Featured

ಉಡುಪಿ : ಜು.17 ರಂದು ಕೋವಿಡ್- 19 ಎರಡನೇ ಡೋಸ್ ಲಸಿಕೆ ಲಭ್ಯ -Vishwanews24

ಉಡುಪಿ : ಜು.17 ರಂದು ಕೋವಿಡ್- 19 ಎರಡನೇ ಡೋಸ್ ಲಸಿಕೆ ಲಭ್ಯ -Vishwanews24

ಉಡುಪಿ : ಜಿಲ್ಲೆಯಲ್ಲಿ ಜುಲೈ 17 ರಂದು ಉಡುಪಿ ನಗರ ಪ್ರದೇಶದ ಕೊರೋನ ಮುಂಚೂಣಿ ಕಾರ್ಯಕರ್ತರು, ದುರ್ಬಲ ಗುಂಪಿನ ಫಲಾನುಭವಿಗಳು, ಆದ್ಯತಾ ಗುಂಪಿನವರು, ಆರೋಗ್ಯ ಕಾರ್ಯಕರ್ತರು, ಕೇಂದ್ರ ಸರಕಾರ ಗುರುತಿಸಿರುವ ಮುಂಚೂಣಿ ಕಾರ್ಯಕರ್ತರುಗಳಿಗೆ ಹಾಗೂ 45 ವರ್ಷ ಮೇಲ್ಪಟ್ಟ ಸಾರ್ವಜನಿಕರಿಗೆ ಕೋವಿಡ್-19 2ನೇ ಡೋಸ್ ಲಸಿಕೆ ಲಭ್ಯವಿರುತ್ತದೆ.

ಮಣಿಪಾಲದ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ (ಮಾಧವ ಕೃಪಾ ಶಾಲೆ) 2 ನೇ ಡೋಸ್ ಕೋವಿಶೀಲ್ಡ್ -100 ಡೋಸ್, ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಉಡುಪಿಯ ಹಳೆ ಕಟ್ಟಡದಲ್ಲಿ (ಅಲಂಕಾರ್ ಥಿಯೇಟರ್ ಹತ್ತಿರ) 2 ನೇ ಡೋಸ್ ಕೋವಿಶೀಲ್ಡ್ 100 ಡೋಸ್, ಕುಕ್ಕಿಕಟ್ಟೆಯ ಎಫ್.ಪಿ.ಎ.ಐ ನಲ್ಲಿ (ಇಂದಿರಾನಗರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ) 2 ನೇ ಡೋಸ್ ಕೋವಿಶೀಲ್ಡ್ 150 ಡೋಸ್ ಹಾಗೂ ನಗರದ ಸರಕಾರಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಜುಲೈ 25 ರ ಒಳಗೆ ವಿದೇಶ ಪ್ರಯಾಣ ಮಾಡುವವರಲ್ಲಿ ಕೋವಿಶೀಲ್ಡ್ ಮೊದಲ ಡೋಸ್ ಲಸಿಕೆ ಪಡೆದು 28 ದಿನಗಳು ಮೀರಿದವರಿಗೆ 2ನೇ ಡೋಸ್ ಕೋವಿಶೀಲ್ಡ್ 100 ಡೋಸ್ ಲಸಿಕೆಯನ್ನು ಬೆಳಗ್ಗೆ 10.30 ರಿಂದ ಮಧ್ಯಾಹ್ನ 3.30 ರ ವರೆಗೆ ನೀಡಲಾಗುವುದು.

ಗ್ರಾಮೀಣ ಪ್ರದೇಶದಲ್ಲಿ ರಾಜ್ಯ ಸರಕಾರ ಗುರುತಿಸಿರುವ ಅನುಬಂಧ-1 ರಲ್ಲಿರುವ ಕೊರೋನ ಮುಂಚೂಣಿ ಕಾರ್ಯಕರ್ತರು, ದುರ್ಬಲ ಗುಂಪಿನ ಫಲಾನುಭವಿಗಳು, ಆರೋಗ್ಯ ಕಾರ್ಯಕರ್ತರು, ಕೇಂದ್ರ ಸರಕಾರ ಗುರುತಿಸಿರುವ ಮುಂಚೂಣಿ ಕಾರ್ಯಕರ್ತರು ಹಾಗೂ 45 ವರ್ಷ ಮೇಲ್ಪಟ್ಟ ಸಾರ್ವಜನಿಕರು ಕೋವಿಡ್-19 2 ನೇ ಡೋಸ್ ಲಸಿಕೆ ಪಡೆಯಲು ಹತ್ತಿರದ ಸರಕಾರಿ ಆಸ್ಪತ್ರೆ/ಆಶಾ ಕಾರ್ಯಕರ್ತೆಯರನ್ನು ಸಂಪರ್ಕಿಸಿ ಲಸಿಕೆ ಲಭ್ಯತೆಯನ್ನು ಖಚಿತಪಡಿಸಿಕೊಂಡು ಲಸಿಕಾ ಕೇಂದ್ರಕ್ಕೆ ಬಂದು ಲಸಿಕೆ ಪಡೆಯುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ನಾಗಭೂಷಣ ಉಡುಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ – vishwanews24

