ಉಡುಪಿ : ಜೂನ್ 14ರ ಬಳಿಕ ಉಡುಪಿ ಜಿಲ್ಲೆಯಲ್ಲಿ ಲಾಕ್ ಡೌನ್ ಸಡಿಲಿಕೆಗೊಳಿಸಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ.
ಉಡುಪಿ ಜಿಲ್ಲೆಯಲ್ಲಿ ಲಾಕ್ ಡೌನ್ ಮುಂದುವರೆಯುವುದಿಲ್ಲ, ಬದಲಾಗಿ ಸಡಿಲಿಕೆ ನೀಡಲಾಗಿದೆ. ಸಂಜೆ 7ರಿಂದ ಬೆಳಗ್ಗೆ 5ರ ತನಕ ನೈಟ್ ಕರ್ಫ್ಯೂ ಜಾರಿಯಲ್ಲಿರುತ್ತದೆ. ಶನಿವಾರ, ರವಿವಾರಗಳಂದು ವೀಕೆಂಡ್ ಕರ್ಪ್ಯೂ ಜಾರಿಯಲ್ಲಿರದೆ. ಶುಕ್ರವಾರ ಸಂಜೆ 7 ಗಂಟೆಯಿಂದ ವೀಕೆಂಡ್ ಕರ್ಫ್ಯೂ ಜಾರಿಗೆ ಬರಲಿದ್ದು, ಸೋಮವಾರ ಬೆಳಿಗ್ಗೆ 5 ಗಂಟೆಯ ತನಕ ವೀಕೆಂಡ್ ಕರ್ಫ್ಯೂ ಜಾರಿಯಲ್ಲಿರಲಿದೆ.
ಉಳಿದಂತೆ ಎಲ್ಲಾ ನಿರ್ಮಾಣ ಕಾರ್ಯಗಳಿಗೆ ಅನುಮತಿ ನೀಡಲಾಗಿದ್ದು, ಸಿಮೆಂಟ್, ಸ್ಟೀಲ್ ಅಂಗಡಿ ಕಾರ್ಯಾಚರಿಸಲು ಅವಕಾಶವಿದೆ. ಕಾರ್ಖಾನೆಗಳಲ್ಲಿ ಶೇ. 50ರಷ್ಟು ಸಿಬ್ಬಂದಿಗಳನ್ನು ಬಳಸಲು ಅವಕಾಶ ನೀಡಲಾಗಿದ್ದು, ಶೇ. 30ರಷ್ಟು ಸಿಬ್ಬಂದಿಗಳೊಂದಿಗೆ ಗಾರ್ಮೆಂಟ್ಸ್ ಆರಂಭಿಸಲು ಅವಕಾಶ ನೀಡಲಾಗಿದೆ.
ಆಟೋ ಟ್ಯಾಕ್ಸಿಗಳಲ್ಲಿ ಇಬ್ಬರು ಸಂಚರಿಸಲು ಅವಕಾಶ ನೀಡಲಾಗಿದೆ. ಇನ್ನು ಖಾಸಗಿ ಹಾಗೂ ಸರಕಾರಿ ಬಸ್ ಸಂಚಾರಕ್ಕೆ ಜಿಲ್ಲೆಯಲ್ಲಿ ಅವಕಾಶವಿಲ್ಲ ಎಂದು ಸಿಎಂ ಘೋಷಣೆ ಮಾಡಿದ್ದಾರೆ. ರಾಜ್ಯದಲ್ಲಿ ಕೊರೋನಾ ಹೆಚ್ಚಾಗಿರುವ 11 ಜಿಲ್ಲೆಗಳನ್ನು ಹೊರತುಪಡಿಸಿ ಉಳಿದ ಜಿಲ್ಲೆಗಳಲ್ಲಿ ಈ ನಿಯಮ ಜಾರಿಗೆ ಬರಲಿದೆ.
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…
ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆಯನ್ನು ನಿಯಂತ್ರಿಸಲು ಮತ್ತು…
ಹಿಜಬ್ ಬಗ್ಗೆ ಮಾತಾಡುವ ಬಿಜೆಪಿಯವರು ನೀಟ್ ಬಗ್ಗೆ ಮಾತಾಡಲಿ : ಮಧು ಬಂಗಾರಪ್ಪ ಆಕ್ರೋಶ ಬೆಂಗಳೂರು: ಹಿಜಬ್ ಬಗ್ಗೆ ಮಾತಾಡುವ…