Featured

ಉಡುಪಿ : ಜ.8 ರಂದು ಪುತ್ತಿಗೆ ಶ್ರೀಗಳ ಪುರಪ್ರವೇಶ ಮೆರವಣಿಗೆ – vishwanews24

ಉಡುಪಿ : ಜ.8 ರಂದು ಪುತ್ತಿಗೆ ಶ್ರೀಗಳ ಪುರಪ್ರವೇಶ ಮೆರವಣಿಗೆ

ಉಡುಪಿ : ಪೊಡವಿಗೊಡೆಯ ಅನ್ನಬ್ರಹ್ಮ ಶ್ರೀಕೃಷ್ಣ ಮತ್ತು ಶ್ರೀ ಮುಖ್ಯಪ್ರಾಣ ದೇವರ ಪೂಜಾ ದ್ವೈವಾರ್ಷಿಕ ಪರ್ಯಾಯದ 502 ನೇ ವರ್ಷದ ಶುಭಸಂದರ್ಭದಲ್ಲಿ ಶ್ರೀ ಪುತ್ತಿಗೆ ಉಪೇಂದ್ರತೀರ್ಥ ಸಂಸ್ಥಾನದ ಮಠಾಧೀಶರಾದ ಶ್ರೀ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ತಮ್ಮ ಶಿಷ್ಯ ಶ್ರೀ ಶ್ರೀ ಸುಶ್ರೀಂದ್ರತೀರ್ಥ ಶ್ರೀಪಾದಂಗಳವರೊಡಗೂಡಿ ಶ್ರೀ ಮಧ್ವ ವಾದಿರಾಜರ ಸತ್ಸಂಪ್ರದಾಯದಂತೆ ಚತುರ್ಥ ಬಾರಿಗೆ ಜನವರಿ 18 ರ ಬೆಳಿಗ್ಗೆ ಸರ್ವಜ್ಞಪೀಠಾರೋಹಣ ಮಾಡಲಿದ್ದಾರೆ. ಆ ಪ್ರಯುಕ್ತ ಸ್ವಾಮೀಜಿಯವರು ಪರ್ಯಾಯ ಪೂರ್ವಭಾವಿಯಾಗಿ ದೇಶ-ವಿದೇಶಗಳಲ್ಲಿ ಸಂಚರಿಸಿ, ಪ್ರಸಿದ್ಧ 48 ತೀರ್ಥಕ್ಷೇತ್ರಗಳ ಮಂಡಲಯಾತ್ರೆ ಪೂರೈಸಿ ಜನವರಿ 8 ಸೋಮವಾರ ಉಡುಪಿಗೆ ಪುರಪ್ರವೇಶಗೈಯಲಿದ್ದಾರೆ.

ಸಾಂಪ್ರದಾಯಿಕ ಮೆರವಣಿಗೆ: ಜನವರಿ 8 ರಂದು ಅಪರಾಹ್ನ 3.30 ಗಂಟೆಗೆ ಜೋಡುಕಟ್ಟೆಯಿಂದ ಸಾಂಪ್ರದಾಯಿಕ ಮೆರವಣಿಗೆಯ ಮೂಲಕ ಶ್ರೀಮಠದ ಸಕಲ ಗೌರವಗಳೊಂದಿಗೆ ಶ್ರೀಪಾದರನ್ನು ಬರಮಾಡಿಕೊಳ್ಳಲಾಗುವುದು. ಪುರಪ್ರವೇಶ ಮೆರವಣಿಗೆಯು ಜೋಡುಕಟ್ಟೆ-ಕೆ.ಎಂ. ಮಾರ್ಗ-ತ್ರಿವೇಣಿ ವೃತ್ತ-ಸಂಸ್ಕೃತ ಕಾಲೇಜು ರಸ್ತೆ-ರಥಬೀದಿಯಾಗಿ ಸಾಗಿಬರಲಿದೆ. ಬಳಿಕ ಉಭಯ ಶ್ರೀಗಳು ಶ್ರೀ ಚಂದ್ರಮೌಳೀಶ್ವರ, ಶ್ರೀ ಅನಂತೇಶ್ವರ, ಶ್ರೀ ಕೃಷ್ಣ ಮುಖ್ಯಪ್ರಾಣರ ದರ್ಶನ ಪಡೆಯಲಿದ್ದಾರೆ. ಬಳಿಕ ಶ್ರೀಮಠವನ್ನು ಪ್ರವೇಶಿಸಲಿರುವ ಉಭಯ ಶ್ರೀಗಳು ರಥಬೀದಿಯ ‘ಆನಂದತೀರ್ಥ’ ವೇದಿಕೆಯಲ್ಲಿ ಸಂಜೆ 7 ಗಂಟೆಗೆ ಪೌರಸಮ್ಮಾನ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

Vishwa News 24

Recent Posts

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

3 hours ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

3 hours ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

3 hours ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

3 hours ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

4 hours ago

ಭಾರತೀಯ ಸೇನಾ ಪಡೆಗಳ ನೂತನ ಮುಖ್ಯಸ್ಥರಾಗಿ ಲೆಫ್ಟಿನೆಂಟ್ ಜನರಲ್ ರಾಜಾ ಸುಬ್ರಮಣಿ ನೇಮಕ – VISHWAEWS24

ಭಾರತೀಯ ಸೇನಾ ಪಡೆಗಳ ನೂತನ ಮುಖ್ಯಸ್ಥರಾಗಿ ಲೆಫ್ಟಿನೆಂಟ್ ಜನರಲ್ ರಾಜಾ ಸುಬ್ರಮಣಿ ನೇಮಕ ಹೊಸದಿಲ್ಲಿ: ಲೆಫ್ಟಿನೆಂಟ್ ಜನರಲ್ (ನಿವೃತ್ತ) ಎನ್.ಎಸ್.…

4 hours ago