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…

6 seconds ago

ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು  – vishwanews24

ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು …

34 minutes ago

ಮಂಗಳೂರು: ತಡೆಗೋಡೆ ಕುಸಿದು ಬಿದ್ದು ಮೂವರು ಮೃತ್ಯು; 5 ಲಕ್ಷ ರೂ.ಗಳ ಪರಿಹಾರ ಮೊತ್ತದ ಚೆಕ್‌ ವಿತರಣೆ – vishwanews24

ಮಂಗಳೂರು: ತಡೆಗೋಡೆ ಕುಸಿದು ಬಿದ್ದು ಮೂವರು ಮೃತ್ಯು; 5 ಲಕ್ಷ ರೂ.ಗಳ ಪರಿಹಾರ ಮೊತ್ತದ ಚೆಕ್‌ ವಿತರಣೆ ಮಂಗಳೂರು: ತಡೆಗೋಡೆ…

2 hours ago

ಡಿವಿ ಸದಾನಂದಗೌಡ ಆಡಿಯೋ ವೈರಲ್ ಬಗ್ಗೆ ವಿಜಯೇಂದ್ರ ರಿಯಾಕ್ಷನ್ – vishwanews24

ಡಿವಿ ಸದಾನಂದಗೌಡ ಆಡಿಯೋ ವೈರಲ್ ಬಗ್ಗೆ ವಿಜಯೇಂದ್ರ ಫಸ್ಟ್ ರಿಯಾಕ್ಷನ್ ಆಡಿಯೋ ಧ್ವನಿ ತಮ್ಮದಲ್ಲ ಎಂದು ಸದಾನಂದಗೌಡರೇ ಹೇಳಿದ್ದಾರೆ ;…

2 hours ago

ಬೆಳಗಾವಿ : ಜುಲೈ 10 ರಿಂದ ಆರ್‌ಎಸ್‌ಎಸ್ ಅಖಿಲ ಭಾರತೀಯ ಪ್ರಾಂತ ಪ್ರಚಾರಕರ ವಾರ್ಷಿಕ ಸಭೆ – vishwanews24

ಬೆಳಗಾವಿ : ಜುಲೈ 10 ರಿಂದ ಆರ್‌ಎಸ್‌ಎಸ್ ಅಖಿಲ ಭಾರತೀಯ ಪ್ರಾಂತ ಪ್ರಚಾರಕರ ವಾರ್ಷಿಕ ಸಭೆ ಜು.6 ಕ್ಕೆ ಬೆಳಗಾವಿಗೆ…

2 hours ago

ಸಪ್ತಪದಿ ಸೇರಿ ಅಗತ್ಯ ವಿಧಿ-ವಿಧಾನಗಳು ನೆರವೇರಿದಾಗ ಮಾತ್ರ ಹಿಂದೂ ವಿವಾಹ ಮಾನ್ಯ: ಗುಜರಾತ್ ಹೈಕೋರ್ಟ್ ಮಹತ್ವದ ತೀರ್ಪು – vishwanews24

ಸಪ್ತಪದಿ ಸೇರಿ ಅಗತ್ಯ ವಿಧಿ-ವಿಧಾನಗಳು ನೆರವೇರಿದಾಗ ಮಾತ್ರ ಹಿಂದೂ ವಿವಾಹ ಮಾನ್ಯ: ಗುಜರಾತ್ ಹೈಕೋರ್ಟ್ ಮಹತ್ವದ ತೀರ್ಪು ಅಹಮದಾಬಾದ್: ಕೇವಲ…

2 hours ago