Featured

ಉಡುಪಿ : ಜುಲೈ 6 – ದೀನದಯಾಳ್ ಚಾರಿಟೇಬಲ್ ಟ್ರಸ್ಟ್  ವತಿಯಿಂದ ಸ್ಮರಣ ಪಾರಿತೋಷಕ ವಿತರಣಾ ಸಮಾರಂಭ – vishwanews24

ಜುಲೈ 6 – ದೀನದಯಾಳ್ ಚಾರಿಟೇಬಲ್ ಟ್ರಸ್ಟ್  ವತಿಯಿಂದ ಸ್ಮರಣ ಪಾರಿತೋಷಕ ವಿತರಣಾ ಸಮಾರಂಭ.

ಉಡುಪಿ : ಉಡುಪಿ ನಗರಸಭಾ ವ್ಯಾಪ್ತಿಯ ಪ್ರೌಢ ಶಾಲೆಗಳಲ್ಲಿ 2024-25೪ರ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಅತ್ಯಧಿಕ ಅಂಕಗಳಿಸಿರುವ ಪ್ರತಿಭಾನ್ವಿತ 3 ವಿದ್ಯಾರ್ಥಿಗಳಿಗೆ ಪಂಡಿತ್ ದೀನದಯಾಳ್ಉಪಾಧ್ಯಾಯ ಸ್ಮರಣ ಪಾರಿತೋಷಕ, ಪ್ರತೀ ಶಾಲಾ ಮಟ್ಟದಲ್ಲಿ ಅತ್ಯಧಿಕ ಅಂಕಗಳಿಸಿರುವ ವಿದ್ಯಾರ್ಥಿಗಳಿಗೆ ಡಾ|. ವಿ. ಎಸ್. ಆಚಾರ್ಯ ಸ್ಮರಣ ಪಾರಿತೋಷಕ ಮತ್ತು ೨೦೨೩-೨೪ ರ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಅತ್ಯಧಿಕ ಅಂಕಗಳಿಸಿರುವ ವಿದ್ಯಾರ್ಥಿನಿಗೆ ಕುಮಾರಿ ಗಾಯತ್ರಿ ಸ್ಮಾರಣ ಪಾರಿತೋಷಕ ವಿತರಣಾ ಸಮಾರಂಭವು ಕೀರ್ತಿಶೇಷ ಡಾ|. ವಿ. ಎಸ್. ಆಚಾರ್ಯರ ಜನ್ಮ ದಿನವಾದ ಜುಲೈ 6
ಶನಿವಾರ ಅಪರಾಹ್ನ 4.30 ಗಂಟೆಗೆ ಉಡುಪಿ ಕುಂಜಿಬೆಟ್ಟು ಜಿಲ್ಲಾ ಬಿಜೆಪಿ ಕಛೇರಿಯ ಸಹಕಾರ ಸೌಧದ “ಪಂಡಿತ್ ದೀನದಯಾಳ್ ಸಭಾಭವನ” ದಲ್ಲಿ ನಡೆಯಲಿದೆ ಎಂದು ದೀನದಯಾಳ್ ಚಾರಿಟೇಬಲ್  ಟ್ರಸ್ಟ್(ರಿ) ಪ್ರಧಾನ ಕಾರ್ಯದರ್ಶಿಯಾದ ದಿನಕರ ಶೆಟ್ಟಿ ಹೆರ್ಗ ಮತ್ತು ಪಂಡಿತ್ ದೀನದಯಾಳ್ ಉಪಾಧ್ಯಾಯ ಮತ್ತು ಡಾ|. ವಿ. ಎಸ್. ಆಚಾರ್ಯ ಸ್ಮರಣ ಪಾರಿತೋಷಕ ಸಮಿತಿ ಸಂಚಾಲಕರಾದ ಶ್ರೀಮತಿ ಶಾಂತಾ ವಿ. ಆಚಾರ್ಯ ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಪಾರಿತೋಷಕ ವಿತರಣಾ ಸಮಾರಂಭದಲ್ಲಿ ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ ಶ್ರೀ ಕೋಟ ಶ್ರೀನಿವಾಸ ಪೂಜಾರಿ ಮತ್ತು ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಯಶ್‌ಪಾಲ್ ಎ. ಸುವರ್ಣ ಅವರು ಭಾಗವಹಿಸಿ ಪಾರಿತೋಷಕ ವಿತರಿಸಲಿದ್ದಾರೆ ಮತ್ತು ಉಡುಪಿ ನಗರಸಭೆಯ ಮಾಜಿ ಅಧ್ಯಕ್ಷರಾದ ಗುಜ್ಜಾಡಿ ಪ್ರಭಾಕರ ನಾಯಕ್ ದಿಕ್ಸೂಚಿ ಭಾಷಣ ಮಾಡಲಿದ್ದಾರೆಂದು ಅವರು ತಿಳಿಸಿದ್ದಾರೆ.

Vishwa News 24

Recent Posts

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ -vishwanews24

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…

8 hours ago

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ -vishwanews24

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…

8 hours ago

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು -vishwanews24

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…

9 hours ago

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ:ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ ಬಹಿರಂಗ! -vishwanews24

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ…

9 hours ago

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

1 day ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

1 day ago