ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಉಡುಪಿ ಹಾಗೂ ಕಮಲ್ ಎ ಬಾಳಿಗಾ ಚಾರಿಟೇಬಲ್ ಟ್ರಸ್ಟ್ ಮುಂಬಯಿ ಇವರ ಸಂಯುಕ್ತ ಆಶ್ರಯದಲ್ಲಿ ನಶಾ ಮುಕ್ತ ಭಾರತ ಅಭಿಯಾನದ ಯೋಜನೆಯಡಿ ಜಿಲ್ಲೆಯ ಸಾರ್ವಜನಿಕರಲ್ಲಿ ಮಾದಕ ದ್ರವ್ಯ ವ್ಯಸನದ ದುಷ್ಪರಿಣಾಮಗಳ ಕುರಿತು ಜಾಗೃತಿ ಮೂಡಿಸುವ ಸಲುವಾಗಿ ಜೂನ್ 26 ರಿಂದ ಜುಲೈ 5 ರ ವರೆಗೆ ಉಚಿತ ಮದ್ಯ ವ್ಯಸನ ವಿಮುಕ್ತಿ ಮತ್ತು ವಸತಿ ಶಿಬಿರವನ್ನು ಆಯೋಜಿಸಲಾಗುವುದು.
ಶಿಬಿರದಲ್ಲಿ 50 ಶಿಬಿರಾರ್ಥಿಗಳಿಗೆ ಭಾಗವಹಿಸಲು ಅವಕಾಶವಿದ್ದು, ಮದ್ಯವ್ಯಸನದಿಂದ ವಿಮುಕ್ತಿ ಹೊಂದಲು ಇಚ್ಛಿಸುವ ಮದ್ಯವ್ಯಸನಿಗಳು ಜೂನ್ 23 ರ ಒಳಗೆ ಡಾ.ಎ.ವಿ ಬಾಳಿಗಾ ಸ್ಮಾರಕ ಆಸ್ಪತ್ರೆಯಲ್ಲಿ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬಹುದಾಗಿದೆ.
ಶಿಬಿರದಲ್ಲಿ ಶಿಬಿರಾರ್ಥಿಗಳ ದೈಹಿಕ ಸಮಸ್ಯೆಯನ್ನು ಗುರುತಿಸಿ, ಅದಕ್ಕನುಗುಣವಾಗಿ ಚಿಕಿತ್ಸೆ ನೀಡಲಾಗುವುದು ಹಾಗೂ ಮದ್ಯ ಮತ್ತು ಮಾದಕ ದ್ರವ್ಯಗಳಿಂದ ಉಂಟಾಗುವ ದುಷ್ಪರಿಣಾಮ ಹಾಗೂ ಜೀವನ ಶೈಲಿ ಬದಲಾವಣೆ ಕುರಿತು ತಜ್ಷರಿಂದ ಮಾಹಿತಿ ನೀಡಲಾಗುವುದು ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
ಮಂಗಳೂರು: ವಂದೇ ಭಾರತ್ ಎಕ್ಸ್ಪ್ರೆಸ್ ಅಡುಗೆ ಸೇವಾ ಘಟಕವನ್ನು ಪರಿಶೀಲಿಸಿದ ಆಹಾರ ಸುರಕ್ಷತಾ ಅಧಿಕಾರಿಗಳು ಮಂಗಳೂರು : ಮಂಗಳೂರು ಸೆಂಟ್ರಲ್…
ಉಡುಪಿ : ಬಾಳೆಹಣ್ಣು ದಾಸ್ತಾನು ಕೇಂದ್ರಗಳ ಮೇಲೆ ದಾಳಿ ; ರಾಸಾಯನಿಕಯುಕ್ತ ಬಾಳೆಹಣ್ಣುಗಳ ನಾಶ ಪಡಿಸಿದ ಅಧಿಕಾರಿಗಳು ಉಡುಪಿ :…
ತುಳುಕೂಟ ಉಡುಪಿ: 2026–27ನೇ ಸಾಲಿನ ಕಾರ್ಯಕಾರಿ ಸಮಿತಿ ಪ್ರಕಟ- ಅಧ್ಯಕ್ಷರಾಗಿ ಬಿ. ಜಯಕರ ಶೆಟ್ಟಿ ಇಂದ್ರಾಳಿ ತುಳು ಭಾಷೆ, ಸಾಹಿತ್ಯ,…
ಎಲ್ಪಿಜಿ: ಇ-ಕೆವೈಸಿ ದಿನಾಂಕ ಆ. 23ರ ವರೆಗೆ ವಿಸ್ತರಣೆ ಉಡುಪಿ: ಎಲ್ಪಿಜಿ ಗ್ರಾಹಕರಿಗೆ ಇ-ಕೆವೈಸಿ ಪೂರ್ಣ ಗೊಳಿಸಲು ನೀಡಲಾಗಿದ್ದ ಗಡುವನ್ನು ಆ.…
ಚಿತ್ರದುರ್ಗ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಖಾಸಗಿ ಬಸ್ ; ಮೂವರು ದುರ್ಮರಣ 15ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ…
ಕಡಬ: ದ್ವಿಚಕ್ರ ವಾಹನದ ಮೇಲೆ ಬಿದ್ದ ಮರ ; ಹಿಂಬದಿ ಸವಾರನಿಗೆ ಗಂಭೀರ ಗಾಯ ಕಡಬ : ಗುಂಡ್ಯ-ಸುಳ್ಯ ರಾಜ್ಯ…