ಉಡುಪಿ: ಕೋವಿಡ್ ಪರಿಸ್ಥಿತಿ ಸುಧಾರಿಸುತ್ತಾ ಬಂದಿದ್ದು, ಮುಂದೆ ಸಂಪೂರ್ಣ ಲಾಕ್ ಡೌನ್ ಮಾಡುವುದು ಬೇಡ. ಕೆಲವು ನಿಬಂಧನೆಗಳೊಂದಿಗೆ ಜನಜೀವನ ಪ್ರಾರಂಭಿಸುವುದು ಒಳ್ಳೆಯದು ಎಂದು ಶಾಸಕ ರಘುಪತಿ ಭಟ್ ಹೇಳಿದ್ದಾರೆ.
ಉಡುಪಿಯಲ್ಲಿ ಮಾತನಾಡಿದ ಅವರು, ಧಾರ್ಮಿಕ ಮತ್ತು ಸಾಮಾಜಿಕ, ರಾಜಕೀಯ ಕಾರ್ಯಕ್ರಮಗಳು ಬೇಡ.
ಕನಿಷ್ಠ ಮೂರು ತಿಂಗಳು ಈ ಚಟುವಟಿಕೆ ಬಂದ್ ಮಾಡಬೇಕು. ಜನಜೀವನಕ್ಕೆ ಅನುಕೂಲ ಮಾಡಿಕೊಡಬೇಕು.
ಗೂಡಂಗಡಿ, ಹೋಟೆಲ್ ಸಣ್ಣಪುಟ್ಟ ವ್ಯಾಪಾರಸ್ಥರಿಗೆ ಅವಕಾಶ ಕೊಡಬೇಕು. ಜೂನ್ 14 ನಂತರ ಲಾಕ್ ಡೌನ್ ಮುಂದುವರೆದರೆ ಆರ್ಥಿಕ ಸಂಕಷ್ಟವಾಗುತ್ತದೆ.
ಆರ್ಥಿಕ ಪ್ಯಾಕೇಜು ಕೊಟ್ಟು ಪೂರೈಸುವುದಿಲ್ಲ. ಜೂ.14ರ ನಂತರ ಲಾಕ್ ಡೌನ್ ವಾಪಸ್ ಪಡೆಯಲು ಸಿಎಂಗೆ ಮನವಿ ಮಾಡಿದ್ದೇನೆ. ಪಾಸಿಟಿವಿಟಿ ರೇಟ್ ಶೇ. 10 -15 ಕಡಿಮೆಯಾದ ಜಿಲ್ಲೆ ಗೆ ಲಾಕ್ ಡೌನ್ ಬೇಡ ಎಂದಿದ್ದಾರೆ.
ರಾಜ್ಯದಲ್ಲಿ ಪಾಸಿಟಿವ್ ಕೇಸ್ 50 ಸಾವಿರದಿಂದ 12 ಸಾವಿರಕ್ಕೆ ಇಳಿದಿದೆ ಎಂದ ಅವರು, ಅನ್ ಲಾಕ್ ಮಾಡದಿದ್ದರೆ ಕೋವಿಡ್ ಗಿಂತ ಗಂಭೀರ ಪರಿಸ್ಥಿತಿ ಉಂಟಾಗುತ್ತದೆ ಎಂದರು.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…