ಉಡುಪಿ: ಸಂವಿಧಾನ ತಿದ್ದುಪಡಿ ಮಾಡಲು ಕಾಂಗ್ರೆಸ್ ಸರಕಾರಕ್ಕಿದ್ದ ದುರುದ್ದೇಶ ಹಾಗು ಸಾರ್ವಜನಿಕರ ಹಿತಾಸಕ್ತಿಗಾಗಿ ಬಿಜೆಪಿ ಸರಕಾರ ಮಾಡಿರುವ ತಿದ್ದುಪಡಿಗಳ ಕುರಿತು ಬೆಳಕು ಚೆಲ್ಲುವ ಸಲುವಾಗಿ ಸಿಟಿಜನ್ ಫಾರ್ ಸೋಶಿಯಲ್ ಜಸ್ಟಿಸ್ ಮತ್ತು ದಲಿತ ಹಿಂದುಳಿದ ವರ್ಗಗಳ ಸಂಘಟನೆಗಳ ಸಹಯೋಗದಲ್ಲಿ ಜ.11ರಂದು ಬೆಳಿಗ್ಗೆ 11 ಗಂಟೆಗೆ ಉಡುಪಿಯ ಪುರಭವನದಲ್ಲಿ ಸಂವಿಧಾನ ಸಮ್ಮಾನ್ ಕಾರ್ಯಕ್ರಮ ಆಯೋಜಿಸಲಾಗಿದೆ.
ತಮಿಳುನಾಡು ಬಿಜೆಪಿ ಅಧ್ಯಕ್ಷರಾದ ಅಣ್ಣಾಮಲೈ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ ಎಂದು ಸಂವಿಧಾನ ಸಮ್ಮಾನ ಸಮಿತಿಯ ವಿಭಾಗ ಸಂಚಾಲಕರಾದ ಕೆ. ಉದಯ ಕುಮಾರ್ ಶೆಟ್ಟಿ ತಿಳಿಸಿದ್ದಾರೆ.ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, 1949 ನವೆಂಬರ್ 26ರಂದು ಬಾಬಾ ಸಾಹೇಬ್ ಡಾ. ಬಿ.ಆರ್. ಅಂಬೇಡ್ಕರ್ ನೇತೃತ್ವದಲ್ಲಿ ರಚನೆಯಾದ ಭಾರತದ ಸಂವಿಧಾನ ಸಂಸತ್ತಿನಲ್ಲಿ ಅಂಗೀಕಾರವಾದ ದಿನ.
2015ರಿಂದ ಆ ದಿನವನ್ನು ಸಂವಿಧಾನ ದಿನವೆಂದು ಪ್ರಧಾನಿ ಮೋದಿ ಘೋಷಣೆ ಮಾಡಿ ಆಚರಣೆಗೆ ತಂದರು. ಸಂವಿಧಾನ ರಕ್ಷಕರೆಂದು ಬೊಬ್ಬಿಡುವ ಕಾಂಗ್ರೆಸ್ ಪಕ್ಷ ಸಂವಿಧಾನ ವಿರೋಧಿಯಾಗಿ ಮತ್ತು ಪ್ರಜಾಪ್ರಭುತ್ವ ವಿರೋಧಿಯಾಗಿ ಕೆಲಸ ಮಾಡಿದೆ ಎಂಬ ಸತ್ಯ ಸಂಗತಿಯನ್ನು ಜನರ ಮುಂದಿಡುವ ಸಲುವಾಗಿ ನವೆಂಬರ್ 26 ರಿಂದ ಜನವರಿ 26 ರವರೆಗೆ 2 ತಿಂಗಳ ಕಾಲ ರಾಜ್ಯಾದ್ಯಂತ ಸಂವಿಧಾನ ಸಮ್ಮಾನ ಅಭಿಯಾನ ಹಮ್ಮಿಕೊಂಡಿದ್ದೇವೆ ಎಂದು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಸಮಿತಿಯ ಜಿಲ್ಲಾ ಸಂಚಾಲಕಿ ರೇಷ್ಮಾ ಉದಯ್ ಶೆಟ್ಟಿ, ಸದಸ್ಯರಾದ ಶ್ರೀಕಾಂತ್ ನಾಯಕ್, ರತ್ನಾಕರ್ ಇಂದ್ರಾಳಿ, ಚಂದ್ರ ಪಂಚವಟಿ ಉಪಸ್ಥಿತರಿದ್ದರು.
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…
ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…