ಉಡುಪಿ: ಟಿಪ್ಪು ಜಯಂತಿ ಬದಲು ಯಡಿಯೂರಪ್ಪ ಸರ್ಕಾರ ಸಂತ ಶಿಶುನಾಳ ಶರೀಫರ ಜಯಂತಿ ಆಚರಿಸಲು ಚಿಂತನೆ ನಡೆಸಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಸಿ.ಟಿ.ರವಿ ಮಾಹಿತಿ ನೀಡಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಶಿಶುನಾಳ ಶರೀಫರ ಜಯಂತಿ ಆಚರಣೆ ಮಾಡುವ ಬಗ್ಗೆ ನನಗೆ ಅಪೇಕ್ಷೆ ಇದೆ. ಶಿಶುನಾಳ ಶರೀಫರು ಹಿಂದೂ ಮುಸಲ್ಮಾನರು ಒಪ್ಪಿಕೊಂಡ ವ್ಯಕ್ತಿ. ಎರಡೂ ಧರ್ಮ ಖುಷಿ ಪಡುವ ಆಚರಣೆ ಇದಾಗಬಹುದು. ಡಾ.ಎಪಿಜೆ ಅಬ್ದುಲ್ ಕಲಾಂ ಜಯಂತಿಯನ್ನೂ ಮಾಡಬಹುದು. ಕಲಾಂ ದೇಶದ ವಿದ್ಯಾರ್ಥಿಗಳಿಗೆ ಪ್ರೇರಣೆ ಕೊಟ್ಟ ವ್ಯಕ್ತಿ. ಮೊದಲು ರಾಜ್ಯಾದ್ಯಂತ ಎಲ್ಲ ಜಯಂತಿ ಆಚರಣೆಗಳ ಸ್ವರೂಪ ಸಂಗ್ರಹ ಮಾಡುತ್ತೇವೆ ಬಳಿಕ ಒಂದು ನಿರ್ಧಾರಕ್ಕೆ ಬರುತ್ತೇವೆ ಎಂದು ತಿಳಿಸಿದರು.
ನಮ್ಮ ದೇಶದಲ್ಲಿ ಎಲ್ಲ ಜಯಂತಿಗಳು ರಾಜಕೀಯಕರಣಗೊಳ್ಳುವುದರಿಂದ ಎಲ್ಲ ಪಕ್ಷಗಳ ನಾಯಕರ ಅಭಿಪ್ರಾಯ ಪಡೆಯುತ್ತೇನೆ. ನಂತರ ಕ್ಯಾಬಿನೆಟ್ನಲ್ಲಿ ನಿರ್ಧಾರ ತೆಗೆದುಕೊಳ್ಳುತ್ತೇವೆ. ಸಮಾಲೋಚನೆ ನಡೆಸಿಯೇ ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದು ಅವರು ಹೇಳಿದರು.
ಜಯಂತಿ ಆಚರಣೆಯ ಸ್ವರೂಪದ ಬಗ್ಗೆ ಎಲ್ಲಾ ಕಡೆಯಿಂದ ಅಭಿಪ್ರಾಯ ಸಂಗ್ರಹಿಸಿ ನಿರ್ಧಾರ ತೆಗೆದುಕೊಳ್ಳುತ್ತೇವೆ. ಎಲ್ಲಾ ಜಿಲ್ಲೆಗಳಿಂದ ಅಭಿಪ್ರಾಯ ಸಂಗ್ರಹಣೆ ಮಾಡುತ್ತೇವೆ. ನಮ್ಮ ದೇಶದಲ್ಲಿ ಎಲ್ಲವೂ ರಾಜಕೀಯಕರಣಗೊಳ್ಳುತ್ತದೆ. ಈ ಬಗ್ಗೆ ಎಲ್ಲಾ ಪಕ್ಷಗಳ ನಾಯಕರ ಅಭಿಪ್ರಾಯ ಪಡೆಯುತ್ತೇನೆ. ಕ್ಯಾಬಿನೆಟ್ನಲ್ಲಿ ನಿರ್ಧಾರ ತೆಗೆದುಕೊಳ್ಳುತ್ತೇವೆ. ಸಮಾಲೋಚನೆ ನಡೆಸಿಯೇ ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದರು.
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…
2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…