Featured

ಉಡುಪಿ : ಜ.20 ರಂದು ಕಡಿಯಾಳಿ ಶ್ರೀ ಮಹಿಷಮರ್ದಿನಿ ದೇಗುಲದ ನೂತನ ಧ್ವಜ ಸ್ತಂಭದ ಪಾದುಕೆ ಶಿಲಾನ್ಯಾಸ – Vishwanews24

ಉಡುಪಿ : ಜ.20 ರಂದು ಕಡಿಯಾಳಿ ಶ್ರೀ ಮಹಿಷಮರ್ದಿನಿ ದೇಗುಲದ ನೂತನ ಧ್ವಜ ಸ್ತಂಭದ ಪಾದುಕೆ ಶಿಲಾನ್ಯಾಸ

ಉಡುಪಿ : ಕಡಿಯಾಳಿ ಶ್ರೀ ಮಹಿಷಮರ್ದಿನಿ ದೇಗುಲದ ನೂತನ ಧ್ವಜ ಸ್ತಂಭದ ಪಾದುಕೆ ಶಿಲಾನ್ಯಾಸ ಹಾಗೂ ದೇಗುಲದ ಧಾರ್ಮಿಕ ಕಾರ್ಯಗಳಿಗೆಂದು ನಿರ್ಮಿಸಲಾದ ವೇದವ್ಯಾಸ ಯಾಗ ಶಾಲೆಯ ಉದ್ಘಾಟನಾ ಸಮಾರಂಭ ಜ.20 ರಂದು ಬೆಳಿಗ್ಗೆ 9 ಗಂಟೆಗೆ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಈ ಬಗ್ಗೆ ಪ್ರಕಟಣೆ ಮೂಲಕ ಮಾಹಿತಿ ನೀಡಿರುವ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರು ಡಾ.ರವಿರಾಜ್ ವಿ ಆಚಾರ್ಯ ಮತ್ತು ಜೀರ್ಣೋದ್ಧಾರ ಸಮಿತಿ ಪ್ರಧಾನ ಕಾರ್ಯದರ್ಶಿ ಕೆ ರಾಘವೇಂದ್ರ ಕಿಣಿ ಅವರು, ಕಡಿಯಾಳಿ ಶ್ರೀ ಮಹಿಷಮರ್ದಿನಿ ದೇಗುಲದ ಬ್ರಹ್ಮಕಲಶೋತ್ಸವವು ವಿಜೃಂಭಣೆಯಿಂದ ನಡೆಯಿತು. ಧ್ವಜಸ್ತಂಭಕ್ಕೆ ಸಂಪೂರ್ಣ ಸಾವಯವ ಎಳ್ಳೆಣ್ಣೆ ಹಾಕುವ ಮೂಲಕ ಧ್ವಜಸ್ತಂಬಕ್ಕೆ ಚಾಲನೆ ನೀಡಿ, ಇದೀಗ ದೇಗುಲದ ಧ್ವಜಸ್ತಂಭದ (ಕೊಡಿ ಮರದ) ಪಾದುಕೆ ಶಿಲನ್ಯಾಸ ಮತ್ತು ಯಾಗ ಶಾಲೆಯನ್ನು ಜ.20 ರಂದು ಬೆಳಿಗ್ಗೆ 9 ಗಂಟೆಗೆ ಕಾಣಿಯೂರು ಮಠದ ಶ್ರೀ ವಿದ್ಯಾವಲ್ಲಭ ತೀರ್ಥ ಶ್ರೀಪಾದರು ಲೋಕಾರ್ಪಣೆ ಗೊಳಿಸಲಿದ್ದಾರೆ. ಹಾಗೂ ಧ್ವಜಸ್ತಂಭಕ್ಕೆ ಸಂಪೂರ್ಣ ತಾಮ್ರ ಮತ್ತು ಹಿತ್ತಾಳೆಯನ್ನು ಹೊದಿಸಿ ವಿಜೃಂಭಣೆಯಿಂದ ಧ್ವಜ ಪ್ರತಿಷ್ಠೆ ನಡೆಸಲಾಗುವುದೆಂದು ನಿಶ್ಚಯಿಸಲಾಗಿದ್ದು, ಮಾ.24ರಂದು ಬೆಳಿಗ್ಗೆ 7 ಗಂಟೆಗೆ ಧ್ವಜಸ್ತಂಭ ಪ್ರತಿಷ್ಠೆ ಕಲಶಾಭಿಷೇಕ, ಬೆಳಿಗ್ಗೆ 9:45 ಕ್ಕೆ ಒದಗುವ ವೃಷಭ ಲಗ್ನ ಸಮೂಹೂರ್ತದಲ್ಲಿ ಶ್ರೀ ದೇವಿಗೆ ಬ್ರಹ್ಮಕಲಶಾಭಿಷೇಕ, ಮಹಾ ಅನ್ನಸಂತರ್ಪಣೆ ನಡೆಯಲಿದೆ. ಸಂಜೆ 5 ಗಂಟೆಗೆ ಹಾಲಿಟ್ಟ ಸೇವೆ, ದೂಳಿಮಂಡಲ ಸೇವೆ, ಸಣ್ಣ ರಂಗಪೂಜೆ ನಡೆಯಲಿದೆ ಎಂದು ತಿಳಿಸಿದರು.

ಇನ್ನು ಮುಂದಿನ ದಿನಗಳಲ್ಲಿ ವ್ಯಾಘ್ರ ಪಿಲಿಚಾಮುಂಡಿ ಮತ್ತು ಇತರ ಪರಿವಾರ ದೈವಗಳ ಜೀರ್ಣೋದ್ಧಾರ ಕಾಮಗಾರಿ ಶೀಘ್ರದಲ್ಲೇ ನಡೆಸಲಾಗುವುದು ಎಂದು ಅವರು ಪ್ರಕಟಣೆ ಮೂಲಕ ಮಾಹಿತಿ ನೀಡಿದ್ದಾರೆ.

Join our Whatsapp group by clicking the below link 👇👇

https://chat.whatsapp.com/KfUmhXQKZb114i4QHNvqEK 

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

5 hours ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

6 hours ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

7 hours ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

7 hours ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

8 hours ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

8 hours ago