ಉಡುಪಿ: ಉಡುಪಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರ ನೇತೃತ್ವದಲ್ಲಿ “ಕರ್ನಾಟಕ ರತ್ನ ಡಾ|| ಪುನೀತ್ ರಾಜ್ ಕುಮಾರ್ ರವರ ಸ್ಮರಣಾರ್ಥ “ಪುನೀತ್ ಪರ್ವ 2023” ಕಾರ್ಯಕ್ರಮವನ್ನು ಜ.29 ರಂದು ಸಂಜೆ 5 ಗಂಟೆಗೆ ಉಡುಪಿಯ ಮಿಷನ್ ಕಂಪೌಂಡ್ ನ ಕ್ರಿಶ್ಚಿಯನ್ ಪದವಿಪೂರ್ವ ಕಾಲೇಜು ಮೈದಾನದ ಇಂದಿರಾ ಗಾಂಧಿ ವೇದಿಕೆಯಲ್ಲಿ ಆಯೋಜಿಸಲಾಗಿದೆ.
ಈ ಬಗ್ಗೆ ಪ್ರಕಟಣೆ ಮೂಲಕ ಮಾಹಿತಿ ನೀಲಾಗಿದ್ದು, ಅಂದು ಜ.29 ರಂದು ನಡೆಯುವ ಸಭಾ ಕಾರ್ಯಕ್ರಮದಲ್ಲಿ ವಿಶೇಷ ಅತಿಥಿಗಳಾಗಿ ಕಲರ್ಸ್ ಕನ್ನಡ ವಾಹಿನಿಯ ಮಜಾಭಾರತ ಖ್ಯಾತಿಯ ರಾಘವೇಂದ್ರ, ಹುಲಿ ಕಾರ್ತಿಕ್, ಜಗ್ಗಪ್ಪ ಅವರು ಭಾಗವಹಿಸಲಿದ್ದಾರೆ. ಈ ವೇಳೆ ಕಾರ್ಯಕ್ರಮದಲ್ಲಿ ರಿಕ್ಷಾ ಚಾಲಕರಿಗೆ ಸಮವಸ್ತ್ರ ವಿತರಣೆ, ಶಾಲೆಗಳಿಗೆ ಸ್ಪೋರ್ಟ್ಸ್ ಕಿಟ್ ವಿತರಣೆ, ಅಂಗನವಾಡಿ ಮಕ್ಕಳಿಗೆ ಚೇರ್ ವಿತರಣೆ ನಡೆಯಲಿದೆ ಎಂದು ತಿಳಿಸಲಾಗಿದೆ.
ಹಾಗೂ ಬಳಿಕ ಸಂಜೆ 7 ಗಂಟೆಯಿಂದ ಖ್ಯಾತ ಗಾಯಕ ರಾಜೇಶ್ ಕೃಷ್ಣನ್ ಸಾರಥ್ಯದಲ್ಲಿ ನಟರಾಜ್ ಎಂಟರ್ಟೈನರ್ಸ್ ತಂಡದ ಕಲಾವಿದರಾದ ಸರಿಗಮಪ ಖ್ಯಾತಿಯ ಸುಹಾನ ಸೈಯದ್, ಖ್ಯಾತ ಗಾಯಕಿ ಪುಪ್ಪ ಆರಾಧ್ಯ, ಸರಿಗಮಪ ಹಾಗೂ ಕನ್ನಡ ಕೋಗಿಲೆ ಖ್ಯಾತಿಯ ಪರುಷೋತ್ತಮ ಅವರನ್ನೋಳಗೊಂಡ “ಸಂಗೀತ ಸಂಜೆ” ಕಾರ್ಯಕ್ರಮ ನಡೆಯಲಿದೆ ಎಂದು ಮಾಹಿತಿ ನೀಡಲಾಗಿದೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…