ಉಡುಪಿ : ಜಿಲ್ಲೆಯಲ್ಲಿ ಜುಲೈ 10 ರಂದು ಉಡುಪಿ ನಗರ ಪ್ರದೇಶದ ಕೊರೋನ ಮುಂಚೂಣಿ ಕಾರ್ಯಕರ್ತರು, ದುರ್ಬಲ ಗುಂಪಿನ ಫಲಾನುಭವಿಗಳು, ಆದ್ಯತಾ ಗುಂಪಿನವರು, ಆರೋಗ್ಯ ಕಾರ್ಯಕರ್ತರು, ಕೇಂದ್ರ ಸರಕಾರ ಗುರುತಿಸಿರುವ ಮುಂಚೂಣಿ ಕಾರ್ಯಕರ್ತರುಗಳಿಗೆ ಹಾಗೂ 45 ವರ್ಷ ಮೇಲ್ಪಟ್ಟ ಸಾರ್ವಜನಿಕರಿಗೆ ಕೋವಿಡ್-19 2ನೇ ಡೋಸ್ ಲಸಿಕೆ ಲಭ್ಯವಿರುತ್ತದೆ.
ನಗರದ ಜಿಲ್ಲಾ ಆಸ್ಪತ್ರೆಯಲ್ಲಿ (ಸೇಂಟ್ ಸಿಸಿಲಿ ಶಾಲೆ) 2 ನೇ ಡೋಸ್ ಕೋವಿಶೀಲ್ಡ್ 250 ಡೋಸ್, ಮಣಿಪಾಲದ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ (ಮಾಧವ ಕೃಪಾ ಶಾಲೆ) 2 ನೇ ಡೋಸ್ ಕೋವಿಶೀಲ್ಡ್ -250 ಡೋಸ್ ಹಾಗೂ 2 ನೇ ಕೋವ್ಯಾಕ್ಸಿನ್ 150 ಡೋಸ್, ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಉಡುಪಿಯ ಹಳೆ ಕಟ್ಟಡದಲ್ಲಿ (ಅಲಂಕಾರ್ ಥಿಯೇಟರ್ ಹತ್ತಿರ) 2 ನೇ ಡೋಸ್ ಕೋವಿಶೀಲ್ಡ್ 150 ಡೋಸ್, ಕುಕ್ಕಿಕಟ್ಟೆಯ ಎಫ್.ಪಿ.ಎ.ಐ ನಲ್ಲಿ ( ಇಂದಿರಾನಗರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ) 2 ನೇ ಡೋಸ್ ಕೋವಿಶೀಲ್ಡ್ 100 ಡೋಸ್ ಹಾಗೂ ನಗರದ ಸರಕಾರಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಜುಲೈ 15 ರ ಒಳಗೆ ವಿದೇಶ ಪ್ರಯಾಣ ಮಾಡುವವರಲ್ಲಿ ಕೋವಿಶೀಲ್ಡ್ ಮೊದಲ ಡೋಸ್ ಲಸಿಕೆ ಪಡೆದು 28 ದಿನಗಳು ಮೀರಿದವರಿಗೆ 2ನೇ ಡೋಸ್ ಕೋವಿಶೀಲ್ಡ್ ಲಸಿಕೆ 150 ಡೋಸ್ ಲಭ್ಯವಿದೆ.
ಗ್ರಾಮೀಣ ಪ್ರದೇಶದಲ್ಲಿ ರಾಜ್ಯ ಸರಕಾರ ಗುರುತಿಸಿರುವ ಅನುಬಂಧ-1 ರಲ್ಲಿರುವ ಕೊರೋನ ಮುಂಚೂಣಿ ಕಾರ್ಯಕರ್ತರು, ದುರ್ಬಲ ಗುಂಪಿನ ಫಲಾನುಭವಿಗಳು, ಆರೋಗ್ಯ ಕಾರ್ಯಕರ್ತರು, ಕೇಂದ್ರ ಸರಕಾರ ಗುರುತಿಸಿರುವ ಮುಂಚೂಣಿ ಕಾರ್ಯಕರ್ತರು ಹಾಗೂ 45 ವರ್ಷ ಮೇಲ್ಪಟ್ಟ ಸಾರ್ವಜನಿಕರು ಕೋವಿಡ್-19 2 ನೇ ಡೋಸ್ ಲಸಿಕೆ ಪಡೆಯಲು ಹತ್ತಿರದ ಸರಕಾರಿ ಆಸ್ಪತ್ರೆ/ಆಶಾ ಕಾರ್ಯಕರ್ತೆಯರನ್ನು ಸಂಪರ್ಕಿಸಿ ಲಸಿಕೆ ಲಭ್ಯತೆಯನ್ನು ಖಚಿತಪಡಿಸಿಕೊಂಡು ಲಸಿಕಾ ಕೇಂದ್ರಕ್ಕೆ ಬಂದು ಲಸಿಕೆ ಪಡೆಯಬಹುದು.
ಜಿಲ್ಲೆಯಲ್ಲಿ 18 ರಿಂದ 44 ವರ್ಷ ವಯೋಮಿತಿಯ ಸಾರ್ವಜನಿಕರಿಗೆ ಯಾವುದೇ ಕೋವಿಡ್-19 ಲಸಿಕೆ ಲಭ್ಯವಿರುವುದಿಲ್ಲ ಹಾಗೂ 45 ವರ್ಷ ಮೇಲ್ಪಟ್ಟ ವಯೋಮಿತಿಯ ಸಾರ್ವಜನಿಕರಿಗೆ ಪ್ರಥಮ ಡೋಸ್ ಕೋವಿಡ್-19 ಲಸಿಕೆ ಲಭ್ಯವಿರುವುದಿಲ್ಲ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ನಾಗಭೂಷಣ ಉಡುಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…