ: ಪವನ್ ಖೇಡಾ ವಿರುದ್ಧ ಅಸ್ಸಾಂ…

10 hours ago

ಸಿಲಿಂಡರ್ ಬೆಲೆ ಏರಿಕೆ: ಕೇಂದ್ರದ ವಿರುದ್ಧ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಕ್ರೋಶ – vishwanews24

ಸಿಲಿಂಡರ್ ಬೆಲೆ ಏರಿಕೆ: ಕೇಂದ್ರದ ವಿರುದ್ಧ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಕ್ರೋಶ ಬೆಳಗಾವಿ : ವಾಣಿಜ್ಯ ಗ್ಯಾಸ್ ಸಿಲಿಂಡರ್ ದರವನ್ನು…

10 hours ago

ಬೆಳ್ತಂಗಡಿ : ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಮೃತ್ಯು – vishwanews24

ಬೆಳ್ತಂಗಡಿ : ಇಲಿಪಾಷಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಮೃತ್ಯು ಬೆಳ್ತಂಗಡಿ : ಮನೆಯಲ್ಲಿ ಇಲಿಪಾಷಣ ತೆಗೆದುಕೊಂಡು…

11 hours ago

ಉಡುಪಿ: ಮಹಿಳೆಯ ಉಸಿರುಗಟ್ಟಿಸಿ ಕೊಲೆ ಯತ್ನ ಪ್ರಕರಣ; ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ – vishwanews24

ಉಡುಪಿ: ಮಹಿಳೆಯ ಉಸಿರುಗಟ್ಟಿಸಿ ಕೊಲೆ ಯತ್ನ ಪ್ರಕರಣ; ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಉಡುಪಿ: ನಾಲ್ಕು ವರ್ಷಗಳ ಹಿಂದೆ ಮಂಚಿಕುಮೇರಿಯಲ್ಲಿ…

11 hours ago