ಉಡುಪಿ: ಕೋವಿಡ್ ಪರಿಸ್ಥಿತಿ ಸುಧಾರಿಸುತ್ತಾ ಬಂದಿದ್ದು, ಮುಂದೆ ಸಂಪೂರ್ಣ ಲಾಕ್ ಡೌನ್ ಮಾಡುವುದು ಬೇಡ. ಕೆಲವು ನಿಬಂಧನೆಗಳೊಂದಿಗೆ ಜನಜೀವನ ಪ್ರಾರಂಭಿಸುವುದು ಒಳ್ಳೆಯದು ಎಂದು ಶಾಸಕ ರಘುಪತಿ ಭಟ್ ಹೇಳಿದ್ದಾರೆ.
ಉಡುಪಿಯಲ್ಲಿ ಮಾತನಾಡಿದ ಅವರು, ಧಾರ್ಮಿಕ ಮತ್ತು ಸಾಮಾಜಿಕ, ರಾಜಕೀಯ ಕಾರ್ಯಕ್ರಮಗಳು ಬೇಡ.
ಕನಿಷ್ಠ ಮೂರು ತಿಂಗಳು ಈ ಚಟುವಟಿಕೆ ಬಂದ್ ಮಾಡಬೇಕು. ಜನಜೀವನಕ್ಕೆ ಅನುಕೂಲ ಮಾಡಿಕೊಡಬೇಕು.
ಗೂಡಂಗಡಿ, ಹೋಟೆಲ್ ಸಣ್ಣಪುಟ್ಟ ವ್ಯಾಪಾರಸ್ಥರಿಗೆ ಅವಕಾಶ ಕೊಡಬೇಕು. ಜೂನ್ 14 ನಂತರ ಲಾಕ್ ಡೌನ್ ಮುಂದುವರೆದರೆ ಆರ್ಥಿಕ ಸಂಕಷ್ಟವಾಗುತ್ತದೆ.
ಆರ್ಥಿಕ ಪ್ಯಾಕೇಜು ಕೊಟ್ಟು ಪೂರೈಸುವುದಿಲ್ಲ. ಜೂ.14ರ ನಂತರ ಲಾಕ್ ಡೌನ್ ವಾಪಸ್ ಪಡೆಯಲು ಸಿಎಂಗೆ ಮನವಿ ಮಾಡಿದ್ದೇನೆ. ಪಾಸಿಟಿವಿಟಿ ರೇಟ್ ಶೇ. 10 -15 ಕಡಿಮೆಯಾದ ಜಿಲ್ಲೆ ಗೆ ಲಾಕ್ ಡೌನ್ ಬೇಡ ಎಂದಿದ್ದಾರೆ.
ರಾಜ್ಯದಲ್ಲಿ ಪಾಸಿಟಿವ್ ಕೇಸ್ 50 ಸಾವಿರದಿಂದ 12 ಸಾವಿರಕ್ಕೆ ಇಳಿದಿದೆ ಎಂದ ಅವರು, ಅನ್ ಲಾಕ್ ಮಾಡದಿದ್ದರೆ ಕೋವಿಡ್ ಗಿಂತ ಗಂಭೀರ ಪರಿಸ್ಥಿತಿ ಉಂಟಾಗುತ್ತದೆ ಎಂದರು.
ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…
ರಾಜ್ಯ ಸರ್ಕಾರದಿಂದ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …
ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್ಟೇಬಲ್…