Featured

ಜ.11ರಂದು ಸಂವಿಧಾನ ಸಮ್ಮಾನ ಕಾರ್ಯಕ್ರಮ: ಮುಖ್ಯ ಅತಿಥಿಯಾಗಿ ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಉಡುಪಿಗೆ – vishwanews24

ಜ.11ರಂದು ಸಂವಿಧಾನ ಸಮ್ಮಾನ ಕಾರ್ಯಕ್ರಮ: ಮುಖ್ಯ ಅತಿಥಿಯಾಗಿ ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಉಡುಪಿಗೆ

ಉಡುಪಿ: ಸಂವಿಧಾನ ತಿದ್ದುಪಡಿ ಮಾಡಲು ಕಾಂಗ್ರೆಸ್ ಸರಕಾರಕ್ಕಿದ್ದ ದುರುದ್ದೇಶ ಹಾಗು ಸಾರ್ವಜನಿಕರ ಹಿತಾಸಕ್ತಿಗಾಗಿ ಬಿಜೆಪಿ ಸರಕಾರ ಮಾಡಿರುವ ತಿದ್ದುಪಡಿಗಳ ಕುರಿತು ಬೆಳಕು ಚೆಲ್ಲುವ ಸಲುವಾಗಿ ಸಿಟಿಜನ್ ಫಾರ್ ಸೋಶಿಯಲ್ ಜಸ್ಟಿಸ್ ಮತ್ತು ದಲಿತ ಹಿಂದುಳಿದ ವರ್ಗಗಳ ಸಂಘಟನೆಗಳ ಸಹಯೋಗದಲ್ಲಿ ಜ.11ರಂದು ಬೆಳಿಗ್ಗೆ 11 ಗಂಟೆಗೆ ಉಡುಪಿಯ ಪುರಭವನದಲ್ಲಿ ಸಂವಿಧಾನ ಸಮ್ಮಾನ್ ಕಾರ್ಯಕ್ರಮ ಆಯೋಜಿಸಲಾಗಿದೆ.

ತಮಿಳುನಾಡು ಬಿಜೆಪಿ ಅಧ್ಯಕ್ಷರಾದ ಅಣ್ಣಾಮಲೈ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ ಎಂದು ಸಂವಿಧಾನ ಸಮ್ಮಾನ ಸಮಿತಿಯ ವಿಭಾಗ ಸಂಚಾಲಕರಾದ ಕೆ. ಉದಯ ಕುಮಾರ್ ಶೆಟ್ಟಿ ತಿಳಿಸಿದ್ದಾರೆ.ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, 1949 ನವೆಂಬರ್ 26ರಂದು ಬಾಬಾ ಸಾಹೇಬ್ ಡಾ. ಬಿ.ಆರ್. ಅಂಬೇಡ್ಕರ್ ನೇತೃತ್ವದಲ್ಲಿ ರಚನೆಯಾದ ಭಾರತದ ಸಂವಿಧಾನ ಸಂಸತ್ತಿನಲ್ಲಿ ಅಂಗೀಕಾರವಾದ ದಿನ.

2015ರಿಂದ ಆ ದಿನವನ್ನು ಸಂವಿಧಾನ ದಿನವೆಂದು ಪ್ರಧಾನಿ ಮೋದಿ ಘೋಷಣೆ ಮಾಡಿ ಆಚರಣೆಗೆ ತಂದರು. ಸಂವಿಧಾನ ರಕ್ಷಕರೆಂದು ಬೊಬ್ಬಿಡುವ ಕಾಂಗ್ರೆಸ್ ಪಕ್ಷ ಸಂವಿಧಾನ ವಿರೋಧಿಯಾಗಿ ಮತ್ತು ಪ್ರಜಾಪ್ರಭುತ್ವ ವಿರೋಧಿಯಾಗಿ ಕೆಲಸ ಮಾಡಿದೆ ಎಂಬ ಸತ್ಯ ಸಂಗತಿಯನ್ನು ಜನರ ಮುಂದಿಡುವ ಸಲುವಾಗಿ ನವೆಂಬರ್ 26 ರಿಂದ ಜನವರಿ 26 ರವರೆಗೆ 2 ತಿಂಗಳ ಕಾಲ ರಾಜ್ಯಾದ್ಯಂತ ಸಂವಿಧಾನ ಸಮ್ಮಾನ ಅಭಿಯಾನ ಹಮ್ಮಿಕೊಂಡಿದ್ದೇವೆ ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಸಮಿತಿಯ ಜಿಲ್ಲಾ ಸಂಚಾಲಕಿ ರೇಷ್ಮಾ ಉದಯ್ ಶೆಟ್ಟಿ, ಸದಸ್ಯರಾದ ಶ್ರೀಕಾಂತ್ ನಾಯಕ್, ರತ್ನಾಕರ್ ಇಂದ್ರಾಳಿ, ಚಂದ್ರ ಪಂಚವಟಿ ಉಪಸ್ಥಿತರಿದ್ದರು.

 

Vishwa News 24

Recent Posts

ಕಾರ್ಕಳ : ಯಕ್ಷರಂಗಾಯಣದ ಹೆಸರನ್ನು ಬದಲಾಯಿಸಿರುವುದು ಅತ್ಯಂತ ಬೇಜವಾಬ್ದಾರಿ ಹಾಗೂ ಏಕಪಕ್ಷೀಯ ನಿರ್ಧಾರ : ಸುನಿಲ್‌ ಕುಮಾರ್‌ ಆಕ್ರೋಶ -vishwanews24

ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್‌ ಕುಮಾರ್‌ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…

48 minutes ago

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ -vishwanews24

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…

1 hour ago

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ -vishwanews24

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…

2 hours ago

ಮೂಡುಬಿದಿರೆ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ;  ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು  -vishwanews24

ಮೂಡುಬಿದಿರೆ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ;  ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು  ಮೂಡುಬಿದಿರೆ : ಚಲಿಸುತ್ತಿದ್ದ ಕಾರಿನ ಫಾಗ್ ಲೈಟ್‌ನಿಂದ ಅಕಸ್ಮಾತ್ತಾಗಿ ಬೆಂಕಿ…

4 hours ago

ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ ಕೊಡುತ್ತಾರೆ, ಕೊಡದೆ ಎಲ್ಲಿ ಹೋಗುತ್ತಾರೆ : ಪ್ರಿಯಾಂಕ ಖರ್ಗೆ -vishwanews24

ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ ಕೊಡುತ್ತಾರೆ, ಕೊಡದೆ ಎಲ್ಲಿ ಹೋಗುತ್ತಾರೆ : ಪ್ರಿಯಾಂಕ ಖರ್ಗೆ ಬೆಂಗಳೂರು: ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ…

4 hours ago

ಉಡುಪಿ : ಬಾಲಕಿ ನಾಪತ್ತೆ -vishwanews24

ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…

18 hours ago