ಉಡುಪಿ: ಜೂ.15ರೊಳಗೆ ಬಸ್‌ಗಳಲ್ಲಿನ ಕರ್ಕಶ ಹಾರ್ನ್ ಕಡ್ಡಾಯವಾಗಿ ತೆರವುಗೊಳಿಸಲು ಸೂಚನೆ – vishwanews24

Featured, ಉಡುಪಿ

ಉಡುಪಿ: ಜೂ.15ರೊಳಗೆ ಬಸ್‌ಗಳಲ್ಲಿನ ಕರ್ಕಶ ಹಾರ್ನ್ ಕಡ್ಡಾಯವಾಗಿ ತೆರವುಗೊಳಿಸಲು ಸೂಚನೆ

ಉಡುಪಿ: ಉಡುಪಿಯ ಸಿಟಿ ಹಾಗೂ ಸರ್ವಿಸ್ ಬಸ್‌ಗಳಲ್ಲಿ ಅಳವಡಿಸಲಾದ ಕರ್ಕಶ ಹಾರ್ನ್‌ಗಳನ್ನು ಜೂ.15ರೊಳಗೆ ಕಡ್ಡಾಯವಾಗಿ ತೆರವುಗೊಳಿಸುವಂತೆ ಜೂ.3ರಂದು ಉಡುಪಿ ಸಂಚಾರ ಪೊಲೀಸ್ ಠಾಣೆಯಲ್ಲಿ ನಡೆದ ಉಡುಪಿ ಸಿಟಿ ಬಸ್ ಮಾಲಕರು ಮತ್ತು ಸರ್ವಿಸ್ ಬಸ್ ಮಾಲಕರ ಸಭೆಯಲ್ಲಿ ಸೂಚನೆ ನೀಡಲಾಯಿತು.

ಬಸ್ಸಿನ ಒಳಗಿನ ಅಳವಡಿಸಲಾದ ಟೆಪ್ ರೆಕಾರ್ಡ್ ಹಾಗೂ ಸ್ಪೀಕರ್‌ಗಳನ್ನು ಕಡ್ಡಾಯವಾಗಿ ತೆಗೆದು ಹಾಕಬೇಕು. ಬಸ್ಸಿನ ಒಳಗಡೆ ಕಡ್ಡಾಯವಾಗಿ ಸಿ.ಸಿ ಕ್ಯಾಮೆರಾ ಅಳವಡಿಸಬೇಕು. ಬಸ್ಸಿನ ನಿಗದಿತ ವೇಳಾಪಟ್ಟಿಯಂತೆ ಸಮಯಕ್ಕೆ ಸರಿಯಾಗಿ ಬಸ್ಸುಗಳನ್ನು ಚಲಾಯಿಸಬೇಕು ಎಂದು ಮಾಲಕರಿಗೆ ಪೊಲೀಸ್ ಅಧಿಕಾರಿಗಳು ನಿದೇರ್ಶನ ನೀಡಿದರು.

ಉಳ್ಳಾಲ : ಬಿಜೆಪಿ ಗೆಲುವಿಗೆ ಪಟಾಕಿ ಸಿಡಿಸಿದ್ದಕ್ಕೆ ಬಜರಂಗದಳದ ಕಾರ್ಯಕರ್ತನ ಮೇಲೆ ಹಲ್ಲೆ – vishwanews24

ಕರಾವಳಿ ಜಂಕ್ಷನ್‌ನಲ್ಲಿ ಬಸ್ ನಿಲ್ದಾಣಕ್ಕೆ ಹೋಗದೇ ದಾರಿಯಲ್ಲಿ ಪಿಕ್ ಆಪ್ ಮಾಡುವುದರಿಂದ ಸಾರ್ವಜನಿಕರಿಗೆ ಮತ್ತು ಇತರ ವಾಹನಗಳ ಸುಗಮ ಸಂಚಾರಕ್ಕೆ ಅಡ್ಡಿಯಾಗುವುದರಿಂದ ಚಾಲಕರು ಬಸ್ಸು ನಿಲ್ದಾಣಕ್ಕೆ ಹೋಗಿ ಪಿಕ್ ಆಪ್ ಮಾಡ ಬೇಕು. ಚಾಲಕರು ಮತ್ತು ನಿರ್ವಾಹಕರು ಕರ್ತವ್ಯದ ಸಮಯ ಕಡ್ಡಾಯವಾಗಿ ಸಮವಸ್ತ್ರ ಧರಿಸಬೇಕು.

ವಿಪರೀತ ವೇಗವಾಗಿ ಬಸ್ಸುಗಳನ್ನು ಚಲಾಯಿಸದಂತೆ ಚಾಲಕರಿಗೆ ಸೂಚನೆ ನೀಡುವಂತೆ ತಿಳಿಸಲಾಯಿತು. ಬಸ್ ಚಾಲಕರು ಮೊಬೈಲ್ ಪೋನ್ ಉಪಯೋಗಿಸುತ್ತಾ ಬಸ್ಸು ಚಾಲನೆ ಮಾಡದಂತೆ ನಿರ್ದೇಶನ ನೀಡಬೇಕು. ಬಸ್ಸು ಚಾಲ ಕರು ಮದ್ಯಪಾನ ಮಾಡಿ ವಾಹನ ಚಲಾಯಿಸದಂತೆ ಕ್ರಮ ತೆಗೆದುಕೊಳ್ಳ ಬೇಕು ಎಂದು ಮಾಲಕರಿಗೆ ಪೊಲೀಸರು ಕಟ್ಟುನಿಟ್ಟಿನ ಸೂಚನೆ ನೀಡಿದರು.

ಈ ಎಲ್ಲಾ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ತಪ್ಪಿದ್ದಲ್ಲಿ ಮುಂದೆ ಸೂಕ್ತ ಕಾನೂನು ಕ್ರಮ ಜರಗಿಸಲಾಗುವುದು ಎಂದು ಸಭೆಯಲ್ಲಿ ಸಂಚಾರ ಪೊಲೀಸ್ ಅಧಿಕಾರಿಗಳು ಎಚ್ಚರಿಕೆ ನೀಡಿದರು.

ನನ್ನ ತಂದೆ ಕರುಣಾನಿಧಿಯಾಗಿದ್ದರೆ ನಾನು ಸುಲಭದಲ್ಲಿ ಗೆಲ್ಲುತ್ತಿದ್ದೆ : ಅಣ್ಣಾಮಲೈ ತಿರುಗೇಟು – vishwanews24

Leave a Reply