ಉಡುಪಿ: ಜ. 30ರಂದು ಸಿಎಎ, ಎನ್‌ಆರ್‌ಸಿ ಹಾಗೂ ಎನ್‌ಪಿಆರ್‌ ವಿರೋಧಿಸಿ ‘ನಾವು ಭಾರತೀಯರು’ ಬೃಹತ್ ಪ್ರತಿಭಟನಾ ಸಭೆ : ಅಮೃತ್‌ ಶೆಣೈ -Vishwanews24

ಉಡುಪಿ: ಕೇಂದ್ರ ಸರ್ಕಾರದ ಸಿಎಎ, ಎನ್‌ಆರ್‌ಸಿ ಹಾಗೂ ಎನ್‌ಪಿಆರ್‌ ಕಾಯ್ದೆಯನ್ನು ವಿರೋಧಿಸಿ ‘ನಾವು ಭಾರತೀಯರು’ ಪ್ರತಿಭಟನಾ ಸಭೆಯನ್ನು ಉಡುಪಿ ಕ್ರಿಶ್ಚಿಯನ್‌ ಹೈಸ್ಕೂಲ್‌ ಮೈದಾನದಲ್ಲಿ ಜ. 30ರಂದು ಸಂಜೆ 4 ಗಂಟೆಗೆ ಆಯೋಜಿಸಲಾಗಿದೆ ಎಂದು ಸಹಬಾಳ್ವೆ ಉಡುಪಿ ಸಂಘಟನೆಯ ಅಧ್ಯಕ್ಷ ಅಮೃತ್‌ ಶೆಣೈ ಹೇಳಿದರು.
ಬುಧವಾರ ಆದಿಉಡುಪಿಯ ಅಂಬೇಡ್ಕರ್‌ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಪ್ರತಿಭಟನಾ ಸಭೆಗೂ ಮೊದಲು ಮಧ್ಯಾಹ್ನ 2.30ಕ್ಕೆ ಉಡುಪಿ ಎಸ್ಪಿ ಕಚೇರಿಯಿಂದ ಬಹೃತ್‌ ಪಾದಯಾತ್ರೆ ಹೊರಡಲಿದೆ. ಪಾದಯಾತ್ರೆಯು ಎಸ್ಪಿ ಕಚೇರಿಯಿಂದ ಆರಂಭಗೊಂಡು ಬನ್ನಂಜೆ, ಸಿಟಿ ಬಸ್‌ ನಿಲ್ದಾಣ, ಕ್ಲಾಕ್‌ ಟವರ್‌, ಕೋರ್ಟ್‌ ರೋಡ್‌ ಮೂಲಕ ಮಿಷನ್‌ ಆಸ್ಪತ್ರೆಯ ಮಾರ್ಗವಾಗಿ ಕ್ರಿಶ್ಚಿಯನ್‌ ಹೈಸ್ಕೂಲ್‌ ಮೈದಾನದಕ್ಕೆ ತಲುಪಲಿದೆ. ಸುಮಾರು 5 ಸಾವಿರ ಜನ ಭಾಗವಹಿಸುವ ನಿರೀಕ್ಷೆ ಇದೆ. ಸಭೆಯ ಭದ್ರತೆಗಾಗಿ 500 ಸ್ವಯಂ ಸೇವಕರನ್ನು ನಿಯೋಜಿಸಲಾಗುವುದು ಎಂದರು.
ಸಭೆಯಲ್ಲಿ ಪ್ರಧಾನ ಭಾಷಣಕಾರರಾಗಿ ಭೀಮ್‌ ಆರ್ಮಿ ಮುಖ್ಯಸ್ಥ ಚಂದ್ರಶೇಖರ್‌ ಆಜಾದ್‌ ರಾವಣ್‌, ನಿವೃತ್ತ ಐಎಎಸ್‌ ಅಧಿಕಾರಿ ಸಸಿಕಾಂತ್‌ ಸೆಂಥಿಲ್‌, ಚಿಂತಕ ಮಹೇಂದ್ರ ಕುಮಾರ್‌, ಸಾಮಾಜಿಕ ಹೋರಾಟಗಾರರಾದ ಕವಿತಾ ರೆಡ್ಡಿ, ಮೆಹರೋಝ್‌ ಖಾನ್‌, ಯುವ ನಾಯಕಿ ನಜ್ಮಾ ನಝೀರ್‌ ಚಿಕ್ಕನೇರಳೆ, ವಿದ್ಯಾರ್ಥಿ ನಾಯಕಿ ಅಮೂಲ್ಯ ಅವರು ಭಾಗವಹಿಸುವರು ಎಂದು ತಿಳಿಸಿದರು.

