Featured

ಉಡುಪಿ : ಜ.5ರಿಂದ 10ರ ವರೆಗೆ 23ನೇ ವರ್ಷದ ಕೆಮ್ತೂರು ದೊಡ್ಡಣ್ಣ ಶೆಟ್ಟಿ ನೆನಪಿನ ತುಳು ನಾಟಕ ಸ್ಪರ್ಧೆ – vishwanews24

ಉಡುಪಿ : ಜ.5ರಿಂದ 10ರ ವರೆಗೆ 23ನೇ ವರ್ಷದ ಕೆಮ್ತೂರು ದೊಡ್ಡಣ್ಣ ಶೆಟ್ಟಿ ನೆನಪಿನ ತುಳು ನಾಟಕ ಸ್ಪರ್ಧೆ

ಉಡುಪಿ: ತುಳುಕೂಟ ಉಡುಪಿ ಸಂಸ್ಥೆಯ ವತಿಯಿಂದ ಹಾಗೂ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಸಹಯೋಗದಲ್ಲಿ 23ನೇ ವರ್ಷದ ದಿ. ಕೆಮ್ತೂರು ದೊಡ್ಡಣ್ಣ ಶೆಟ್ಟಿ ನೆನಪಿನ ತುಳು ನಾಟಕ ಸ್ಪರ್ಧೆಯು ಇದೇ ಜನವರಿ 5ರಿಂದ 10ರ ವರೆಗೆ ಉಡುಪಿ ಎಂ.ಜಿ.ಎಂ.ಕಾಲೇಜಿನ ಮುದ್ದಣ ಮಂಟಪದಲ್ಲಿ ಆಯೋಜಿಸಲಾಗಿದೆ ಎಂದು ತುಳುಕೂಟ ಉಡುಪಿ ಸಂಸ್ಥೆಯ ಅಧ್ಯಕ್ಷ ಬಿ. ಜಯಕರ ಶೆಟ್ಟಿ ಇಂದ್ರಾಳಿ ಹೇಳಿದರು.

ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ದೇಶದ ಯಾವುದೇ ಪ್ರದೇಶದ ಯೋಗ್ಯ ತುಳು ಹವ್ಯಾಸಿ ನಾಟಕ ತಂಡಗಳಿಗೆ ಸ್ಪರ್ಧೆಯಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸಲಾಗಿದೆ. ಈ ಬಾರಿ ವಿವಿಧ 6 ಪ್ರಸಿದ್ಧ ತಂಡಗಳಿಗೆ ಅವಕಾಶ ನೀಡಲಾಗಿದೆ. ಜ. 5ರಂದು ಸಂಜೆ 5 ಗಂಟೆಗೆ ಶಾಸಕ ಯಶ್‌ಪಾಲ್ ಎ. ಸುವರ್ಣ ಅವರು ನಾಟಕ ಸ್ಪರ್ಧೆಗೆ ಚಾಲನೆ ನೀಡಲಿದ್ದಾರೆ.

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ ಗಟ್ಟಿ ಕಾಪಿಕಾಡ್, ಮಣಿಪಾಲ ಎಚ್‌ಪಿಆ‌ರ್ ಸಮೂಹ ಸಂಸ್ಥೆಯ ಅಧ್ಯಕ್ಷ ಹರಿಪ್ರಸಾದ್ ರೈ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಸಭಾಕಾರ್ಯಕ್ರಮದ ಬಳಿಕ ಉಡುಪಿ ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಕಲಾವಿದರಿಂದ ‘ತುದೆದಾಂಟಿ ಬೊಕ್ಕ’ ನಾಟಕ ಪ್ರದರ್ಶನಗೊಳ್ಳಲಿದೆ ಎಂದರು.

