ಉಡುಪಿ : ಡಿಸೇಲ್ ಬೆಲೆ ಸೇರಿದಂತೆ ವಿವಿಧ ವೆಚ್ಚಗಳ ಏರಿಕೆಯ ಪರಿಣಾಮವಾಗಿ ಖಾಸಗಿ ಬಸ್ಗಳ ಟಿಕೆಟ್ ದರವನ್ನು ರಾಜ್ಯಾದ್ಯಂತ ಶೇ.5-8ರಷ್ಟು ಏರಿಕೆ ಮಾಡಲಾಗಿದೆ ಎಂದು ಕರ್ನಾಟಕ ರಾಜ್ಯ ಮಜಲು ವಾಹನ ಬಸ್ ಮಾಲಕರ ಸಂಘಗಳ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ.
ಉಡುಪಿಯಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಫೆಡರೇಶನ್ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಡೀಸೆಲ್ ಬೆಲೆಯಲ್ಲಿ ತೀವ್ರ ಏರಿಕೆ ಮತ್ತು ನಿರ್ವಹಣಾ ವೆಚ್ಚದಲ್ಲಿನ ಏರಿಕೆಯಿಂದಾಗಿ ದರ ಪರಿಷ್ಕರಣೆ ಅಗತ್ಯವಾಗಿದೆ ಎಂದು ಹೇಳಿದರು.
ರಾಜ್ಯ ಸರಕಾರದ ಒಂದು ವರ್ಷದ ಹಿಂದೆ 3ರೂ. ಹಾಗೂ ಕೇಂದ್ರ ಸರಕಾರ ನಾಲ್ಕು ಬಾರಿ 8.17ರೂ. ಡಿಸೇಲ್ ದರವನ್ನು ಮತ್ತು ವಾಹನದ ಬಿಡಿಭಾಗಗಳ ದರ, ಟೈರ್-ಟೈರ್ ರಿಸೋಲಿಂಗ್ ದರ, ಟೋಲ್ ದರ, ನೌಕರರ ವೇತನ, ಸರಕಾರದ ಟ್ಯಾಕ್ಸ್, ಇನ್ಶ್ಯೂರೆಮನ್ಸ್ ದರ ಸೇರಿದಂತೆ ವಿವಿಧ ವೆಚ್ಚಗಳಲ್ಲಿ ತೀರಾ ಏರಿಕೆಯಾಗಿದೆ. ಈ ಪರಿಣಾಮ ಬಸ್ ಟಿಕೆಟ್ ದರವನ್ನು ಕರ್ನಾಟಕ ರಾಜ್ಯ ಖಾಸಗಿ ಬಸ್ ಮಾಲಕರ ಸಂಘಗಳ ಒಕ್ಕೂಟ ನಿರ್ಧರಿಸಿದೆ ಎಂದರು.
ರಾಜ್ಯ ಸರಕಾರದ ಅಧಿಸೂಚನೆ ಸಂಖ್ಯೆ ಟಿಡಿ 81 ಟಿಡಿಂ 2020ರ ಪ್ರಕಾರ ಪ್ರತಿ ಪ್ರಯಾಣಿಕರಿಗೆ 4ಪೈಸೆಯಂತೆ ಪ್ರತಿ ಕಿ.ಮೀ.ಗೆ ಕನಿಷ್ಠ 0.25ಪೈಸೆಯ ವರೆಗೆ ಸೆಸ್ ಹಾಕಲು ಅವಕಾಶ ಇದ್ದು, ಅದರ ಪ್ರಕಾರ ಹಾಲಿ ದರದ ಮೇಲೆ ಶೇ.5ರಿಂದ ಶೇ.8ರವರೆಗೆ ದರ ಪರಿಷ್ಕರಣೆ ಮಾಡಲಾಗಿದೆ. ಪರಿಷ್ಕೃತ ದರವು ಜೂ.8ರಿಂದ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಜಾರಿ ಮಾಡಲಾಗುವುದು ಎಂದು ಅವರು ಮಾಹಿತಿ ನೀಡಿದರು.
ಕರಾವಳಿ ಪ್ರದೇಶದ ಕೆಲವು ಪ್ರಮುಖ ಮಾರ್ಗಗಳಲ್ಲಿ ಪರಿಷ್ಕೃತ ದರಗಳು ಇಂತಿವೆ:
ಉಡುಪಿ – ಮಂಗಳೂರು: 95 ರಿಂದ 100 ರೂ.
ಉಡುಪಿ – ಕುಂದಾಪುರ: 60 ರಿಂದ 63 ರೂ.
ಉಡುಪಿ – ಮಣಿಪಾಲ: 12 ರಿಂದ 13 ರೂ.
ಉಡುಪಿ – ಕಾರ್ಕಳ: 58 ರಿಂದ 60 ರೂ.
ಕುಂದಾಪುರ – ಮಂಗಳೂರು: 145 ರಿಂದ 153 ರೂ.
ಕುಯಿಲಾಡಿ ಸುರೇಶ್ ನಾಯಕ್ ಮಾಹಿತಿ ನೀಡಿ, ಫೆಡರೇಶನ್ ರಾಜ್ಯಾದ್ಯಂತ ಸುಮಾರು 5,300 ಖಾಸಗಿ ಬಸ್ಗಳನ್ನು ಪ್ರತಿನಿಧಿಸುತ್ತದೆ. ಪರಿಷ್ಕೃತ ದರಗಳು ಹಗಲು-ಸೇವೆಯ ಹಂತದ ಕ್ಯಾರೇಜ್ ಬಸ್ಗಳಿಗೆ ಮಾತ್ರ ಅನ್ವಯಿಸುತ್ತವೆ ಮತ್ತು ರಾತ್ರಿ-ಸೇವೆಯ ಬಸ್ಗಳಿಗೆ ಅನ್ವಯಿಸುವುದಿಲ್ಲ. ಹೊಸ ದರ ರಚನೆಯ ಅಡಿಯಲ್ಲಿ ವಿದ್ಯಾರ್ಥಿಗಳ ರಿಯಾಯಿತಿಗಳು ಬದಲಾಗುವುದಿಲ್ಲ ಎಂದರು.
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…