ಉಡುಪಿ : ಜ. 22 ರಂದು ಸಾರ್ವತ್ರಿಕ ರಜೆ ಘೋಷಣೆ ಮಾಡಿ ಪವಿತ್ರ ದಿನವನ್ನು ಸಂಭ್ರಮದಿಂದ ಆಚರಿಸಲು ರಾಜ್ಯದ ಜನತೆಗೆ ಅವಕಾಶ ಕಲ್ಪಿಸುವಂತೆ ಸಿಎಂ ಗೆ ಯಶ್ಪಾಲ್ ಸುವರ್ಣ ಮನವಿ – vishwanews24

Featured, ಉಡುಪಿ

ಉಡುಪಿ : ಜ.22ರಂದು ಅಯೋಧ್ಯೆ ಶ್ರೀ ರಾಮ ಮಂದಿರ ಲೋಕಾರ್ಪಣೆಗೆ ಸಾರ್ವತ್ರಿಕ ರಜೆ ಘೋಷಣೆ ಮಾಡುವಂತೆ ಸಿಎಂ ಗೆ ಯಶ್ಪಾಲ್ ಸುವರ್ಣ ಮನವಿ

ಉಡುಪಿ: ಸಮಸ್ತ ಹಿಂದೂಗಳ ಶ್ರದ್ಧಾ ಕೇಂದ್ರವಾಗಿ 500 ವರ್ಷಗಳ ಕನಸು ನನಸಾಗುವ ಸಮಸ್ತ ಭಾರತೀಯರ ಪಾಲಿಗೆ ಅತ್ಯಂತ ಪವಿತ್ರ ದಿನವಾಗಿ ಅಯೋಧ್ಯೆ ಶ್ರೀ ರಾಮ ಮಂದಿರದ ಲೋಕಾರ್ಪಣೆಯ ಭಾವನಾತ್ಮಕ ಐತಿಹಾಸಿಕ ಕ್ಷಣವನ್ನು ಮನೆ ಮನಗಳಲ್ಲಿ ಆಚರಿಸಲು ಜನವರಿ 22 ರಂದು ಸಾರ್ವತ್ರಿಕ ರಜೆ ಘೋಷಣೆ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ರವರಿಗೆ ಉಡುಪಿ ಶಾಸಕ ಶ್ರೀ ಯಶ್ ಪಾಲ್ ಸುವರ್ಣ ಮನವಿ ಮಾಡಿದ್ದಾರೆ.

ಜನವರಿ 22 ರಂದು ಪ್ರಧಾನಿ ನರೇಂದ್ರ ಮೋದಿಯವರ ಉಪಸ್ಥಿತಿಯಲ್ಲಿ ಶ್ರೀ ರಾಮ ದೇವರ ವಿಗ್ರಹಕ್ಕೆ ಪ್ರಾಣ ಪ್ರತಿಷ್ಠೆಯ ಮೂಲಕ ಕೋಟ್ಯಾಂತರ ಭಕ್ತರ ಹಲವು ಶತಮಾನಗಳ ಮಂದಿರದ ಲೋಕಾರ್ಪಣೆಗೆ ಜಗತ್ತು ಸಾಕ್ಷಿಯಾಗಲಿದೆ.

ಅಯೋಧ್ಯೆಯ ರಾಮ ಮಂದಿರ ನಿರ್ಮಾಣಕ್ಕೆ ನನ್ನ ವಿರೋಧವಿಲ್ಲ , ನಾನೂ ಕೂಡ ರಾಮಾಂಜನೇಯ ಭಕ್ತ : ಸಿಎಂ ಸಿದ್ದರಾಮಯ್ಯ – vishwanews24

ಈ ವಿಶೇಷ ದಿನದಂದು ದೇಶದಾದ್ಯಂತ ಹಲವು ದೇವಸ್ಥಾನ, ಮಂದಿರ ಹಾಗೂ ಸಂಘ ಸಂಸ್ಥೆಗಳಲ್ಲಿ ವಿಶೇಷ ಪೂಜೆ, ಭಜನಾ ಸಂಕೀರ್ತನೆ, ಅನ್ನ ಸಂತರ್ಪಣೆಯ ಮೂಲಕ ಅತ್ಯಂತ ಸಂಭ್ರಮ ಸಡಗರದಿಂದ ಅಚರಿಸುತ್ತಿದ್ದು, ಪ್ರಧಾನಿ ಶ್ರೀ ನರೇಂದ್ರ ಮೋದಿಯವರು ದೇಶದ ಜನತೆಗೆ ಈ ಪವಿತ್ರ ದಿನವನ್ನು ಮನೆ ಮನೆಗಳಲ್ಲಿ ದೀಪಾವಳಿ ಹಬ್ಬದಂತೆ ಆಚರಿಸಲು ಕರೆ ನೀಡಿದ್ದಾರೆ.

ರಾಜ್ಯ ಸರಕಾರ ಜನವರಿ 22 ರಂದು ಸಾರ್ವತ್ರಿಕ ರಜೆ ಘೋಷಣೆ ಮಾಡಿ ಪವಿತ್ರ ದಿನವನ್ನು ಸಂಭ್ರಮದಿಂದ ಆಚರಿಸಲು ರಾಜ್ಯದ ಜನತೆಗೆ ಅವಕಾಶ ಕಲ್ಪಿಸುವಂತೆ ಮನವಿ ಮಾಡಿದ್ದರೆ.

ಮಂಗಳೂರು : ಅಯೋಧ್ಯೆಯ ಪವಿತ್ರ ಮಂತ್ರಾಕ್ಷತೆಯನ್ನು ರಾಜ್ಯದ ಎಲ್ಲಾ  ಗ್ರಾಮಗಳ ಪ್ರತಿ ಮನೆಗಳಿಗೆ ವಿತರಿಸುವ ಅಭಿಯಾನ : ಶರಣ್ ಪಂಪ್‌ವೆಲ್ – vishwanews24

 

Leave a Reply