ಜ. 6ರಂದು ಮಲ್ಪೆ ಕರಾವಳಿ ಕಲಾವಿದರಿಂದ ‘ಪೆರ್ಗ’, ಜ.7ರಂದು ಪಟ್ಲ ಭೂಮಿಗೀತ ಸಾಂಸ್ಕೃತಿಕ ವೇದಿಕೆಯಿಂದ ‘ದಿ ಫೈಯರ್’, ಜ.8ರಂದು ಸುಮನಸಾ‌ ಕೊಡವೂರು ಕಲಾವಿದರಿಂದ ‘ಈದಿ’, ಜ.9ರಂದು ಮುಂಬೈ ರಂಗಮಿಲನ ತಂಡದಿಂದ ‘ಸೋಕ್ರಟಿಸ್’ ಹಾಗೂ ಜ.10 ರಂದು ಭೂಮಿಕಾ ಹಾರಾಡಿ ತಂಡದಿಂದ ‘ಪೊರ್ತು ಕಂತಿನೆಡ್ಜ್ ಪೊರ್ತು ಉದಿಪುನೇಟ’ ನಾಟಕ ಪ್ರದರ್ಶನಗೊಳ್ಳಲಿದೆ ಎಂದು‌ ತಿಳಿಸಿದರು.

ಪ್ರಥಮ, ದ್ವಿತೀಯ, ತೃತೀಯ ಸ್ಥಾನ ಪಡೆಯುವ ತಂಡಗಳಿಗೆ ಕ್ರಮವಾಗಿ 20 ಸಾವಿರ, 15 ಸಾವಿರ ಹಾಗೂ 10 ಸಾವಿರ ನಗದು ಬಹುಮಾನ ನೀಡಲಾಗುವುದು. ಹಾಗೆಯೇ ನಿರ್ದೇಶನ, ಸಂಗೀತ, ರಂಗವಿನ್ಯಾಸ, ಬೆಳಕು, ನಟ, ನಟಿ ವಿಭಾಗಗಳಲ್ಲಿ ಪ್ರಥಮ 1 ಸಾವಿರ ಮತ್ತು ದ್ವಿತೀಯ, ತೃತೀಯ ಬಹುಮಾನ ನೀಡಲಾಗುವುದು.

ಸ್ಪರ್ಧೆಗೆ ಆಯ್ಕೆಯಾದ ರಾಜ್ಯದೊಳಗಿನ ತಂಡಗಳಿಗೆ 5 ಸಾವಿರ ಹಾಗೂ ಹೊರರಾಜ್ಯದ ತಂಡಗಳಿಗೆ 10 ಸಾವಿರ ಭತ್ಯೆಯೊಂದಿಗೆ ಊಟ ಉಪಚಾರ ಮತ್ತು ಉತ್ತಮ ಸೌಕರ್ಯಗಳನ್ನು ಒದಗಿಸಲಾಗುವುದು ಎಂದರು.

ಸುದ್ದಿಗೋಷ್ಠಿಯಲ್ಲಿ ಸಂಸ್ಥೆಯ ಕಾರ್ಯದರ್ಶಿ ಗಂಗಾಧರ ಕಿದಿಯೂರು, ನಾಟಕ ಸ್ಪರ್ಧೆಯ ಸಂಚಾಲಕ ಬಿ. ಪ್ರಭಾಕರ ಭಂಡಾರಿ, ಉಪಾಧ್ಯಕ್ಷ ದಿವಾಕರ್ ಸನಿಲ್, ಮಾಧ್ಯಮ ಸಂಚಾಲಕಿ ಭಾರತಿ ಟಿ.ಕೆ, ಯಶೋದ ಕೇಶವ್ ಉಪಸ್ಥಿತರಿದ್ದರು.

Vishwa News 24

Recent Posts

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ -vishwanews24

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…

2 hours ago

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ -vishwanews24

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…

2 hours ago

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು -vishwanews24

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…

2 hours ago

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ:ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ ಬಹಿರಂಗ! -vishwanews24

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ…

3 hours ago

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

1 day ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

1 day ago