Featured

ಉಡುಪಿ : ಜ.20 ರಂದು ಕಡಿಯಾಳಿ ಶ್ರೀ ಮಹಿಷಮರ್ದಿನಿ ದೇಗುಲದ ನೂತನ ಧ್ವಜ ಸ್ತಂಭದ ಪಾದುಕೆ ಶಿಲಾನ್ಯಾಸ – Vishwanews24

ಉಡುಪಿ : ಜ.20 ರಂದು ಕಡಿಯಾಳಿ ಶ್ರೀ ಮಹಿಷಮರ್ದಿನಿ ದೇಗುಲದ ನೂತನ ಧ್ವಜ ಸ್ತಂಭದ ಪಾದುಕೆ ಶಿಲಾನ್ಯಾಸ

ಉಡುಪಿ : ಕಡಿಯಾಳಿ ಶ್ರೀ ಮಹಿಷಮರ್ದಿನಿ ದೇಗುಲದ ನೂತನ ಧ್ವಜ ಸ್ತಂಭದ ಪಾದುಕೆ ಶಿಲಾನ್ಯಾಸ ಹಾಗೂ ದೇಗುಲದ ಧಾರ್ಮಿಕ ಕಾರ್ಯಗಳಿಗೆಂದು ನಿರ್ಮಿಸಲಾದ ವೇದವ್ಯಾಸ ಯಾಗ ಶಾಲೆಯ ಉದ್ಘಾಟನಾ ಸಮಾರಂಭ ಜ.20 ರಂದು ಬೆಳಿಗ್ಗೆ 9 ಗಂಟೆಗೆ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಈ ಬಗ್ಗೆ ಪ್ರಕಟಣೆ ಮೂಲಕ ಮಾಹಿತಿ ನೀಡಿರುವ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರು ಡಾ.ರವಿರಾಜ್ ವಿ ಆಚಾರ್ಯ ಮತ್ತು ಜೀರ್ಣೋದ್ಧಾರ ಸಮಿತಿ ಪ್ರಧಾನ ಕಾರ್ಯದರ್ಶಿ ಕೆ ರಾಘವೇಂದ್ರ ಕಿಣಿ ಅವರು, ಕಡಿಯಾಳಿ ಶ್ರೀ ಮಹಿಷಮರ್ದಿನಿ ದೇಗುಲದ ಬ್ರಹ್ಮಕಲಶೋತ್ಸವವು ವಿಜೃಂಭಣೆಯಿಂದ ನಡೆಯಿತು. ಧ್ವಜಸ್ತಂಭಕ್ಕೆ ಸಂಪೂರ್ಣ ಸಾವಯವ ಎಳ್ಳೆಣ್ಣೆ ಹಾಕುವ ಮೂಲಕ ಧ್ವಜಸ್ತಂಬಕ್ಕೆ ಚಾಲನೆ ನೀಡಿ, ಇದೀಗ ದೇಗುಲದ ಧ್ವಜಸ್ತಂಭದ (ಕೊಡಿ ಮರದ) ಪಾದುಕೆ ಶಿಲನ್ಯಾಸ ಮತ್ತು ಯಾಗ ಶಾಲೆಯನ್ನು ಜ.20 ರಂದು ಬೆಳಿಗ್ಗೆ 9 ಗಂಟೆಗೆ ಕಾಣಿಯೂರು ಮಠದ ಶ್ರೀ ವಿದ್ಯಾವಲ್ಲಭ ತೀರ್ಥ ಶ್ರೀಪಾದರು ಲೋಕಾರ್ಪಣೆ ಗೊಳಿಸಲಿದ್ದಾರೆ. ಹಾಗೂ ಧ್ವಜಸ್ತಂಭಕ್ಕೆ ಸಂಪೂರ್ಣ ತಾಮ್ರ ಮತ್ತು ಹಿತ್ತಾಳೆಯನ್ನು ಹೊದಿಸಿ ವಿಜೃಂಭಣೆಯಿಂದ ಧ್ವಜ ಪ್ರತಿಷ್ಠೆ ನಡೆಸಲಾಗುವುದೆಂದು ನಿಶ್ಚಯಿಸಲಾಗಿದ್ದು, ಮಾ.24ರಂದು ಬೆಳಿಗ್ಗೆ 7 ಗಂಟೆಗೆ ಧ್ವಜಸ್ತಂಭ ಪ್ರತಿಷ್ಠೆ ಕಲಶಾಭಿಷೇಕ, ಬೆಳಿಗ್ಗೆ 9:45 ಕ್ಕೆ ಒದಗುವ ವೃಷಭ ಲಗ್ನ ಸಮೂಹೂರ್ತದಲ್ಲಿ ಶ್ರೀ ದೇವಿಗೆ ಬ್ರಹ್ಮಕಲಶಾಭಿಷೇಕ, ಮಹಾ ಅನ್ನಸಂತರ್ಪಣೆ ನಡೆಯಲಿದೆ. ಸಂಜೆ 5 ಗಂಟೆಗೆ ಹಾಲಿಟ್ಟ ಸೇವೆ, ದೂಳಿಮಂಡಲ ಸೇವೆ, ಸಣ್ಣ ರಂಗಪೂಜೆ ನಡೆಯಲಿದೆ ಎಂದು ತಿಳಿಸಿದರು.

