ಉಡುಪಿ: ಪ್ರಸಕ್ತ ಸಾಲಿನ ಮಳೆಗಾಲದ ಅವಧಿಯಲ್ಲಿ ಉಡುಪಿ ಜಿಲ್ಲೆಯೂ ಸೇರಿದಂತೆ ಕರ್ನಾಟಕ ಕರಾವಳಿಯಲ್ಲಿ ಯಾವುದೇ ಬಲೆಗಳನ್ನು / ಸಾಧನಗಳನ್ನು ಉಪಯೋಗಿಸಿ ಮೀನುಗಾರಿಕೆಗಾಗಿ ಯಾಂತ್ರೀಕೃತ ದೋಣಿಗಳ ಮತ್ತು 10 ಅಶ್ವಶಕ್ತಿ (ಹೆಚ್.ಪಿ) ಸಾಮರ್ಥ್ಯಕ್ಕಿಂತ ಮೇಲ್ಪಟ್ಟ ಇನ್ಬೋರ್ಡ್ ಅಥವಾ ಔಟ್ಬೋರ್ಡ್ ಯಂತ್ರಗಳನ್ನು ಅಳವಡಿಸಿರುವ ಸಾಂಪ್ರದಾಯಿಕ ದೋಣಿಗಳ ಮುಖಾಂತರ ಕೈಗೊಳ್ಳುವ ಮೀನುಗಾರಿಕೆ ಚಟುವಟಿಕೆಯನ್ನು ಜೂನ್ 1 ರಿಂದ ಜುಲೈ 31 ರವರೆಗೆ ಒಟ್ಟು 61 ದಿನಗಳ ನಿಷೇಧವನ್ನು ಹೇರಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ದೋಣಿಯನ್ನು ಸಾಗಿಸುವ ಉದ್ದೇಶಕ್ಕಾಗಿ 10 ಅಶ್ವಶಕ್ತಿಯ ವರೆಗಿನ ಸಾಮರ್ಥ್ಯದ ಮೋಟರೀಕೃತ ದೋಣಿ ಹಾಗೂ ಸಾಂಪ್ರದಾಯಕ/ ನಾಡದೋಣಿಗಳು ಕರಾವಳಿ ಮೀನುಗಾರಿಕೆಯನ್ನು ಕೈಗೊಳ್ಳಲು ಅನುಮತಿ ನೀಡಲಾಗಿದೆ.
ಮೀನುಗಾರಿಕೆ ನಿಷೇಧಿಸಿದ ಸರಕಾರಿ ಆದೇಶವನ್ನು ಉಲ್ಲಂಘಿಸುವ ಮೀನುಗಾರಿಕಾ ದೋಣಿಗಳು ಮತ್ತು ಮೀನುಗಾರರು ಕರ್ನಾಟಕ ಕಡಲ ಮೀನುಗಾರಿಕೆ ಕಾಯ್ದೆ 1986 ರಲ್ಲಿ ವಿಧಿಸಲಾಗಿರುವ ದಂಡನೆಗಳಿಗೆ ಹೊಣೆಯಾಗುವುದಲ್ಲದೇ, ಒಂದು ವರ್ಷದ ಅವಧಿಗೆ ಡೆಲಿವರಿ ಪಾಯಿಂಟ್ನಲ್ಲಿ ರಾಜ್ಯ ಮಾರಾಟಕರ ರಹಿತ ಡೀಸಿಲ್ ಪಡೆಯಲು ಅನರ್ಹರಾಗುತ್ತಾರೆ. ಈ ಆದೇಶವನ್ನು ಕರಾವಳಿ ಪ್ರದೇಶದ ಎಲ್ಲಾ ಮೀನುಗಾರರು ಪಾಲಿಸಿ, ಸರಕಾರದೊಂದಿಗೆ ಸಹಕರಿಸುವಂತೆ ಮೀನುಗಾರಿಕಾ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್ನಲ್ಲಿ ಅಗ್ನಿ ಅವಘಡ : ಶಾಕ್ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…