ಉಡುಪಿ : ಉಡುಪಿ ನಗರಸಭಾ ವ್ಯಾಪ್ತಿಯ ಪ್ರೌಢ ಶಾಲೆಗಳಲ್ಲಿ 2024-25೪ರ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಅತ್ಯಧಿಕ ಅಂಕಗಳಿಸಿರುವ ಪ್ರತಿಭಾನ್ವಿತ 3 ವಿದ್ಯಾರ್ಥಿಗಳಿಗೆ ಪಂಡಿತ್ ದೀನದಯಾಳ್ಉಪಾಧ್ಯಾಯ ಸ್ಮರಣ ಪಾರಿತೋಷಕ, ಪ್ರತೀ ಶಾಲಾ ಮಟ್ಟದಲ್ಲಿ ಅತ್ಯಧಿಕ ಅಂಕಗಳಿಸಿರುವ ವಿದ್ಯಾರ್ಥಿಗಳಿಗೆ ಡಾ|. ವಿ. ಎಸ್. ಆಚಾರ್ಯ ಸ್ಮರಣ ಪಾರಿತೋಷಕ ಮತ್ತು ೨೦೨೩-೨೪ ರ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಅತ್ಯಧಿಕ ಅಂಕಗಳಿಸಿರುವ ವಿದ್ಯಾರ್ಥಿನಿಗೆ ಕುಮಾರಿ ಗಾಯತ್ರಿ ಸ್ಮಾರಣ ಪಾರಿತೋಷಕ ವಿತರಣಾ ಸಮಾರಂಭವು ಕೀರ್ತಿಶೇಷ ಡಾ|. ವಿ. ಎಸ್. ಆಚಾರ್ಯರ ಜನ್ಮ ದಿನವಾದ ಜುಲೈ 6
ಶನಿವಾರ ಅಪರಾಹ್ನ 4.30 ಗಂಟೆಗೆ ಉಡುಪಿ ಕುಂಜಿಬೆಟ್ಟು ಜಿಲ್ಲಾ ಬಿಜೆಪಿ ಕಛೇರಿಯ ಸಹಕಾರ ಸೌಧದ “ಪಂಡಿತ್ ದೀನದಯಾಳ್ ಸಭಾಭವನ” ದಲ್ಲಿ ನಡೆಯಲಿದೆ ಎಂದು ದೀನದಯಾಳ್ ಚಾರಿಟೇಬಲ್ ಟ್ರಸ್ಟ್(ರಿ) ಪ್ರಧಾನ ಕಾರ್ಯದರ್ಶಿಯಾದ ದಿನಕರ ಶೆಟ್ಟಿ ಹೆರ್ಗ ಮತ್ತು ಪಂಡಿತ್ ದೀನದಯಾಳ್ ಉಪಾಧ್ಯಾಯ ಮತ್ತು ಡಾ|. ವಿ. ಎಸ್. ಆಚಾರ್ಯ ಸ್ಮರಣ ಪಾರಿತೋಷಕ ಸಮಿತಿ ಸಂಚಾಲಕರಾದ ಶ್ರೀಮತಿ ಶಾಂತಾ ವಿ. ಆಚಾರ್ಯ ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಪಾರಿತೋಷಕ ವಿತರಣಾ ಸಮಾರಂಭದಲ್ಲಿ ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ ಶ್ರೀ ಕೋಟ ಶ್ರೀನಿವಾಸ ಪೂಜಾರಿ ಮತ್ತು ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಯಶ್ಪಾಲ್ ಎ. ಸುವರ್ಣ ಅವರು ಭಾಗವಹಿಸಿ ಪಾರಿತೋಷಕ ವಿತರಿಸಲಿದ್ದಾರೆ ಮತ್ತು ಉಡುಪಿ ನಗರಸಭೆಯ ಮಾಜಿ ಅಧ್ಯಕ್ಷರಾದ ಗುಜ್ಜಾಡಿ ಪ್ರಭಾಕರ ನಾಯಕ್ ದಿಕ್ಸೂಚಿ ಭಾಷಣ ಮಾಡಲಿದ್ದಾರೆಂದು ಅವರು ತಿಳಿಸಿದ್ದಾರೆ.
ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…
ಸುರತ್ಕಲ್ ಬಾಲಕಿ ಆತ್ಮಹತ್ಯೆ ಪ್ರಕರಣ : ಪೋಷಕರ ನಡೆ ಕುರಿತು ವಿಷಾದ ವ್ಯಕ್ತಪಡಿಸಿದ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಮಂಗಳೂರು …
ಗೃಹಲಕ್ಷ್ಮಿ ಯೋಜನೆಯಲ್ಲಿ ಗೋಲ್ಮಾಲ್ ಆಗಿಲ್ಲ: ಮಹಿಳಾ & ಮಕ್ಕಳಾಭಿವೃದ್ಧಿ ಇಲಾಖೆ ಸ್ಪಷ್ಟನೆ ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಲ್ಲಿ ಮಹಾಲೋಪವಾಗಿದೆ ಅಂತ ಸಿಎಜಿ…
ನನ್ನ , ಡಿ.ಕೆ.ಶಿವಕುಮಾರ್ ಮಧ್ಯೆ ಯಾವುದೇ ವ್ಯವಹಾರಿಕ ಸಂಬಂಧ ಇಲ್ಲ , ಆತ್ಮೀಯತೆಯೂ ಇಲ್ಲ : ವಿಜಯೇಂದ್ರ ಮಂಗಳೂರು :…
ಅಯೋಧ್ಯಾ ರಾಮ ಮಂದಿರದಲ್ಲಿ ದೇಣಿಗೆ ದುರುಪಯೋಗ ಆರೋಪ: ಎಂಟು ಆರೋಪಿಗಳ ಬಂಧನ ಅಯೋಧ್ಯೆ: ಅಯೋಧ್ಯೆ ರಾಮ ಮಂದಿರಕ್ಕೆ ಭಕ್ತಾದಿಗಳು ನೀಡಿದ್ದ…
ಆರ್ ಎಸ್ ಎಸ್ ವಿವಿಧ ಆಯಾಮಗಳಲ್ಲಿ ಸಮಾಜ ಸೇವೆ ನಡೆಸಿಕೊಂಡು ಬಂದಿದೆ : ಸತ್ಯಜಿತ್ ಸುರತ್ಕಲ್ ಮಂಗಳೂರು: ರಾಷ್ಟ್ರೀಯ ಸ್ವಯಂಸೇವಕ…