ಇನ್ನು ಮುಂದಿನ ದಿನಗಳಲ್ಲಿ ವ್ಯಾಘ್ರ ಪಿಲಿಚಾಮುಂಡಿ ಮತ್ತು ಇತರ ಪರಿವಾರ ದೈವಗಳ ಜೀರ್ಣೋದ್ಧಾರ ಕಾಮಗಾರಿ ಶೀಘ್ರದಲ್ಲೇ ನಡೆಸಲಾಗುವುದು ಎಂದು ಅವರು ಪ್ರಕಟಣೆ ಮೂಲಕ ಮಾಹಿತಿ ನೀಡಿದ್ದಾರೆ.

Join our Whatsapp group by clicking the below link 👇👇

https://chat.whatsapp.com/KfUmhXQKZb114i4QHNvqEK 

Vishwa News 24

Recent Posts

ಉಡುಪಿ : ಮೇ 5 ರಂದು ನೇರ ಸಂದರ್ಶನ -vishwanews24

ಉಡುಪಿ : ಮೇ 5 ರಂದು ನೇರ ಸಂದರ್ಶನ ಉಡುಪಿ : ಉದ್ಯೋಗ ಆಕಾಂಕ್ಷಿಗಳಿಗೆ ಮೇ 5 ರಂದು ಬೆಳಗ್ಗೆ…

2 days ago

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ – vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ ಉಡುಪಿ : ಮಾಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯ…

2 days ago

ಬಿಜೆಪಿ ಬಡ, ಮಧ್ಯಮ ವರ್ಗದವರ ಬದುಕನ್ನು ದುರ್ಬಲ ಮಾಡಲು ಹೊರಟಿದೆ : ಈಶ್ವರ್ ಖಂಡ್ರೆ – vishwanews24

ಮೋದಿ ದುರಾಡಳಿತದ ವಿರುದ್ಧ ಮಾತಾಡಲು ಬಿಜೆಪಿಗರಿಗೆ ಸವಾಲು.. ಬಿಜೆಪಿಯ ಬಡಜನ ವಿರೋಧಿ ಬಣ್ಣ ಮತ್ತೆ ಬಯಲು.. ವಾಣಿಜ್ಯ ಸಿಲಿಂಡರ್ ದರ…

2 days ago

ಪತ್ನಿಯ ಅಕ್ರಮ ಸಂಬಂಧ, ಕಿರುಕುಳಕ್ಕೆ ಬೇಸತ್ತು ಗಂಡ ನೇಣಿಗೆ ಶರಣು – vishwanews24

ಪತ್ನಿಯ ಅಕ್ರಮ ಸಂಬಂಧ, ಕಿರುಕುಳಕ್ಕೆ ಬೇಸತ್ತು ಗಂಡ ನೇಣಿಗೆ ಶರಣು ಕಾರವಾರ: ಪತ್ನಿಯ ಕಿರುಕುಳಕ್ಕೆ ಬೇಸತ್ತು ಪತಿ ಆತ್ಮಹತ್ಯೆ ಮಾಡಿಕೊಂಡ…

2 days ago

ಕೌಟುಂಬಿಕ ಕಲಹ : ಇಬ್ಬರು ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಶರಣಾದ ತಂದೆ  – vishwanews24

ಮನೆಯಲ್ಲಿದ್ದ ಚಿನ್ನಾಭರಣ ಸಮೇತ ಪತ್ನಿ ಪರಾರಿ: ಮಕ್ಕಳಿಬ್ಬರನ್ನು ಕೊಲೆಗೈದು ನೇಣಿಗೆ ಶರಣಾದ ಪತಿ ಕುಣಿಗಲ್ : ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ…

2 days ago

ನಿಮ್ಮ ಮೊಬೈಲ್‌ನಲ್ಲಿ ಅಲರ್ಟ್ ಸಂದೇಶ, ಸೈರನ್ ಮೊಳಗಿದ್ರೆ ಭಯಪಡಬೇಡಿ.. !! – vishwanews24

NDMAಯಿಂದ ಬರುತ್ತೆ ತುರ್ತು ಎಚ್ಚರಿಕೆ ಸಂದೇಶ.. ನಿಮ್ಮ ಮೊಬೈಲ್‌ನಲ್ಲಿ ಅಲರ್ಟ್ ಸಂದೇಶ, ಸೈರನ್ ಮೊಳಗಿದ್ರೆ ಭಯಪಡಬೇಡಿ.. ನಿಮ್ಮ ಮೊಬೈಲ್‌ ಫೋನ್‌…

2 days ago