ಉಡುಪಿ, : ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ, ಕೋಟಿ ಚೆನ್ನಯ್ಯ ಥೀಂ ಪಾರ್ಕ್ ಅಭಿವೃದ್ಧಿ ಸಮಿತಿ ಹಾಗೂ ಯಕ್ಷ ರಂಗಾಯಣ ಕಾರ್ಕಳ ಇವರ ಸಂಯುಕ್ತ ಆಶ್ರಯದಲ್ಲಿ ಯಕ್ಷ ರಂಗಾಯಣದ ಪರಶುರಾಮ ನಾಟಕದ ಪ್ರಥಮ ಪ್ರದರ್ಶನವು ಜನವರಿ 9 ರಿಂದ 11 ರ ವರೆಗೆ ಕಾರ್ಕಳ ಕೋಟಿ ಚೆನ್ನಯ್ಯ ಥೀಂ ಪಾರ್ಕ್ ವನರಂಗ ವೇದಿಕೆಯಲ್ಲಿ ನಡೆಯಲಿದೆ.
ಜ. 9 ರಂದು ಸಂಜೆ 6 ಗಂಟೆಗೆ ರಾಜ್ಯದ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ವಿ.ಸುನಿಲ್ ಕುಮಾರ್ ಅವರು ನಾಟಕೋತ್ಸವವನ್ನು ಉದ್ಘಾಟಿಸಲಿದ್ದು, ಯಕ್ಷ ರಂಗಾಯಣ ನಿರ್ದೇಶಕ ಡಾ. ಜೀವನ್ ರಾಂ ಸುಳ್ಯ ಅಧ್ಯಕ್ಷತೆ ವಹಿಸಲಿದ್ದಾರೆ. ಮೂಡಬಿದಿರೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ್ ಆಳ್ವ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಂಟಿ ನಿರ್ದೇಶಕ ವಿ.ಎನ್ ಮಲ್ಲಿಕಾರ್ಜನ ಸ್ವಾಮಿ, ನಾಟಕಕಾರ ಶಶಿರಾಜ್ ಕಾವೂರು ಭಾಗವಹಿಸಲಿದ್ದಾರೆ.
ಅಂದು ಸಂಜೆ 6.35 ರಿಂದ ಯಕ್ಷ ರಂಗಾಯಣ ಕಾರ್ಕಳ ಸಂಚಾರಿ ರಂಗ ತಂಡ ಅಭಿನಯಿಸುವ ಪರಶುರಾಮ ನಾಟಕದ ಪ್ರಥಮ ಪ್ರದರ್ಶನ ನಡೆಯಲಿದ್ದು, ಶಶಿರಾಜ್ ರಾವ್ ಕಾವೂರು ರಚಿಸಿದ್ದು, ಡಾ.ಜೀವನ್ ರಾಂ ಸುಳ್ಯ ನಿರ್ದೇಶಿಸಿದ್ದಾರೆ. ಜ. 10 ರಂದು ಸಂಜೆ 6.30 ಕ್ಕೆ ರಂಗಾಯಣ ಶಿವಮೊಗ್ಗ ಅಭಿನಯಿಸುವ ಸ್ವಾತಂತ್ರ್ಯ ಸಂಗ್ರಾಮದ ನೈಜಕತೆಯಾಧಾರಿತ, ಡಾ.ಸಾಸ್ವೆಹಳ್ಳಿ ಸತೀಶ್ ರಚಿಸಿದ, ಶ್ರೀಪಾದ ಮತ್ತು ಶಿವಶಂಕರ ತೀರ್ಥಹಳ್ಳಿ ನಿರ್ದೇಶನದ ಈಸೂರು ಕೊಡೆವು ನಾಟಕ ಪ್ರದರ್ಶನಗೊಳ್ಳಲಿದೆ.
ಜ.11 ರಂದು ಸಂಜೆ 6.30 ಕ್ಕೆ ಶಿವಮೊಗ್ಗ ರಂಗಾಯಣ ಅಭಿನಯಿಸುವ, ನಾ.ಡಿಸೋಜಾ ಅವರ ಕಾದಂಬರಿ ಹಾಗೂ ಎಸ್ ಮಾಲತಿಯವರ ಹಕ್ಕಿ ಕತೆ ಪ್ರದರ್ಶನಗೊಳ್ಳಿದೆ. ಈ ನಾಟಕವನ್ನು ಗಣೇಶ್ ಮಂದಾರ್ತಿ ಮತ್ತು ಶ್ರವಣ್ ಹೆಗ್ಗೋಡು ನಿರ್ದೇಶಿಸಿದ್ದು, ನಾಟಕೋತ್ಸವಕ್ಕೆ ಪ್ರವೇಶ ಉಚಿತವಾಗಿರುತ್ತದೆ. ಬೈಲೂರಿನಲ್ಲಿ ಲೋಕಾರ್ಪಣೆಗೊಳ್ಳಿರುವ ಪರಶುರಾಮ ಥೀಂ ಪಾರ್ಕ್ ಗೆ ಪೂರಕವಾಗಿ ಪರಶುರಾಮ ನಾಟಕವನ್ನು ರಾಜ್ಯದ ಎಲ್ಲ ಜಿಲ್ಲೆಗಳಲ್ಲೂ ಪ್ರದರ್ಶನ ನಡೆಸಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…