Featured

ಉಡುಪಿ : ಜ.5ರಿಂದ 10ರ ವರೆಗೆ 23ನೇ ವರ್ಷದ ಕೆಮ್ತೂರು ದೊಡ್ಡಣ್ಣ ಶೆಟ್ಟಿ ನೆನಪಿನ ತುಳು ನಾಟಕ ಸ್ಪರ್ಧೆ – vishwanews24

ಉಡುಪಿ : ಜ.5ರಿಂದ 10ರ ವರೆಗೆ 23ನೇ ವರ್ಷದ ಕೆಮ್ತೂರು ದೊಡ್ಡಣ್ಣ ಶೆಟ್ಟಿ ನೆನಪಿನ ತುಳು ನಾಟಕ ಸ್ಪರ್ಧೆ

ಉಡುಪಿ: ತುಳುಕೂಟ ಉಡುಪಿ ಸಂಸ್ಥೆಯ ವತಿಯಿಂದ ಹಾಗೂ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಸಹಯೋಗದಲ್ಲಿ 23ನೇ ವರ್ಷದ ದಿ. ಕೆಮ್ತೂರು ದೊಡ್ಡಣ್ಣ ಶೆಟ್ಟಿ ನೆನಪಿನ ತುಳು ನಾಟಕ ಸ್ಪರ್ಧೆಯು ಇದೇ ಜನವರಿ 5ರಿಂದ 10ರ ವರೆಗೆ ಉಡುಪಿ ಎಂ.ಜಿ.ಎಂ.ಕಾಲೇಜಿನ ಮುದ್ದಣ ಮಂಟಪದಲ್ಲಿ ಆಯೋಜಿಸಲಾಗಿದೆ ಎಂದು ತುಳುಕೂಟ ಉಡುಪಿ ಸಂಸ್ಥೆಯ ಅಧ್ಯಕ್ಷ ಬಿ. ಜಯಕರ ಶೆಟ್ಟಿ ಇಂದ್ರಾಳಿ ಹೇಳಿದರು.

ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ದೇಶದ ಯಾವುದೇ ಪ್ರದೇಶದ ಯೋಗ್ಯ ತುಳು ಹವ್ಯಾಸಿ ನಾಟಕ ತಂಡಗಳಿಗೆ ಸ್ಪರ್ಧೆಯಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸಲಾಗಿದೆ. ಈ ಬಾರಿ ವಿವಿಧ 6 ಪ್ರಸಿದ್ಧ ತಂಡಗಳಿಗೆ ಅವಕಾಶ ನೀಡಲಾಗಿದೆ. ಜ. 5ರಂದು ಸಂಜೆ 5 ಗಂಟೆಗೆ ಶಾಸಕ ಯಶ್‌ಪಾಲ್ ಎ. ಸುವರ್ಣ ಅವರು ನಾಟಕ ಸ್ಪರ್ಧೆಗೆ ಚಾಲನೆ ನೀಡಲಿದ್ದಾರೆ.

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ ಗಟ್ಟಿ ಕಾಪಿಕಾಡ್, ಮಣಿಪಾಲ ಎಚ್‌ಪಿಆ‌ರ್ ಸಮೂಹ ಸಂಸ್ಥೆಯ ಅಧ್ಯಕ್ಷ ಹರಿಪ್ರಸಾದ್ ರೈ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಸಭಾಕಾರ್ಯಕ್ರಮದ ಬಳಿಕ ಉಡುಪಿ ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಕಲಾವಿದರಿಂದ ‘ತುದೆದಾಂಟಿ ಬೊಕ್ಕ’ ನಾಟಕ ಪ್ರದರ್ಶನಗೊಳ್ಳಲಿದೆ ಎಂದರು.

ಜ. 6ರಂದು ಮಲ್ಪೆ ಕರಾವಳಿ ಕಲಾವಿದರಿಂದ ‘ಪೆರ್ಗ’, ಜ.7ರಂದು ಪಟ್ಲ ಭೂಮಿಗೀತ ಸಾಂಸ್ಕೃತಿಕ ವೇದಿಕೆಯಿಂದ ‘ದಿ ಫೈಯರ್’, ಜ.8ರಂದು ಸುಮನಸಾ‌ ಕೊಡವೂರು ಕಲಾವಿದರಿಂದ ‘ಈದಿ’, ಜ.9ರಂದು ಮುಂಬೈ ರಂಗಮಿಲನ ತಂಡದಿಂದ ‘ಸೋಕ್ರಟಿಸ್’ ಹಾಗೂ ಜ.10 ರಂದು ಭೂಮಿಕಾ ಹಾರಾಡಿ ತಂಡದಿಂದ ‘ಪೊರ್ತು ಕಂತಿನೆಡ್ಜ್ ಪೊರ್ತು ಉದಿಪುನೇಟ’ ನಾಟಕ ಪ್ರದರ್ಶನಗೊಳ್ಳಲಿದೆ ಎಂದು‌ ತಿಳಿಸಿದರು.

ಪ್ರಥಮ, ದ್ವಿತೀಯ, ತೃತೀಯ ಸ್ಥಾನ ಪಡೆಯುವ ತಂಡಗಳಿಗೆ ಕ್ರಮವಾಗಿ 20 ಸಾವಿರ, 15 ಸಾವಿರ ಹಾಗೂ 10 ಸಾವಿರ ನಗದು ಬಹುಮಾನ ನೀಡಲಾಗುವುದು. ಹಾಗೆಯೇ ನಿರ್ದೇಶನ, ಸಂಗೀತ, ರಂಗವಿನ್ಯಾಸ, ಬೆಳಕು, ನಟ, ನಟಿ ವಿಭಾಗಗಳಲ್ಲಿ ಪ್ರಥಮ 1 ಸಾವಿರ ಮತ್ತು ದ್ವಿತೀಯ, ತೃತೀಯ ಬಹುಮಾನ ನೀಡಲಾಗುವುದು.

ಸ್ಪರ್ಧೆಗೆ ಆಯ್ಕೆಯಾದ ರಾಜ್ಯದೊಳಗಿನ ತಂಡಗಳಿಗೆ 5 ಸಾವಿರ ಹಾಗೂ ಹೊರರಾಜ್ಯದ ತಂಡಗಳಿಗೆ 10 ಸಾವಿರ ಭತ್ಯೆಯೊಂದಿಗೆ ಊಟ ಉಪಚಾರ ಮತ್ತು ಉತ್ತಮ ಸೌಕರ್ಯಗಳನ್ನು ಒದಗಿಸಲಾಗುವುದು ಎಂದರು.

ಸುದ್ದಿಗೋಷ್ಠಿಯಲ್ಲಿ ಸಂಸ್ಥೆಯ ಕಾರ್ಯದರ್ಶಿ ಗಂಗಾಧರ ಕಿದಿಯೂರು, ನಾಟಕ ಸ್ಪರ್ಧೆಯ ಸಂಚಾಲಕ ಬಿ. ಪ್ರಭಾಕರ ಭಂಡಾರಿ, ಉಪಾಧ್ಯಕ್ಷ ದಿವಾಕರ್ ಸನಿಲ್, ಮಾಧ್ಯಮ ಸಂಚಾಲಕಿ ಭಾರತಿ ಟಿ.ಕೆ, ಯಶೋದ ಕೇಶವ್ ಉಪಸ್ಥಿತರಿದ್ದರು.

Vishwa News 24

Recent Posts

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

23 hours ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

23 hours ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

24 hours ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

1 day ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

1 day ago

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ – vishwanews24

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…

1 day ago