Featured

ಉಡುಪಿ: ಟಿಪ್ಪರ್ ಹಾಗೂ ಬೈಕ್ ನಡುವೆ ಅಪಘಾತ ; ಸಹಸವಾರ ಮೃತ್ಯು, ಸವಾರ ಗಂಭೀರ ಗಾಯ – vishwanews24

ಉಡುಪಿ: ಟಿಪ್ಪರ್ ಹಾಗೂ ಬೈಕ್ ನಡುವೆ ಅಪಘಾತ ; ಸಹಸವಾರ ಮೃತ್ಯು, ಸವಾರ ಗಂಭೀರ ಗಾಯ

ಉಡುಪಿ : ಟಿಪ್ಪರ್ ಹಾಗೂ ಬೈಕ್ ನಡುವಿನ ಅಪಘಾತದಲ್ಲಿ ಸಹಸವಾರ ಮೃತಪಟ್ಟು, ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಅಲೆವೂರು- ಮಣಿಪಾಲ ರಸ್ತೆಯ ಶಾಂತಿನಗರದ ಬಳಿಯ ತಿರುವಿನಲ್ಲಿ ಸಂಭವಿಸಿದೆ.

ಜನಾರ್ಧನ ಮೃತ ಸಹಸವಾರ. ಹಾಗೂ ಗಂಭೀರವಾಗಿ ಗಾಯಗೊಂಡ ಬೈಕ್ ಸವಾರ ಸಂತೋಷ್ ಅವರು ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಅಲೆವೂರು ಕಡೆಯಿಂದ ಮಣಿಪಾಲ ಕಡೆಗೆ ಹೋಗುತ್ತಿದ್ದ ಮರಳು ಸಾಗಾಟದ ಟಿಪ್ಪರ್, ಅಲೆವೂರು ಕಡೆಯಿಂದ ಮಣಿಪಾಲ ಕಡೆಗೆ ಬರುತ್ತಿದ್ದ ಬೈಕಿಗೆ ಢಿಕ್ಕಿ ಹೊಡೆದಿದೆ. ಪರಿಣಾಮ ಬೈಕಿನಲ್ಲಿದ್ದ ಸವಾರರು ರಸ್ತೆಗೆ ಬಿದ್ದಿದ್ದಾರೆ ಎನ್ನಲಾಗಿದೆ. ಇದರಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಜನಾರ್ದನ್ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇನ್ನು ಘಟನೆಗೆ ಕಾರಣವಾದ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಟಿಪ್ಪರನ್ನು ಮಣಿಪಾಲ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಮಹಜರು ನಡೆಸಲು ತೆರಳಿದ ವೇಳೆ ಟಿಪ್ಪರ್ ವಾಹನದಲ್ಲಿ ಸುಮಾರು 2.5 ಯುನಿಟ್ ಮರಳು ಇರುವುದು ಕಂಡು ಬಂದಿದೆ. ಟಿಪ್ಪರ್ ಚಾಲಕ ಹಾಗೂ ಮಾಲಕ ಸೇರಿಕೊಂಡು ಯಾವುದೇ ಪರವಾನಿಗೆ ಪಡೆದುಕೊಳ್ಳದೇ ಅಕ್ರಮ ವಾಗಿ ಮರಳು ಸಾಗಾಟ ಮಾಡುತ್ತಿದ್ದುದು ತಿಳಿದುಬಂದಿದೆ.

ಅಲೆವೂರು-ಮಣಿಪಾಲ ಭಾಗದಲ್ಲಿ ರಾತ್ರಿ ವೇಳೆ ಅಕ್ರಮ ಮರಳು ಸಾಗಾಟದ ಟಿಪ್ಪರ್ ವಾಹನಗಳು ಎಗ್ಗಿಲ್ಲದೆ ಸಂಚಾರ ಮಾಡುತ್ತಿದ್ದು, ಇತರ ವಾಹನಗಳ ಸಂಚಾರ ಕಷ್ಟಕರ ವಾಗುತ್ತಿದೆ. ತಿರುವುಗಳಿಂದ ಕೂಡಿದ ಈ ರಸ್ತೆಯಲ್ಲಿ ಮರಳು ಸಾಗಾಟದ ವಾಹನಗಳು ವೇಗವಾಗಿ ಸಂಚರಿಸುತ್ತಿದ್ದು, ಪೊಲೀಸರು ಹಾಗೂ ಗಣಿ ಇಲಾಖೆಯವರು ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.

Vishwa News 24

Recent Posts

ಉಡುಪಿ : ಬಾಲಕಿ ನಾಪತ್ತೆ -vishwanews24

ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…

12 hours ago

ಮಂಗಳೂರು ವಿಮಾನ ನಿಲ್ದಾಣದಲ್ಲಿ ‘ಉಬರ್’ ಸೇವೆ ಆರಂಭ -vishwanews24

ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…

16 hours ago

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ -vishwanews24

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…

18 hours ago

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ -vishwanews24

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…

19 hours ago

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ -vishwanews24

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…

20 hours ago

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ -vishwanews24

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…

20 hours ago