Featured

ಉಡುಪಿ : ಜ.20 ರಂದು ಕಡಿಯಾಳಿ ಶ್ರೀ ಮಹಿಷಮರ್ದಿನಿ ದೇಗುಲದ ನೂತನ ಧ್ವಜ ಸ್ತಂಭದ ಪಾದುಕೆ ಶಿಲಾನ್ಯಾಸ – Vishwanews24

ಉಡುಪಿ : ಜ.20 ರಂದು ಕಡಿಯಾಳಿ ಶ್ರೀ ಮಹಿಷಮರ್ದಿನಿ ದೇಗುಲದ ನೂತನ ಧ್ವಜ ಸ್ತಂಭದ ಪಾದುಕೆ ಶಿಲಾನ್ಯಾಸ

ಉಡುಪಿ : ಕಡಿಯಾಳಿ ಶ್ರೀ ಮಹಿಷಮರ್ದಿನಿ ದೇಗುಲದ ನೂತನ ಧ್ವಜ ಸ್ತಂಭದ ಪಾದುಕೆ ಶಿಲಾನ್ಯಾಸ ಹಾಗೂ ದೇಗುಲದ ಧಾರ್ಮಿಕ ಕಾರ್ಯಗಳಿಗೆಂದು ನಿರ್ಮಿಸಲಾದ ವೇದವ್ಯಾಸ ಯಾಗ ಶಾಲೆಯ ಉದ್ಘಾಟನಾ ಸಮಾರಂಭ ಜ.20 ರಂದು ಬೆಳಿಗ್ಗೆ 9 ಗಂಟೆಗೆ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಈ ಬಗ್ಗೆ ಪ್ರಕಟಣೆ ಮೂಲಕ ಮಾಹಿತಿ ನೀಡಿರುವ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರು ಡಾ.ರವಿರಾಜ್ ವಿ ಆಚಾರ್ಯ ಮತ್ತು ಜೀರ್ಣೋದ್ಧಾರ ಸಮಿತಿ ಪ್ರಧಾನ ಕಾರ್ಯದರ್ಶಿ ಕೆ ರಾಘವೇಂದ್ರ ಕಿಣಿ ಅವರು, ಕಡಿಯಾಳಿ ಶ್ರೀ ಮಹಿಷಮರ್ದಿನಿ ದೇಗುಲದ ಬ್ರಹ್ಮಕಲಶೋತ್ಸವವು ವಿಜೃಂಭಣೆಯಿಂದ ನಡೆಯಿತು. ಧ್ವಜಸ್ತಂಭಕ್ಕೆ ಸಂಪೂರ್ಣ ಸಾವಯವ ಎಳ್ಳೆಣ್ಣೆ ಹಾಕುವ ಮೂಲಕ ಧ್ವಜಸ್ತಂಬಕ್ಕೆ ಚಾಲನೆ ನೀಡಿ, ಇದೀಗ ದೇಗುಲದ ಧ್ವಜಸ್ತಂಭದ (ಕೊಡಿ ಮರದ) ಪಾದುಕೆ ಶಿಲನ್ಯಾಸ ಮತ್ತು ಯಾಗ ಶಾಲೆಯನ್ನು ಜ.20 ರಂದು ಬೆಳಿಗ್ಗೆ 9 ಗಂಟೆಗೆ ಕಾಣಿಯೂರು ಮಠದ ಶ್ರೀ ವಿದ್ಯಾವಲ್ಲಭ ತೀರ್ಥ ಶ್ರೀಪಾದರು ಲೋಕಾರ್ಪಣೆ ಗೊಳಿಸಲಿದ್ದಾರೆ. ಹಾಗೂ ಧ್ವಜಸ್ತಂಭಕ್ಕೆ ಸಂಪೂರ್ಣ ತಾಮ್ರ ಮತ್ತು ಹಿತ್ತಾಳೆಯನ್ನು ಹೊದಿಸಿ ವಿಜೃಂಭಣೆಯಿಂದ ಧ್ವಜ ಪ್ರತಿಷ್ಠೆ ನಡೆಸಲಾಗುವುದೆಂದು ನಿಶ್ಚಯಿಸಲಾಗಿದ್ದು, ಮಾ.24ರಂದು ಬೆಳಿಗ್ಗೆ 7 ಗಂಟೆಗೆ ಧ್ವಜಸ್ತಂಭ ಪ್ರತಿಷ್ಠೆ ಕಲಶಾಭಿಷೇಕ, ಬೆಳಿಗ್ಗೆ 9:45 ಕ್ಕೆ ಒದಗುವ ವೃಷಭ ಲಗ್ನ ಸಮೂಹೂರ್ತದಲ್ಲಿ ಶ್ರೀ ದೇವಿಗೆ ಬ್ರಹ್ಮಕಲಶಾಭಿಷೇಕ, ಮಹಾ ಅನ್ನಸಂತರ್ಪಣೆ ನಡೆಯಲಿದೆ. ಸಂಜೆ 5 ಗಂಟೆಗೆ ಹಾಲಿಟ್ಟ ಸೇವೆ, ದೂಳಿಮಂಡಲ ಸೇವೆ, ಸಣ್ಣ ರಂಗಪೂಜೆ ನಡೆಯಲಿದೆ ಎಂದು ತಿಳಿಸಿದರು.

ಇನ್ನು ಮುಂದಿನ ದಿನಗಳಲ್ಲಿ ವ್ಯಾಘ್ರ ಪಿಲಿಚಾಮುಂಡಿ ಮತ್ತು ಇತರ ಪರಿವಾರ ದೈವಗಳ ಜೀರ್ಣೋದ್ಧಾರ ಕಾಮಗಾರಿ ಶೀಘ್ರದಲ್ಲೇ ನಡೆಸಲಾಗುವುದು ಎಂದು ಅವರು ಪ್ರಕಟಣೆ ಮೂಲಕ ಮಾಹಿತಿ ನೀಡಿದ್ದಾರೆ.

Join our Whatsapp group by clicking the below link 👇👇

https://chat.whatsapp.com/KfUmhXQKZb114i4QHNvqEK 

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

15 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

15 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago