ಉಡುಪಿ : ಟಿಕೆಟ್ ಇಲ್ಲದೇ ರೈಲು ಹತ್ತಿದ ಕೆಲ ಪ್ರಯಾಣಿಕರು ಜೈಲು ಪಾಲಾಗಿರುವ ಘಟನೆ ಉಡುಪಿಯಲ್ಲಿ ನಡೆದಿದೆ.
ಜುನೈದ್ (24), ಸುಜಿತ್ (23), ವಿಷ್ಣು (25), ಯುನಿಸ್ (24) ಮತ್ತು ಮಿಸಾಬ್ (24) ಅವರು ಟಿಕೆಟ್ ಇಲ್ಲದೆ ಕೇರಳದಿಂದ 12620 ನಂಬರ್ ಹೊಂದಿರುವ ಗೋವಾಗೆ ಹೋಗುವ ಮತ್ಸ್ಯಗಂಧ ಎಕ್ಸ್ಪ್ರೆಸ್ಗೆ ಹತ್ತಿದ್ದು, ರೈಲು ಉಡುಪಿ ತಲುಪಿದಾಗ ಟಿಕೆಟ್ ಪರೀಕ್ಷಕರು ಟಿಕೆಟ್ ಕೇಳಿದಾಗ ಈ ಪ್ರಯಾಣಿಕರು ಅಸಡ್ಡೆ ಉತ್ತರ ನೀಡಿದ್ದಾರೆ.
ರೈಲ್ವೇ ರಕ್ಷಣಾ ಪಡೆ ಸಬ್ ಇನ್ಸ್ಪೆಕ್ಟರ್ ಸುಧೀರ್ ಶೆಟ್ಟಿ ಹಾಗೂ ಸಿಬ್ಬಂದಿ ಜೀನ ಪಿಂಟೋ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಉಡುಪಿ ಜೆಎಂಎಫ್ಸಿ ನ್ಯಾಯಾಲಯ ಆರೋಪಿಗೆ ತಲಾ ಒಂದು ತಿಂಗಳ ಜೈಲು ಶಿಕ್ಷೆ ಹಾಗೂ ತಲಾ 1000 ರೂ. ದಂಡ ವಿಧಿಸಿದ್ದು, ದಂಡದ ಮೊತ್ತವನ್ನು ಪಾವತಿಸಲು ವಿಫಲವಾದರೆ ಜೈಲು ಶಿಕ್ಷೆಯನ್ನು ಎರಡು ತಿಂಗಳು ವಿಸ್ತರಿಸಲಾಗುವುದು ಎಂದು ನ್ಯಾಯಾಲಯ ತೀರ್ಪು ನೀಡಿದೆ.
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…
ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…
ಟೈಮಿಂಗ್ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್ಪ್ರೆಸ್ ಬಸ್ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…