Featured

ಉಡುಪಿ : ಜೂ. 1 ರಿಂದ ಜು. 31 ರವರೆಗೆ ಯಾಂತ್ರೀಕೃತ ಮೀನುಗಾರಿಕೆ ನಿಷೇಧ – vishwanews24

ಉಡುಪಿ : ಜೂ. 1 ರಿಂದ ಜು. 31 ರವರೆಗೆ ಯಾಂತ್ರೀಕೃತ ಮೀನುಗಾರಿಕೆ ನಿಷೇಧ

ಉಡುಪಿ: ಪ್ರಸಕ್ತ ಸಾಲಿನ ಮಳೆಗಾಲದ ಅವಧಿಯಲ್ಲಿ ಉಡುಪಿ ಜಿಲ್ಲೆಯೂ ಸೇರಿದಂತೆ ಕರ್ನಾಟಕ ಕರಾವಳಿಯಲ್ಲಿ ಯಾವುದೇ ಬಲೆಗಳನ್ನು / ಸಾಧನಗಳನ್ನು ಉಪಯೋಗಿಸಿ ಮೀನುಗಾರಿಕೆಗಾಗಿ ಯಾಂತ್ರೀಕೃತ ದೋಣಿಗಳ ಮತ್ತು 10 ಅಶ್ವಶಕ್ತಿ (ಹೆಚ್.ಪಿ) ಸಾಮರ್ಥ್ಯಕ್ಕಿಂತ ಮೇಲ್ಪಟ್ಟ ಇನ್‌ಬೋರ್ಡ್ ಅಥವಾ ಔಟ್‌ಬೋರ್ಡ್ ಯಂತ್ರಗಳನ್ನು ಅಳವಡಿಸಿರುವ ಸಾಂಪ್ರದಾಯಿಕ ದೋಣಿಗಳ ಮುಖಾಂತರ ಕೈಗೊಳ್ಳುವ ಮೀನುಗಾರಿಕೆ ಚಟುವಟಿಕೆಯನ್ನು ಜೂನ್ 1 ರಿಂದ ಜುಲೈ 31 ರವರೆಗೆ ಒಟ್ಟು 61 ದಿನಗಳ ನಿಷೇಧವನ್ನು ಹೇರಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ದೋಣಿಯನ್ನು ಸಾಗಿಸುವ ಉದ್ದೇಶಕ್ಕಾಗಿ 10 ಅಶ್ವಶಕ್ತಿಯ ವರೆಗಿನ ಸಾಮರ್ಥ್ಯದ ಮೋಟರೀಕೃತ ದೋಣಿ ಹಾಗೂ ಸಾಂಪ್ರದಾಯಕ/ ನಾಡದೋಣಿಗಳು ಕರಾವಳಿ ಮೀನುಗಾರಿಕೆಯನ್ನು ಕೈಗೊಳ್ಳಲು ಅನುಮತಿ ನೀಡಲಾಗಿದೆ.

ಮೀನುಗಾರಿಕೆ ನಿಷೇಧಿಸಿದ ಸರಕಾರಿ ಆದೇಶವನ್ನು ಉಲ್ಲಂಘಿಸುವ ಮೀನುಗಾರಿಕಾ ದೋಣಿಗಳು ಮತ್ತು ಮೀನುಗಾರರು ಕರ್ನಾಟಕ ಕಡಲ ಮೀನುಗಾರಿಕೆ ಕಾಯ್ದೆ 1986 ರಲ್ಲಿ ವಿಧಿಸಲಾಗಿರುವ ದಂಡನೆಗಳಿಗೆ ಹೊಣೆಯಾಗುವುದಲ್ಲದೇ, ಒಂದು ವರ್ಷದ ಅವಧಿಗೆ ಡೆಲಿವರಿ ಪಾಯಿಂಟ್‌ನಲ್ಲಿ ರಾಜ್ಯ ಮಾರಾಟಕರ ರಹಿತ ಡೀಸಿಲ್ ಪಡೆಯಲು ಅನರ್ಹರಾಗುತ್ತಾರೆ. ಈ ಆದೇಶವನ್ನು ಕರಾವಳಿ ಪ್ರದೇಶದ ಎಲ್ಲಾ ಮೀನುಗಾರರು ಪಾಲಿಸಿ, ಸರಕಾರದೊಂದಿಗೆ ಸಹಕರಿಸುವಂತೆ ಮೀನುಗಾರಿಕಾ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

4 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

5 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

5 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

5 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

5 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

5 days ago