Featured

ಉಡುಪಿ : ಜ.8 ರಂದು ಪುತ್ತಿಗೆ ಶ್ರೀಗಳ ಪುರಪ್ರವೇಶ ಮೆರವಣಿಗೆ – vishwanews24

ಉಡುಪಿ : ಜ.8 ರಂದು ಪುತ್ತಿಗೆ ಶ್ರೀಗಳ ಪುರಪ್ರವೇಶ ಮೆರವಣಿಗೆ

ಉಡುಪಿ : ಪೊಡವಿಗೊಡೆಯ ಅನ್ನಬ್ರಹ್ಮ ಶ್ರೀಕೃಷ್ಣ ಮತ್ತು ಶ್ರೀ ಮುಖ್ಯಪ್ರಾಣ ದೇವರ ಪೂಜಾ ದ್ವೈವಾರ್ಷಿಕ ಪರ್ಯಾಯದ 502 ನೇ ವರ್ಷದ ಶುಭಸಂದರ್ಭದಲ್ಲಿ ಶ್ರೀ ಪುತ್ತಿಗೆ ಉಪೇಂದ್ರತೀರ್ಥ ಸಂಸ್ಥಾನದ ಮಠಾಧೀಶರಾದ ಶ್ರೀ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ತಮ್ಮ ಶಿಷ್ಯ ಶ್ರೀ ಶ್ರೀ ಸುಶ್ರೀಂದ್ರತೀರ್ಥ ಶ್ರೀಪಾದಂಗಳವರೊಡಗೂಡಿ ಶ್ರೀ ಮಧ್ವ ವಾದಿರಾಜರ ಸತ್ಸಂಪ್ರದಾಯದಂತೆ ಚತುರ್ಥ ಬಾರಿಗೆ ಜನವರಿ 18 ರ ಬೆಳಿಗ್ಗೆ ಸರ್ವಜ್ಞಪೀಠಾರೋಹಣ ಮಾಡಲಿದ್ದಾರೆ. ಆ ಪ್ರಯುಕ್ತ ಸ್ವಾಮೀಜಿಯವರು ಪರ್ಯಾಯ ಪೂರ್ವಭಾವಿಯಾಗಿ ದೇಶ-ವಿದೇಶಗಳಲ್ಲಿ ಸಂಚರಿಸಿ, ಪ್ರಸಿದ್ಧ 48 ತೀರ್ಥಕ್ಷೇತ್ರಗಳ ಮಂಡಲಯಾತ್ರೆ ಪೂರೈಸಿ ಜನವರಿ 8 ಸೋಮವಾರ ಉಡುಪಿಗೆ ಪುರಪ್ರವೇಶಗೈಯಲಿದ್ದಾರೆ.

ಸಾಂಪ್ರದಾಯಿಕ ಮೆರವಣಿಗೆ: ಜನವರಿ 8 ರಂದು ಅಪರಾಹ್ನ 3.30 ಗಂಟೆಗೆ ಜೋಡುಕಟ್ಟೆಯಿಂದ ಸಾಂಪ್ರದಾಯಿಕ ಮೆರವಣಿಗೆಯ ಮೂಲಕ ಶ್ರೀಮಠದ ಸಕಲ ಗೌರವಗಳೊಂದಿಗೆ ಶ್ರೀಪಾದರನ್ನು ಬರಮಾಡಿಕೊಳ್ಳಲಾಗುವುದು. ಪುರಪ್ರವೇಶ ಮೆರವಣಿಗೆಯು ಜೋಡುಕಟ್ಟೆ-ಕೆ.ಎಂ. ಮಾರ್ಗ-ತ್ರಿವೇಣಿ ವೃತ್ತ-ಸಂಸ್ಕೃತ ಕಾಲೇಜು ರಸ್ತೆ-ರಥಬೀದಿಯಾಗಿ ಸಾಗಿಬರಲಿದೆ. ಬಳಿಕ ಉಭಯ ಶ್ರೀಗಳು ಶ್ರೀ ಚಂದ್ರಮೌಳೀಶ್ವರ, ಶ್ರೀ ಅನಂತೇಶ್ವರ, ಶ್ರೀ ಕೃಷ್ಣ ಮುಖ್ಯಪ್ರಾಣರ ದರ್ಶನ ಪಡೆಯಲಿದ್ದಾರೆ. ಬಳಿಕ ಶ್ರೀಮಠವನ್ನು ಪ್ರವೇಶಿಸಲಿರುವ ಉಭಯ ಶ್ರೀಗಳು ರಥಬೀದಿಯ ‘ಆನಂದತೀರ್ಥ’ ವೇದಿಕೆಯಲ್ಲಿ ಸಂಜೆ 7 ಗಂಟೆಗೆ ಪೌರಸಮ್ಮಾನ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

3 days ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

3 days ago