ಉಡುಪಿ: ದೇಶದ ಸ್ವಾತಂತ್ರ್ಯದ ಅಮೃತ ಮಹೋತ್ಸವ ಹಾಗೂ ಉಡುಪಿ ಕರಾವಳಿ ಬೈಪಾಸ್ನಲ್ಲಿರುವ ಮಣಿಪಾಲ ಇನ್ ಹೊಟೇಲ್ ನ ಮೂರನೇ ವಾರ್ಷಿಕೋತ್ಸವದ ಪ್ರಯುಕ್ತ ಜ.26ರಂದು ಗಣರಾಜ್ಯೋತ್ಸವ ದಿನದಂದು ಬೃಹತ್ ರಕ್ತದಾನ ಶಿಬಿರವನ್ನು ಹೊಟೇಲಿನ ಏಳನೇ ಮಹಡಿಯ ಸಮ್ಮೇಳನ ಸಭಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಹೊಟೇಲಿನ ಆಡಳಿತ ನಿರ್ದೇಶಕ ಮೌಲಾನ ಇಬ್ರಾಹೀಂ ಗಂಗೊಳ್ಳಿ ತಿಳಿಸಿದ್ದಾರೆ.
ಹೊಟೇಲಿನಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉಡುಪಿ ಜಿಲ್ಲಾಸ್ಪತ್ರೆಯ ರಕ್ತನಿಧಿ ಕೇಂದ್ರ ಮತ್ತು ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಹಕಾರದೊಂದಿಗೆ ನಡೆಯುವ ಈ ಶಿಬಿರವು ಬೆಳಗ್ಗೆ 7:30ರಿಂದ 11:30ರವರೆಗೆ ನಡೆಯಲಿದೆ. ಬೆಳಗ್ಗೆ 9:30ಕ್ಕೆ ಅತೀ ಹೆಚ್ಚು ಬಾರಿ ರಕ್ತದಾನ ಮಾಡಿದವರಿಗೆ ಹಾಗೂ ಸಾಮಾಜಿಕ ಕಾರ್ಯ ಕರ್ತರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ. ಇದರಲ್ಲಿ ಮುಖ್ಯ ಅತಿಥಿಗಳಾಗಿ ಉದ್ಯಮಿ ಸುರೇಶ್ ಶೆಟ್ಟಿ ಗುರ್ಮೆ ಹಾಗೂ ವಿವಿಧ ಗಣ್ಯರು ಭಾಗವಹಿಸಲಿರುವರು ಎಂದರು.
ಶಿಬಿರದಲ್ಲಿ ಹೊಟೇಲಿನ 150 ಸಿಬಂದಿ ಸೇರಿದಂತೆ 500ಕ್ಕೂ ಅಧಿಕ ಮಂದಿ ಭಾಗವಹಿಸಿ ರಕ್ತದಾನ ಮಾಡಲಿದ್ದಾರೆ. ಆಟೋ ರಿಕ್ಷಾ ಯೂನಿಯನ್, ಕಾರ್ಮಿಕ ಸಂಘಟನೆ ಸೇರಿದಂತೆ ವಿವಿಧ ಸಂಘಸಂಸ್ಥೆಗಳ ಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಈ ಶಿಬಿರವನ್ನು ಮುಕ್ತವಾಗಿ ಭಾಗವಹಿಸುವ ಮೂಲಕ ಯಶಸ್ವಿ ಗೊಳಿಸಬೇಕು ಎಂದು ಅವರು ಮನವಿ ಮಾಡಿದರು.
ಭಾರತದಲ್ಲಿ ಪ್ರತಿವರ್ಷ 1.5ರಿಂದ 2 ಲಕ್ಷ ಮಂದಿ ರಕ್ತ ಅಪಘಾತಕ್ಕೆ ಬಲಿಯಾಗುತ್ತಿದ್ದಾರೆ. ಆದುದರಿಂದ ನಮ್ಮಲ್ಲಿ ರಕ್ತದ ಅಗತ್ಯತೆ ಸಾಕಷ್ಟು ಹೆಚ್ಚುತ್ತಿದೆ. ರಕ್ತದಾನಿಗಳು ಜೀವರಕ್ಷಕರು, ರಕ್ತದಾನ ಸಾಮಾಜಿಕ ಜವಾಬ್ದಾರಿಯಾಗಿದ್ದು, ನಿಮ್ಮ ರಕ್ತ ಒಂದು ಜೀವವನ್ನು ಉಳಿಸಬಹುದು. ಆದುದರಿಂದ ರಕ್ತದಾನ ಮಾಡುವ ಮೂಲಕ ಮಾನವೀಯ ಮೌಲ್ಯಗಳನ್ನು ಎತ್ತಿ ಹಿಡಿಯಬೇಕು ಎಂದು ಅವರು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಹೊಟೇಲಿನ ಜನರಲ್ ಮ್ಯಾನೇಜರ್ ಆನಂದ ಕುಮಾರ್, ಮುಖ್ಯ ಬಾಣಸಿಗ ಉಮೇಶ್ ಪೂಜಾರಿ ಉಪಸ್ಥಿತರಿದ್ದರು.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…