ಉಡುಪಿ: ಕೋವಿಡ್ – 19 ಲಾಕ್ ಡೌನ್ ನಿಂದ ಬಸ್ ಸಂಚಾರ ಸ್ಥಗಿತಗೊಳಿಸಲಾಗಿದ್ದು, ಪ್ರಸ್ತುತ ಅನ್ ಲಾಕ್ ಆದರೂ ಬಸ್ ಸಂಚಾರ ಆರಂಭಿಸದ ಹಿನ್ನಲೆಯಲ್ಲಿ ನಿತ್ಯದ ಕೆಲಸ ಕಾರ್ಯಗಳಿಗೆ ತೆರಳುವ ಜನ ಸಾಮಾನ್ಯರು ಕಷ್ಟ ಪಡುತ್ತಿದ್ದಾರೆ. ಇದನ್ನು ಗಮನಿಸಿ ಉಡುಪಿ ಶಾಸಕ ಕೆ. ರಘುಪತಿ ಭಟ್ ಬಸ್ ಸಂಚಾರ ಪುನರಾರಂಭಿಸಲು ಇಂದು ಜಿಲ್ಲಾಧಿಕಾರಿಗಳ ಕೋರ್ಟ್ ಹಾಲ್ ಕಚೇರಿಯಲ್ಲಿ ಅಧಿಕಾರಿಗಳು ಹಾಗೂ ಖಾಸಗಿ ಬಸ್ ಮಾಲಕರ ಸಂಘದವರೊಂದಿಗೆ ಸಭೆ ನಡೆಸಿದರು.
ಸಭೆಯಲ್ಲಿ ಕೋವಿಡ್ ನಿಯಮಾವಳಿಯಂತೆ ಸಾಮಾಜಿಕ ಅಂತರವನ್ನು ಕಾಯ್ದುಕೊಂಡು ಜುಲೈ 1 ರಿಂದ ಜಿಲ್ಲೆಯಲ್ಲಿ ಬಸ್ ಆರಂಭಿಸಲು ನಿರ್ಣಯಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳಾದ ಜಿ ಜಗದೀಶ್, ಪ್ರಾದೇಶಿಕ ಸಾರಿಗೆ ಅಧಿಕಾರಿಗಳಾದ ಜೆ.ಪಿ ಗಂಗಾಧರ್, ಅಪರ ಜಿಲ್ಲಾಧಿಕಾರಿಗಳಾದ ಸದಾಶಿವ ಪ್ರಭು, ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಕುಮಾರ್ ಚಂದ್ರ, ಉಡುಪಿ ಬಸ್ ಮಾಲಕರ ಸಂಘದ ಅಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್, ಪದಾಧಿಕಾರಿಗಳಾದ ಸದಾನಂದ ಚಾತ್ರ, ಪ್ರಸಾದ್ ಬಲ್ಲಾಳ್, ಶಿವರಾಮ ಶೆಟ್ಟಿ, ಸಂದೀಪ್ ಮುಂತಾದವರು ಉಪಸ್ಥಿತರಿದ್ದರು.
‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ…
ವೋಟರ್ ಲಿಸ್ಟ್ನಿಂದ ತಮ್ಮ ಹೆಸರು ಕೈಬಿಡಲಾಗಿದೆ : ನಟ ಪ್ರಕಾಶ್ ರಾಜ್ ಆರೋಪಕ್ಕೆ ಚುನಾವಣಾಧಿಕಾರಿ ಸ್ಪಷ್ಟನೆ ಬೆಂಗಳೂರು: ಮತದಾರರ ಪಟ್ಟಿಯಿಂದ…
ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಸಚಿವ ಸಂಪುಟಕ್ಕೆ…
ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ ಹೊಸದಿಲ್ಲಿ: ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್. ಚಂದ್ರಶೇಖರನ್ ಅವರು…
ಉಡುಪಿ: ಆ.14 ರಂದು ನೇರ ಸಂದರ್ಶನ ಉಡುಪಿ: ನಗರದ ನಿಟ್ಟೂರು ರಾ.ಹೆ 66 ರ ಆಭರಣ ಮೋಟಾರ್ಸ್ ಪ್ರೆöÊವೇಟ್ ಲಿ.ನಲ್ಲಿ…
ಮೀನುಗಾರರಿಗೆ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ ಕುಂದಾಪುರ: ರಾಜ್ಯದ ಸಾಂಪ್ರದಾಯಿಕ ನಾಡ ದೋಣಿ…