 

ಸಿಎಎ, ಎನ್‌ಆರ್‌ಸಿ ವಿರುದ್ಧ ಹೋರಾಡುವವರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆಗುತ್ತಿದೆ. ಗೋಲಿಬಾರ್‌, ವಿದ್ಯಾರ್ಥಿಗಳ ಮೇಲೆ ಹಲ್ಲೆ ಮಾಡಲಾಗುತ್ತಿದೆ. ಸರ್ಕಾರ ದಬ್ಬಾಳಿಕೆ, ದೌರ್ಜನ್ಯದ ಮೂಲಕ ಹೋರಾಟವನ್ನು ಹತ್ತಿಕ್ಕಲು ಪ್ರಯತ್ನಿಸುತ್ತಿದೆ. ಆದ್ದರಿಂದ ದೇಶದಲ್ಲಿ ಕಾನೂನು, ಸಂವಿಧಾನ ಇದೆಯೋ, ಇಲ್ಲವೋ ಎಂಬ ಸಂಶಯ ಕಾಡುತ್ತಿದೆ ಎಂದು ಟೀಕಿಸಿದರು.
ಸುದ್ದಿಗೋಷ್ಠಿಯಲ್ಲಿ ದಸಂಸ ಪ್ರಧಾನ ಕಾರ್ಯದರ್ಶಿ ಸುಂದರ್‌ ಮಾಸ್ತರ್‌, ಪ್ರಶಾಂತ್ ಜತ್ತನ್, ವಿಲಿಯಂ ಮಾರ್ಟಿಸ್‌, ಅಬ್ದುಲ್‌ ಅಜೀಜ್‌ ಉದ್ಯಾವರ, ಕಲೀಲ್‌ ಅಹ್ಮದ್‌, ಚಂದ್ರಿಕಾ ಶೆಟ್ಟಿ, ಸಿರೀನ್‌ ಮಥಾಯಸ್‌ ಇದ್ದರು.

ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.

ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್

8088827292

Vishwa News 24

Recent Posts

ಕುದುರೆಮುಖ ಆಫ್ ರೋಡಿಂಗ್ ಚಟುವಟಿಕೆ ವಿರುದ್ಧ ತೀವ್ರ ಆಕ್ರೋಶ – vishwanews24

ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…

55 minutes ago

ಕುಂದಾಪುರ: ಮನೆಯ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು; ಚಿನ್ನಾಭರಣ, ನಗದು ಕಳವು – vishwanews24

ಕುಂದಾಪುರ: ಮನೆಯ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು; ಚಿನ್ನಾಭರಣ, ನಗದು ಕಳವು ಕುಂದಾಪುರ: ಕುಂದಾಪುರದ ಬೊಬ್ಬರ್ಯನಕಟ್ಟೆಯ ಮನೆಯಲ್ಲಿ ಯಾರೂ ಇಲ್ಲದ…

1 hour ago

ಕರ್ನಾಟಕ ವಿಧಾನಸಭೆ ನೂತನ ಸ್ಪೀಕರ್​ ಆಗಿ ಜಿ.ಎಸ್. ಪಾಟೀಲ್ ಅವಿರೋಧ ಆಯ್ಕೆ – vishwanews24

ಕರ್ನಾಟಕ ವಿಧಾನಸಭೆ ಸ್ಪೀಕರ್​ ಆಗಿ ಜಿ.ಎಸ್. ಪಾಟೀಲ್ ಅವಿರೋಧ ಆಯ್ಕೆ ಬೆಂಗಳೂರು: ಕರ್ನಾಟಕ ವಿಧಾನಸಭಾಧ್ಯಕ್ಷರಾಗಿ ಗುರುಪಾದಗೌಡ ಸಂಗನಗೌಡ ಪಾಟೀಲ (ಜಿ.ಎಸ್.ಪಾಟೀಲ್)…

1 hour ago

ನಿರ್ಮಾಣ ಹಂತದಲ್ಲಿದ್ದ ಸುರಂಗದ ಒಳಗೆ ನುಗ್ಗಿದ ನೀರು : 7 ಕಾರ್ಮಿಕರ ದಾರುಣ ಸಾವು ; 14ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ – vishwanews24

ನಿರ್ಮಾಣ ಹಂತದಲ್ಲಿದ್ದ ಸುರಂಗದ ಒಳಗೆ ನುಗ್ಗಿದ ನೀರು .. 7 ಕಾರ್ಮಿಕರ ದಾರುಣ ಸಾವು ; 14ಕ್ಕೂ ಹೆಚ್ಚು ಮಂದಿಗೆ…

2 hours ago

ಧ್ವಜಾರೋಹಣಕ್ಕೆ ವಿನಾಯಿತಿ ಕೋರಿ ಸಿಎಂಗೆ ಸಚಿವ ಜಮೀರ್ ಪತ್ರ ; ಮನವಿಗೆ  ಸ್ಪಂದಿಸಿದ ಸಿಎಂ  – vishwanews24

ಧ್ವಜಾರೋಹಣಕ್ಕೆ ವಿನಾಯಿತಿ ಕೋರಿ ಸಿಎಂಗೆ ಸಚಿವ ಜಮೀರ್ ಪತ್ರ ; ಮನವಿಗೆ  ಸ್ಪಂದಿಸಿದ ಸಿಎಂ  ಚುನಾವಣೆ, ಪಕ್ಷ ಸಂಘಟನೆ ಕಾರಣ…

2 hours ago

ಮನೆ ತೆರಿಗೆ ಲಕ್ಷಾಂತರ ಹಣ ದುರುಪಯೋಗ: ಶಿವಪುರ ಗ್ರಾ.ಪಂ ಸಿಬ್ಬಂದಿ ವಜಾ – vishwanews24

ಮನೆ ತೆರಿಗೆ ಲಕ್ಷಾಂತರ ಹಣ ದುರುಪಯೋಗ: ಶಿವಪುರ ಗ್ರಾಪಂ ಸಿಬ್ಬಂದಿ ವಜಾ ಉಡುಪಿ: ಹೆಬ್ರಿ ತಾಲ್ಲೂಕಿನ ಶಿವಪುರ ಗ್ರಾಮ ಪಂಚಾಯಿತಿಯಲ್ಲಿ…

2 hours ago