ಉಡುಪಿ: ಸಂತೆಕಟ್ಟೆಯಲ್ಲಿ ಪ್ರಥಮ ಬಾರಿಗೆ ಎಂಬಂತೆ ಹಲಸು ಮತ್ತು ಹಣ್ಣು ಮೇಳವನ್ನು ಕೆಮ್ಮಣ್ಣು ಲಿಟ್ಲ್ ಫ್ಲವರ್ ಹಾಲ್ನಲ್ಲಿ ಜು.26 ಮತ್ತು 27ರಂದು ಹಮ್ಮಿಕೊಳ್ಳಲಾಗಿದೆ ಎಂದು ಸಂಘಟಕ ಮುಹಮ್ಮದ್ ಮುಖ್ತಾರ್ ಹುಸೇನ್ ತಿಳಿಸಿದ್ದಾರೆ.
ಉಡುಪಿಯಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೇಳದಲ್ಲಿ ಮುಖ್ಯವಾಗಿ ಆಂಧ್ರದಿಂದ ತರಿಸಲಾದ ಏಕದಶಿ, ರುದ್ರಾಕ್ಷಿ, ಕೇಸರ್, ಚಂದ್ರ ಹಲಸು ವಿಶೇಷವಾಗಿದೆ. ರಾಜ್ಯದ ವಿವಿಧ ಮೂಲೆಗಳಿಂದ ರುಚಿಯಾದ ಮಾವು ಮತ್ತು ಹಲಸಿನ ಹಾಗೂ ಇತರ ಉತ್ಪನ್ನಗಳ ಖಾದ್ಯಗಳ ನೂರಾರು ಮಳಿಗೆಗಳಿದ್ದು, ಬಟರ್ಫ್ರೂಟ್, ನೇರಳೆ ಸೇರಿದಂತೆ ವಿವಿಧ ಹಣ್ಣುಗಳು ಮೇಳದ ಆಕರ್ಷಣೆಯಾಗಿವೆ ಎಂದರು.
ಕಾರ್ಯಕ್ರಮವನ್ನು ಜು.26ರಂದು ಬೆಳಗ್ಗೆ 11ಗಂಟೆಗೆ ಮೇಳವನ್ನು ಕೆಮ್ಮಣ್ಮು ಚರ್ಚಿನ ಧರ್ಮಗುರು ಉದ್ಘಾಟಿಸಲಿರುವರು. ಜು.27ರಂದು ಸಂಜೆ 5ಗಂಟೆಗೆ ನಡೆಯುವ ಸಮಾರೋಪ ಸಮಾರಂಭದಲ್ಲಿ ಹಿರಿಯ ಉದ್ಯಮಿ ಹಾಗೂ ಕೃಷಿಕರನ್ನು ಸನ್ಮಾನಿಸಲಾಗುವುದು.
ಮೇಳದಲ್ಲಿ ಏಳು ವರ್ಷದೊಳಗಿನ ಮಕ್ಕಳು ಹಲಸು ತಿನ್ನುವ ಸೇರಿದಂತೆ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಗಿದ್ದು, ವಿಜೇತರಿಗೆ ಬಹುಮಾನ ವಿತರಿಸಲಾಗುವುದು ಎಂದು ಅವರು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಸಂಘಟಕರಾದ ನಿಜಾಮುದ್ದೀನ್ಷ ಮುಹಮ್ಮದ್ ಯಾಸೀನ್, ಗಫೂರ್, ಮಾಶೂಕ್ ಉಪಸ್ಥಿತರಿದ್ದರು.
ಮಲ್ಪೆ : ಸೈಂಟ್ಮೇರೀಸ್ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…
ಜೂನ್ 21ರಂದು ನೀಟ್ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್ 21 ರಂದು ನೀಟ್–ಯುಜಿ ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…