Featured

ಉಡುಪಿ: ಜೂ.15ರೊಳಗೆ ಬಸ್‌ಗಳಲ್ಲಿನ ಕರ್ಕಶ ಹಾರ್ನ್ ಕಡ್ಡಾಯವಾಗಿ ತೆರವುಗೊಳಿಸಲು ಸೂಚನೆ – vishwanews24

ಉಡುಪಿ: ಜೂ.15ರೊಳಗೆ ಬಸ್‌ಗಳಲ್ಲಿನ ಕರ್ಕಶ ಹಾರ್ನ್ ಕಡ್ಡಾಯವಾಗಿ ತೆರವುಗೊಳಿಸಲು ಸೂಚನೆ

ಉಡುಪಿ: ಉಡುಪಿಯ ಸಿಟಿ ಹಾಗೂ ಸರ್ವಿಸ್ ಬಸ್‌ಗಳಲ್ಲಿ ಅಳವಡಿಸಲಾದ ಕರ್ಕಶ ಹಾರ್ನ್‌ಗಳನ್ನು ಜೂ.15ರೊಳಗೆ ಕಡ್ಡಾಯವಾಗಿ ತೆರವುಗೊಳಿಸುವಂತೆ ಜೂ.3ರಂದು ಉಡುಪಿ ಸಂಚಾರ ಪೊಲೀಸ್ ಠಾಣೆಯಲ್ಲಿ ನಡೆದ ಉಡುಪಿ ಸಿಟಿ ಬಸ್ ಮಾಲಕರು ಮತ್ತು ಸರ್ವಿಸ್ ಬಸ್ ಮಾಲಕರ ಸಭೆಯಲ್ಲಿ ಸೂಚನೆ ನೀಡಲಾಯಿತು.

ಬಸ್ಸಿನ ಒಳಗಿನ ಅಳವಡಿಸಲಾದ ಟೆಪ್ ರೆಕಾರ್ಡ್ ಹಾಗೂ ಸ್ಪೀಕರ್‌ಗಳನ್ನು ಕಡ್ಡಾಯವಾಗಿ ತೆಗೆದು ಹಾಕಬೇಕು. ಬಸ್ಸಿನ ಒಳಗಡೆ ಕಡ್ಡಾಯವಾಗಿ ಸಿ.ಸಿ ಕ್ಯಾಮೆರಾ ಅಳವಡಿಸಬೇಕು. ಬಸ್ಸಿನ ನಿಗದಿತ ವೇಳಾಪಟ್ಟಿಯಂತೆ ಸಮಯಕ್ಕೆ ಸರಿಯಾಗಿ ಬಸ್ಸುಗಳನ್ನು ಚಲಾಯಿಸಬೇಕು ಎಂದು ಮಾಲಕರಿಗೆ ಪೊಲೀಸ್ ಅಧಿಕಾರಿಗಳು ನಿದೇರ್ಶನ ನೀಡಿದರು.

ಕರಾವಳಿ ಜಂಕ್ಷನ್‌ನಲ್ಲಿ ಬಸ್ ನಿಲ್ದಾಣಕ್ಕೆ ಹೋಗದೇ ದಾರಿಯಲ್ಲಿ ಪಿಕ್ ಆಪ್ ಮಾಡುವುದರಿಂದ ಸಾರ್ವಜನಿಕರಿಗೆ ಮತ್ತು ಇತರ ವಾಹನಗಳ ಸುಗಮ ಸಂಚಾರಕ್ಕೆ ಅಡ್ಡಿಯಾಗುವುದರಿಂದ ಚಾಲಕರು ಬಸ್ಸು ನಿಲ್ದಾಣಕ್ಕೆ ಹೋಗಿ ಪಿಕ್ ಆಪ್ ಮಾಡ ಬೇಕು. ಚಾಲಕರು ಮತ್ತು ನಿರ್ವಾಹಕರು ಕರ್ತವ್ಯದ ಸಮಯ ಕಡ್ಡಾಯವಾಗಿ ಸಮವಸ್ತ್ರ ಧರಿಸಬೇಕು.

ವಿಪರೀತ ವೇಗವಾಗಿ ಬಸ್ಸುಗಳನ್ನು ಚಲಾಯಿಸದಂತೆ ಚಾಲಕರಿಗೆ ಸೂಚನೆ ನೀಡುವಂತೆ ತಿಳಿಸಲಾಯಿತು. ಬಸ್ ಚಾಲಕರು ಮೊಬೈಲ್ ಪೋನ್ ಉಪಯೋಗಿಸುತ್ತಾ ಬಸ್ಸು ಚಾಲನೆ ಮಾಡದಂತೆ ನಿರ್ದೇಶನ ನೀಡಬೇಕು. ಬಸ್ಸು ಚಾಲ ಕರು ಮದ್ಯಪಾನ ಮಾಡಿ ವಾಹನ ಚಲಾಯಿಸದಂತೆ ಕ್ರಮ ತೆಗೆದುಕೊಳ್ಳ ಬೇಕು ಎಂದು ಮಾಲಕರಿಗೆ ಪೊಲೀಸರು ಕಟ್ಟುನಿಟ್ಟಿನ ಸೂಚನೆ ನೀಡಿದರು.

ಈ ಎಲ್ಲಾ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ತಪ್ಪಿದ್ದಲ್ಲಿ ಮುಂದೆ ಸೂಕ್ತ ಕಾನೂನು ಕ್ರಮ ಜರಗಿಸಲಾಗುವುದು ಎಂದು ಸಭೆಯಲ್ಲಿ ಸಂಚಾರ ಪೊಲೀಸ್ ಅಧಿಕಾರಿಗಳು ಎಚ್ಚರಿಕೆ ನೀಡಿದರು.

Vishwa News 24

Recent Posts

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು – vishwanews24

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…

3 days ago

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ – vishwanews24

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…

3 days ago

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ – vishwanews24

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ ಕಾರವಾರ: ಉತ್ತರ ಕನ್ನಡ  ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…

3 days ago

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ – vishwanews24

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ ಬೆಂಗಳೂರು: ವಿಧಾನ ಪರಿಷತ್‌ ಚುನಾವಣೆಯಲ್ಲಿ ನಮ್ಮ…

3 days ago

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ – vishwanews24

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ  ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…

4 days ago

ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ – ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು – vishwanews24

ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…

4 days ago