Featured

ಉಡುಪಿ:  ಜೂ.28ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ – vishwanews24

ಉಡುಪಿ:  ಜೂ.28ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ

ಉಡುಪಿ: ರಾಜ್ಯದಲ್ಲಿ 0 ಇಂದ 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಕಡ್ಡಾಯವಾಗಿ ಪೋಲಿಯೋ ಲಸಿಕೆ ನೀಡುವ ಉದ್ದೇಶದಿಂದ ಜೂನ್ 28ರ ರವಿವಾರದಂದು ರಾಷ್ಟ್ರೀಯ ಲಸಿಕಾ ದಿನ (ಪಲ್ಸ್ ಪೋಲಿಯೋ) ಕಾರ್ಯ ಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಿತ್ವಿಕ್ ಪಾಂಡೆ ತಿಳಿಸಿದ್ದಾರೆ.

ಭಾರತವು ಕಳೆದ 14 ವರ್ಷಗಳಿಂದ ಪೋಲಿಯೊ ಮುಕ್ತ ರಾಷ್ಟ್ರವಾಗಿದ್ದರೂ, ಜಗತ್ತಿನ ಕೆಲವು ಭಾಗಗಳಲ್ಲಿ ಹಾಗೂ ಭಾರತದ ನೆರೆ ರಾಷ್ಟ್ರಗಳಲ್ಲಿ ವೈಲ್ಡ್ ಪೋಲಿಯೋ ವೈರಸ್ ಹರಡುವಿಕೆ ಇನ್ನೂ ಇರುವುದರಿಂದ ಈ ಮುನ್ನೆಚ್ಚರಿಕೆ ಕ್ರಮ ಅತ್ಯಗತ್ಯವಾಗಿದೆ. ಭಾರತ ತಜ್ಞರ ಸಲಹಾ ಗುಂಪಿನ ಶಿಫಾರಸ್ಸಿನಂತೆ ಈ ಅಭಿಯಾನವನ್ನು ನಡೆಸಲಾ ಗುತ್ತಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ :

ಜೂ.28ರಂದು ಮೊದಲನೇ ದಿನ ಪೋಲಿಯೋ ಬೂತ್‌ಗಳಲ್ಲಿ ಲಸಿಕೆ ನೀಡಲಾಗುತ್ತದೆ. ನಂತರದ 2ರಿಂದ 3 ದಿನಗಳಲ್ಲಿ ಆರೋಗ್ಯ ಕಾರ್ಯಕರ್ತರು ಮನೆ ಮನೆಗೆ ಭೇಟಿ ನೀಡಿ ಲಸಿಕೆ ವಂಚಿತ ಮಕ್ಕಳಿಗೆ ಲಸಿಕೆ ಹಾಕಲಿದ್ದಾರೆ. ವಲಸಿಗ ಸಮುದಾಯದ ಮಕ್ಕಳು, ಹೆಚ್ಚು ಅಪಾಯದಂಚಿನಲ್ಲಿರುವ ಪ್ರದೇಶಗಳು ಹಾಗೂ ನಗರ ಪ್ರದೇಶದ ಕೊಳ ಗೇರಿ ಪ್ರದೇಶಗಳಲ್ಲಿ ವಾಸಿಸುವ ಮಕ್ಕಳಿಗೆ ವಿಶೇಷ ಆದ್ಯತೆ ನೀಡಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

ಈ ಬೃಹತ್ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಎಲ್ಲಾ ಇಲಾಖೆಗಳ ಸಹಕಾರವನ್ನು ಬಯಸಿರುವ ಆರೋಗ್ಯ ಇಲಾಖೆ, ಹೆಚ್ಚಿನ ಪ್ರಚಾರ ನೀಡಲು ಮಾಹಿತಿ, ಶಿಕ್ಷಣ ಮತ್ತು ಸಂವಹನ ಚಟುವಟಿಕೆಗಳ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಸಂಬಂಧಪಟ್ಟವರಲ್ಲಿ ಮನವಿ ಮಾಡಿದ್ದಾರೆ.

ಸಾರ್ವಜನಿಕರು ಹಾಗೂ ಪೋಷಕರು ತಮ್ಮ 5 ವರ್ಷದೊಳಗಿನ ಮಕ್ಕಳಿಗೆ ತಪ್ಪದೇ ಪೋಲಿಯೋ ಹನಿಗಳನ್ನು ಹಾಕಿಸಿ ಸಹಕರಿಸುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಪ್ರಕಟಣೆಯಲ್ಲಿ ತಿಳಿಸಿದೆ.

ಇದನ್ನೂ ಓದಿ :

Vishwa News 24

Recent Posts

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ – vishwanews24

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…

1 day ago

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ; ಆರೋಪಿಗಾಗಿ ಶೋಧ- vishwanews24

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…

1 day ago

ಆರು ದಿನಗಳ ನಂತರ ಅಮರನಾಥ ಯಾತ್ರೆ ಪುನರಾರಂಭ -vishwanews24

ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…

1 day ago

BREAKING NEWS : ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ – vishwanews24

 ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…

1 day ago

ಕಾಮನ್‌ವೆಲ್ತ್ ಗೇಮ್ಸ್ 2026 : ಪ್ಯಾರಾ ಪವರ್‌ ಲಿಫ್ಟಿಂಗ್‌ನಲ್ಲಿ ಕಂಚು ಗೆದ್ದ ಝಂದು ಕುಮಾರ್ – vishwanews24

ಕಾಮನ್‌ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್‌: ಪ್ಯಾರಾ ಪವರ್‌ಲಿಫ್ಟಿಂಗ್‌ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…

1 day ago

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ – vishwanews24

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…

1 day ago